AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amit Shah: ಪಂಚಕುಲದಲ್ಲಿ ಖೇಲೋ ಇಂಡಿಯಾ ಯೂತ್ ಗೇಮ್ಸ್​ಗೆ ಗೃಹ ಸಚಿವ ಅಮಿತ್ ಶಾ ಚಾಲನೆ

ಒಟ್ಟಾರೆಯಾಗಿ, 2,262 ಹುಡುಗಿಯರು ಸೇರಿದಂತೆ 4,700 ಅಥ್ಲೀಟ್‌ಗಳು 25 ಕ್ರೀಡೆಗಳಲ್ಲಿ 269 ಚಿನ್ನ, 269 ಬೆಳ್ಳಿ ಮತ್ತು 358 ಕಂಚಿನ ಪದಕಗಳಿಗಾಗಿ ಸ್ಪರ್ಧಿಸಲಿದ್ದಾರೆ. ಈ ಕ್ರೀಡಾ ಸ್ಪರ್ಧೆ ಇಂದು ಆರಂಭವಾಗಲಿದ್ದು, ಜೂನ್ 13ರವರೆಗೆ ನಡೆಯಲಿದೆ.

Amit Shah: ಪಂಚಕುಲದಲ್ಲಿ ಖೇಲೋ ಇಂಡಿಯಾ ಯೂತ್ ಗೇಮ್ಸ್​ಗೆ ಗೃಹ ಸಚಿವ ಅಮಿತ್ ಶಾ ಚಾಲನೆ
ಅಮಿತ್ ಶಾ
TV9 Web
| Updated By: ಸುಷ್ಮಾ ಚಕ್ರೆ|

Updated on: Jun 04, 2022 | 8:18 AM

Share

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಇಂದು (ಜೂನ್ 4) ಹರಿಯಾಣದ ಪಂಚಕುಲದಲ್ಲಿ ಖೇಲೋ ಇಂಡಿಯಾ ಯೂತ್ ಗೇಮ್ಸ್ 2021ರ (Khelo India Youth Games 2021) ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಭಾರತದ ಅತಿದೊಡ್ಡ ಕ್ರೀಡಾ ಸ್ಪರ್ಧೆ 2018ರಲ್ಲಿ ಕೇಂದ್ರ ಸರ್ಕಾರದಿಂದ ಪ್ರಾರಂಭವಾಯಿತು. ಈ ಕಾರ್ಯಕ್ರಮದಲ್ಲಿ ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ (Anurag Singh Thakur) ಮತ್ತು ಯುವ ವ್ಯವಹಾರ ಮತ್ತು ಕ್ರೀಡಾ ರಾಜ್ಯ ಸಚಿವ ನಿಸಿತ್ ಪ್ರಮಾಣಿಕ್ ಭಾಗವಹಿಸಲಿದ್ದಾರೆ.

ಹಾಗೇ, ಹರಿಯಾಣ ರಾಜ್ಯ ಕ್ರೀಡಾ ಸಚಿವ ಸಂದೀಪ್ ಸಿಂಗ್ ಸೇರಿದಂತೆ ಹರಿಯಾಣದ ಇತರ ಗಣ್ಯರು ಈ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಒಟ್ಟಾರೆಯಾಗಿ, 2,262 ಹುಡುಗಿಯರು ಸೇರಿದಂತೆ 4,700 ಅಥ್ಲೀಟ್‌ಗಳು 25 ಕ್ರೀಡೆಗಳಲ್ಲಿ 269 ಚಿನ್ನ, 269 ಬೆಳ್ಳಿ ಮತ್ತು 358 ಕಂಚಿನ ಪದಕಗಳಿಗಾಗಿ ಸ್ಪರ್ಧಿಸಲಿದ್ದಾರೆ. ಈ ಕ್ರೀಡಾ ಸ್ಪರ್ಧೆ ಇಂದು ಆರಂಭವಾಗಲಿದ್ದು, ಜೂನ್ 13ರವರೆಗೆ ನಡೆಯಲಿದೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಹೆಚ್ಚಿದ ಟಾರ್ಗೆಟ್ ಹತ್ಯೆ; ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಇಂದು ಮಹತ್ವದ ಸಭೆ

KIYG 2021ರಲ್ಲಿ ಭಾರತದ 37 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಸ್ಪರ್ಧಿಗಳು ಭಾಗವಹಿಸಲಿದ್ದಾರೆ. ಇದು 5 ನಗರಗಳಲ್ಲಿ (ಪಂಚಕುಲ, ಶಹಬಾದ್, ಅಂಬಾಲಾ, ಚಂಡೀಗಢ ಮತ್ತು ದೆಹಲಿ) ನಡೆಯಲಿದೆ. ಈ ಸ್ಪರ್ಧೆ ಒಟ್ಟು 25 ಕ್ರೀಡೆಗಳನ್ನು ಒಳಗೊಂಡಿರುತ್ತವೆ. ಇದರಲ್ಲಿ ಭಾರತದ 5 ಸ್ಥಳೀಯ ಆಟಗಳಾದ ಕಲರಿಪಯಟ್ಟು, ತಂಗ್-ಟಾ, ಗಟ್ಕಾ, ಮಲ್ಲಕಂಬ ಮತ್ತು ಯೋಗಾಸನ ಕೂಡ ಇರಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?