AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ ಆಕ್ರಮಿತ ಕಾಶ್ಮೀರ ನಮ್ಮದು, ಆ ಭೂಪ್ರದೇಶಕ್ಕೆ 24 ಸ್ಥಾನಗಳನ್ನು ಮೀಸಲು: ಅಮಿತ್ ಶಾ

ಲೋಕಸಭೆಯಲ್ಲಿ ಮಸೂದೆ ಮಂಡಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹೊಸ ಮಸೂದೆಯಲ್ಲಿ, ಪಿಒಕೆಗೆ ಸ್ಥಳಾಂತರಗೊಂಡವರಿಗೆ ಒಂದು ಅಸೆಂಬ್ಲಿ ಸ್ಥಾನವನ್ನು ಮತ್ತು ಕಾಶ್ಮೀರದಿಂದ ಹೊರಗೆ ನೆಲೆಸಿರುವವರಿಗೆ ಎರಡು ಸ್ಥಾನಗಳನ್ನು ಮೀಸಲಿಡಲಾಗಿದೆ. ಕಾಯ್ದಿರಿಸಿದ ಸ್ಥಾನಕ್ಕೆ ಪಿಒಕೆಯಿಂದ ಒಬ್ಬ ಪ್ರತಿನಿಧಿಯನ್ನು ನಾಮನಿರ್ದೇಶನ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರ ನಮ್ಮದು, ಆ ಭೂಪ್ರದೇಶಕ್ಕೆ 24 ಸ್ಥಾನಗಳನ್ನು ಮೀಸಲು: ಅಮಿತ್ ಶಾ
ಅಮಿತ್ ಶಾ
Follow us
ರಶ್ಮಿ ಕಲ್ಲಕಟ್ಟ
|

Updated on: Dec 06, 2023 | 8:00 PM

ದೆಹಲಿ ಡಿಸೆಂಬರ್  06: ‘ಪಾಕಿಸ್ತಾನ ಆಕ್ರಮಿತ ಕಾಶ್ಮೀರ ನಮ್ಮದು’ ಆ ಪ್ರದೇಶಕ್ಕೆ 24 ಸ್ಥಾನಗಳನ್ನು ಮೀಸಲಿಡಲಾಗಿದೆ ಎಂದು ಲೋಕಸಭೆಯಲ್ಲಿ (Lok Sabha) ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ವಿಧೇಯಕವನ್ನು(Jammu and Kashmir Reorganisation Bill) ಮಂಡಿಸಿದ ಗೃಹ ಸಚಿವ ಅಮಿತ್ ಶಾ (Amit Shah) ಬುಧವಾರ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಮಸೂದೆಗಳ ಕುರಿತು ಲೋಕಸಭೆಯಲ್ಲಿ ಮಾತನಾಡಿದ ಅಮಿತ್ ಶಾ ಭಯೋತ್ಪಾದನೆಯ ಹಾವಳಿಯಿಂದಾಗಿ ಜಮ್ಮು ಮತ್ತು ಕಾಶ್ಮೀರವನ್ನು ತೊರೆಯಬೇಕಾದವರನ್ನು ಈ ಮಸೂದೆಗಳು ಬಲಪಡಿಸುತ್ತವೆ ಎಂದಿದ್ದಾರೆ. ಕಾಶ್ಮೀರದಲ್ಲಿ ಭಯೋತ್ಪಾದಕ ಬೆದರಿಕೆಗಳಿಂದಾಗಿ ಈ ಪ್ರದೇಶದಲ್ಲಿ ಒಟ್ಟು 1,57,967 ಜನರು ತಮ್ಮ ಮನೆಗಳಿಂದ ಸ್ಥಳಾಂತರಗೊಂಡು ದೇಶದ ಇತರ ಭಾಗಗಳಲ್ಲಿ ನೆಲೆಸಬೇಕಾಯಿತು. ಪಾಕಿಸ್ತಾನದೊಂದಿಗಿನ ಮೊದಲ ಯುದ್ಧದ ನಂತರ ಪಾಕ್ ಆಕ್ರಮಿತ ಕಾಶ್ಮೀರದಿಂದ 31,000 ಕ್ಕೂ ಹೆಚ್ಚು ಕುಟುಂಬಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ನೆಲೆಸಿದವು ಎಂದಿದ್ದಾರೆ.

ಹೊಸ ಮಸೂದೆಯಲ್ಲಿ, ಪಿಒಕೆಗೆ ಸ್ಥಳಾಂತರಗೊಂಡವರಿಗೆ ಒಂದು ಅಸೆಂಬ್ಲಿ ಸ್ಥಾನವನ್ನು ಮತ್ತು ಕಾಶ್ಮೀರದಿಂದ ಹೊರಗೆ ನೆಲೆಸಿರುವವರಿಗೆ ಎರಡು ಸ್ಥಾನಗಳನ್ನು ಮೀಸಲಿಡಲಾಗಿದೆ. ಕಾಯ್ದಿರಿಸಿದ ಸ್ಥಾನಕ್ಕೆ ಪಿಒಕೆಯಿಂದ ಒಬ್ಬ ಪ್ರತಿನಿಧಿಯನ್ನು ನಾಮನಿರ್ದೇಶನ ಮಾಡಲಾಗುತ್ತದೆ. ಇದು ವಿಧಾನಸಭೆಯಲ್ಲಿ ನಾಮನಿರ್ದೇಶಿತ ಸ್ಥಾನಗಳನ್ನು ಹಿಂದಿನ ಮೂರರಿಂದ ಐದಕ್ಕೆ ಹೆಚ್ಚಿಸಿದೆ ಎಂದು ಹೇಳಿದ್ದಾರೆ.

ಜಮ್ಮು ಪ್ರದೇಶದ ವಿಧಾನಸಭಾ ಸ್ಥಾನಗಳು 37 ರಿಂದ 43 ಕ್ಕೆ ಏರಿದೆ. ಕಾಶ್ಮೀರದಲ್ಲಿ ಕ್ಷೇತ್ರಗಳ ಸಂಖ್ಯೆಯನ್ನು 46 ರಿಂದ 47 ಕ್ಕೆ ಏರಿಸಲಾಗಿದೆ. ಕಳೆದ 70 ವರ್ಷಗಳಿಂದ ಈ ಪ್ರದೇಶದಲ್ಲಿ ಭಯೋತ್ಪಾದನೆಯಿಂದ ವಂಚಿತರಾದವರಿಗೆ ನ್ಯಾಯ ಮತ್ತು ಪರಿಹಾರವನ್ನು ಒದಗಿಸಲು ಸಮತೋಲಿತ ರೀತಿಯಲ್ಲಿ ಡಿಲಿಮಿಟೇಶನ್ ಮಸೂದೆಯನ್ನು ರೂಪಿಸಲಾಗಿದೆ.

ಇದನ್ನೂ ಓದಿ: ಜ್ಯೋತಿಷಿ ಗಾಯತ್ರಿ ದೇವಿ ವಾಸುದೇವ್​ರಿಂದ ಲೋಕಸಭೆ ಚುನಾವಣೆ, ಪ್ರಧಾನಿ ಮೋದಿ ಬಗ್ಗೆ ಸೆನ್ಸೇಷನಲ್ ಭವಿಷ್ಯ

ಏತನ್ಮಧ್ಯೆ, ಲೋಕಸಭೆ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಿದೆ. ಕಾಶ್ಮೀರಿ ವಲಸಿಗ ಸಮುದಾಯದಿಂದ ಇಬ್ಬರು ಸದಸ್ಯರನ್ನು ಮತ್ತು ಪಾಕ್ ಆಕ್ರಮಿತ ಕಾಶ್ಮೀರದಿಂದ (ಪಿಒಕೆ) ಸ್ಥಳಾಂತರಗೊಂಡ ವ್ಯಕ್ತಿಗಳನ್ನು ಪ್ರತಿನಿಧಿಸುವ ಒಬ್ಬರನ್ನು ಶಾಸಕಾಂಗ ಸಭೆಗೆ ನಾಮನಿರ್ದೇಶನ ಮಾಡಲು ಇದು ಪ್ರಯತ್ನಿಸುತ್ತಿದೆ. ಲೋಕಸಭೆಯು ಜಮ್ಮು ಮತ್ತು ಕಾಶ್ಮೀರ ಮೀಸಲಾತಿ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಿದ್ದು, ಇದು ನೇಮಕಾತಿ ಮತ್ತು ಪ್ರವೇಶದಲ್ಲಿ ಕೋಟಾಕ್ಕೆ ಅರ್ಹರಾಗಿರುವ ಜನರ ನಾಮಕರಣವನ್ನು ಬದಲಾಯಿಸಲು ಸಹಾಯ ಮಾಡುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು