AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amit Shah: ಲೋಕಸಭೆ ಚುನಾವಣೆಯಲ್ಲಿ ನಮಗೆ 35 ಸ್ಥಾನ ನೀಡಿ, ಮಮತಾ ಸರ್ಕಾರ ಪತನವಾಗಲಿದೆ; ಬಂಗಾಳದಲ್ಲಿ ಅಮಿತ್ ಶಾ

ಲೋಕಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಇರುವಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಶ್ಚಿಮ ಬಂಗಾಳದಲ್ಲಿ ಪ್ರಚಾರದ ಕಹಳೆ ಮೊಳಗಿಸಿದ್ದಾರೆ. 2024ರ ಲೋಕಚಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ 42 ಲೋಕಸಭಾ ಕ್ಷೇತ್ರಗಳ ಪೈಕಿ 35ರಲ್ಲಿ ಗೆಲುವು ಸಾಧಿಸುವ ಗುರಿಯನ್ನೂ ಅವರು ಹಾಕಿಕೊಂಡಿದ್ದಾರೆ.

Amit Shah: ಲೋಕಸಭೆ ಚುನಾವಣೆಯಲ್ಲಿ ನಮಗೆ 35 ಸ್ಥಾನ ನೀಡಿ, ಮಮತಾ ಸರ್ಕಾರ ಪತನವಾಗಲಿದೆ; ಬಂಗಾಳದಲ್ಲಿ ಅಮಿತ್ ಶಾ
ಸಾಂದರ್ಭಿಕ ಚಿತ್ರ
Ganapathi Sharma
|

Updated on: Apr 15, 2023 | 12:01 PM

Share

ಕೋಲ್ಕತ್ತ: ಲೋಕಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಇರುವಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಪಶ್ಚಿಮ ಬಂಗಾಳದಲ್ಲಿ ಪ್ರಚಾರದ ಕಹಳೆ ಮೊಳಗಿಸಿದ್ದಾರೆ. 2024ರ ಲೋಕಚಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ (West Bengal) 42 ಲೋಕಸಭಾ ಕ್ಷೇತ್ರಗಳ ಪೈಕಿ 35ರಲ್ಲಿ ಗೆಲುವು ಸಾಧಿಸುವ ಗುರಿಯನ್ನೂ ಅವರು ಹಾಕಿಕೊಂಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ 18 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಭೀರ್​​ಭೂಮ್ ಜಿಲ್ಲೆಯ ಸೂರಿಯಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಅವರ ಅಳಿಯ, ತೃಣಮೂಲ ಕಾಂಗ್ರೆಸ್​ನ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಅಭಿಷೇಕ್ ಬ್ಯಾನರ್ಜಿ ಹಾಗೂ ಟಿಎಂಸಿಯ ಬೀರ್​ಭೂಮ್ ಜಿಲ್ಲಾ ಘಟಕದ ಅಧ್ಯಕ್ಷ ಅನುಬ್ರತಾ ಮೊಂಡನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಜಾನುವಾರು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದಿಂದ (ಇಡಿ) ಬಂಧನಕ್ಕೊಳಗಾಗಿರುವ ಮೊಂಡಲ್ ಸದ್ಯ ಜೈಲಿನಲ್ಲಿದ್ದಾರೆ. ಅವರ ಅನುಪಸ್ಥಿತಿಯನ್ನು ರಾಜಕೀಯವಾಗಿ ಬಳಸಿಕೊಳ್ಳಲು ಬಿಜೆಪಿ ಯೋಜಿಸಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: Narendra Modi: ಸಮಾವೇಶಗಳಿಂದಷ್ಟೇ ಹವಾಮಾನ ಬದಲಾವಣೆ ವಿರುದ್ಧ ಹೋರಾಟ ಅಸಾಧ್ಯ, ಸಾಮೂಹಿಕ ಶ್ರಮ ಅಗತ್ಯ; ಪ್ರಧಾನಿ ಮೋದಿ

‘ದೀದಿ (ಮಮತಾ ಬ್ಯಾನರ್ಜಿ) ಮತ್ತು ಭತಿಜಾ (ಅಭಿಷೇಕ್ ಬ್ಯಾನರ್ಜಿ) ಅವರ ದುರಾಡಳಿತದಿಂದ ರಾಜ್ಯದ ಜನತೆ ಬೇಸತ್ತಿದ್ದಾರೆ. ಪಶ್ಚಿಮ ಬಂಗಾಳಕ್ಕೆ ಉತ್ತಮ ಆಡಳಿತ ನೀಡಲು ಬಿಜೆಪಿಯೇ ಅನಿವಾರ್ಯ. ನಾವು ಜಾನುವಾರು ಕಳ್ಳಸಾಗಣೆಯನ್ನು ನಿಲ್ಲಿಸಿದ್ದೇವೆ. ನೀವು ಬಂಗಾಳದಲ್ಲಿ ಒಳನುಸುಳುವಿಕೆ ಮುಂದುವರಿಯುದನ್ನು ಆಶಿಸುತ್ತೀರಾ? ಇದನ್ನು ತಡೆಯಬೇಕಿದ್ದರೆ ಒಂದೇ ದಾರಿ, ಅದು ಬಿಜೆಪಿಗೆ ಮತ ನೀಡುವುದು’ ಎಂದು ಶಾ ಹೇಳಿದ್ದಾರೆ.

‘2024ರ ಲೋಕಸಭೆ ಚುನಾವಣೆಯಲ್ಲಿ ನಮಗೆ 35 ಸ್ಥಾನಗಳನ್ನು ನೀಡಿ. ಮಮತಾ ಬ್ಯಾನರ್ಜಿ ಸರ್ಕಾರ ಪತನವಾಗಲಿದೆ. ಬಂಗಾಳದಲ್ಲಿ ಭ್ರಷ್ಟಾಚಾರ ಇದೆ. ಬಿಜೆಪಿ ಮಾತ್ರ ಅದನ್ನು ತಡೆಯಬಲ್ಲದು’ ಎಂದು ಶಾ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!