AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu: ರಾಮೇಶ್ವರಂನಲ್ಲಿ ಅಣ್ಣಾಮಲೈ ಅವರ ‘ಎನ್ ಮಣ್ಣ್ ಎನ್ ಮಕ್ಕಳ್’ ಪಾದಯಾತ್ರೆಗೆ ಅಮಿತ್ ಶಾ ಚಾಲನೆ

En Mann En Makkal padayatra: ಪ್ರಯಾಣದ ಯೋಜನೆಯ ಪ್ರಕಾರ, ರಾಮೇಶ್ವರಂನಿಂದ ಪ್ರಾರಂಭವಾಗುವ ಈ ಯಾತ್ರೆ ಜುಲೈ 28 ಮತ್ತು 29 ರಂದು ರಾಮನಾಥಪುರಂ ಜಿಲ್ಲೆಗೆ ತಲುಪುತ್ತದೆ. ಜುಲೈ 30 ರಂದು ಪರಮಕ್ಕುಡಿ, ಜುಲೈ 31 ರಂದು ತಿರುವಾಡನೈ ಮತ್ತು ಶಿವಗಂಗೈ ಬ್ಲಾಕ್, ಆಗಸ್ಟ್ 1 ರಂದು ತಿರುಪತ್ತೂರು ಮತ್ತು ಆಗಸ್ಟ್ 15 ರಂದು ಕನ್ಯಾಕುಮಾರಿ ತಲುಪಲಿದೆ.

Tamil Nadu: ರಾಮೇಶ್ವರಂನಲ್ಲಿ ಅಣ್ಣಾಮಲೈ ಅವರ ‘ಎನ್ ಮಣ್ಣ್ ಎನ್ ಮಕ್ಕಳ್’ ಪಾದಯಾತ್ರೆಗೆ ಅಮಿತ್ ಶಾ ಚಾಲನೆ
ಅಮಿತ್ ಶಾ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jul 28, 2023 | 8:10 PM

Share

ರಾಮೇಶ್ವರಂ ಜುಲೈ 28: ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ (K Annamalai) ಅವರ ‘ಎನ್ ಮಣ್ಣ್ ಎನ್ ಮಕ್ಕಳ್’ (En Mann En Makkal) ಯಾತ್ರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಶುಕ್ರವಾರ ರಾಮೇಶ್ವರಂನಲ್ಲಿ ಚಾಲನೆ ನೀಡಿದ್ದಾರೆ. ಈ ಯಾತ್ರೆಯ ಮೂಲಕ ಅಣ್ಣಾಮಲೈ ಅವರು 2024 ರ ಲೋಕಸಭೆಗೆ ಮುನ್ನ ರಾಜ್ಯದ ಎಲ್ಲಾ 39 ಲೋಕಸಭಾ ಕ್ಷೇತ್ರಗಳ ಮತದಾರರನ್ನು ತಲುಪಲಿದ್ದಾರೆ. ಅಣ್ಣಾಮಲೈ ಅವರು ಶನಿವಾರ ಬೆಳಗ್ಗೆ ರಾಮೇಶ್ವರಂ ರಾಮನಾಥ ಸ್ವಾಮಿ ದೇವಸ್ಥಾನದಿಂದ ಯಾತ್ರೆ ಆರಂಭಿಸಲಿದ್ದಾರೆ.

ಪ್ರಯಾಣದ ಯೋಜನೆಯ ಪ್ರಕಾರ, ರಾಮೇಶ್ವರಂನಿಂದ ಪ್ರಾರಂಭವಾಗುವ ಈ ಯಾತ್ರೆ ಜುಲೈ 28 ಮತ್ತು 29 ರಂದು ರಾಮನಾಥಪುರಂ ಜಿಲ್ಲೆಗೆ ತಲುಪುತ್ತದೆ. ಜುಲೈ 30 ರಂದು ಪರಮಕ್ಕುಡಿ, ಜುಲೈ 31 ರಂದು ತಿರುವಾಡನೈ ಮತ್ತು ಶಿವಗಂಗೈ ಬ್ಲಾಕ್, ಆಗಸ್ಟ್ 1 ರಂದು ತಿರುಪತ್ತೂರು ಮತ್ತು ಆಗಸ್ಟ್ 15 ರಂದು ಕನ್ಯಾಕುಮಾರಿ ತಲುಪಲಿದೆ. ಅಣ್ಣಾಮಲೈ ಅವರು ಯಾತ್ರೆಯ ಸಮಯದಲ್ಲಿ ವಿವಿಧ ಸ್ಥಳಗಳಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸ್ವಯಂಸೇವಕರು ಮತ್ತು ಸಾರ್ವಜನಿಕರನ್ನು ಭೇಟಿ ಮಾಡಲು ಕನ್ಯಾಕುಮಾರಿ ಜಿಲ್ಲೆಯಲ್ಲಿ 3 ದಿನಗಳ ಕಾಲ ಕಳೆಯಲಿದ್ದಾರೆ.

ಅಣ್ಣಾಮಲೈ ಅವರ ಈ ಪಾದಯಾತ್ರೆಯಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವುದನ್ನು ಖಚಿತಪಡಿಸಿದ್ದಾರೆ ಎಂದು ತಮಿಳುನಾಡು ಬಿಜೆಪಿಯ ಹಿರಿಯ ನಾಯಕರು ಹೇಳಿದ್ದಾರೆ. ಎಲ್ಲಾ 234 ವಿಧಾನಸಭಾ ಕ್ಷೇತ್ರಗಳು ಮತ್ತು 39 ಲೋಕಸಭಾ ಕ್ಷೇತ್ರಗಳನ್ನು ಐದು ಹಂತಗಳಲ್ಲಿ ಭೇಟಿ ನೀಡಲಾಗುವುದ. ಮುಂದಿನ ವರ್ಷದ ಜನವರಿ ಮಧ್ಯದಲ್ಲಿ ಯಾತ್ರೆಯು ಚೆನ್ನೈನಲ್ಲಿ ಕೊನೆಗೊಳ್ಳಲಿದೆ.

ಬಿಜೆಪಿಯ ರಾಜ್ಯ ಘಟಕವು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಸಾಧನೆಗಳ ಕುರಿತು 10 ಲಕ್ಷ ಪುಸ್ತಕಗಳನ್ನು ವಿತರಿಸಲು ಯೋಜಿಸಿದೆ. ಮುಂದಿನ 6 ತಿಂಗಳಲ್ಲಿ 11 ಮೆಗಾ ಸಾರ್ವಜನಿಕ ಕಾರ್ಯಕ್ರಮವನ್ನು ಆಯೋಜಿಸುತ್ತದೆ, ಇದರಲ್ಲಿ ರಾಷ್ಟ್ರೀಯ ನಾಯಕರು ಭಾಗವಹಿಸುತ್ತಾರೆ.

ಇದನ್ನೂ ಓದಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಪಾದಯಾತ್ರೆಯನ್ನು ಆರಂಭಿಸಲು ರಾಮೇಶ್ವರಂ ಆಯ್ಕೆ ಮಾಡಿದ್ದೇಕೆ?

ಏತನ್ಮಧ್ಯೆ, ‘ಯಾತ್ರೆಯು ಇಲ್ಲಿ ಯಾವುದೇ ವ್ಯತ್ಯಾಸವನ್ನು ಉಂಟುಮಾಡುವುದಿಲ್ಲ’ ಎಂದು ಡಿಎಂಕೆ ಹೇಳಿದೆ. 2024 ರ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ, ವಿಪಕ್ಷಗಳ ಒಕ್ಕೂಟವಾದ ಇಂಡಿಯಾ ತಮಿಳುನಾಡಿನಲ್ಲಿ ಮಾತ್ರವಲ್ಲದೆ ದೇಶದಾದ್ಯಂತ ಗಮನಾರ್ಹ ಗೆಲುವು ದಾಖಲಿಸುತ್ತದೆ. ಬಿಜೆಪಿಯ ವಿಭಜಕ ರಾಜಕಾರಣದ ನಿಜಬಣ್ಣವನ್ನು ಜನರು ಸ್ಪಷ್ಟವಾಗಿ ಅರ್ಥಮಾಡಿಕೊಂಡಿದ್ದಾರೆ ಎಂದು ಡಿಎಂಕೆ ಸಂಸದ ಟಿಆರ್ ಬಾಲು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ