AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amit Shah Tirupati Visit: ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಅಮಿತ್ ಶಾ

ಕೇಂದ್ರ ಗೃಹ ಸಚಿವ ಅಮಿತ್ ಶಾ ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಅಮಿತ್ ಶಾ ಕುಟುಂಬ ಸಮೇತರಾಗಿ ಆಗಮಿಸಿದ್ದರು, ಮೊದಲು ರೇಣುಗುಂಟ ವಿಮಾನ ನಿಲ್ದಾಣಕ್ಕೆ ಬಂದಿಳಿದರು ರಸ್ತೆಯ ಮೂಲಕ ತಿರುಪತಿಗೆ ತಲುಪಿದರು. ಪ್ರಧಾನ ಅರ್ಚಕರು ವೈದಿಕ ಸ್ತೋತ್ರ ಪಠಣದ ನಡುವೆ ಅವರಿಗೆ ಸಾಂಪ್ರದಾಯಿಕ ಸ್ವಾಗತವನ್ನು ನೀಡಲಾಯಿತು.

ನಯನಾ ರಾಜೀವ್
|

Updated on: May 31, 2024 | 12:26 PM

Share

ಅಂತಿಮ ಹಂತದ ಲೋಕಸಭಾ ಚುನಾವಣೆ(Lok Sabha Election)ಗೆ ಅಬ್ಬರದ ಪ್ರಚಾರ ಮುಗಿಸಿರುವ ಗೃಹ ಸಚಿವ ಅಮಿತ್ ಶಾ(Amit Shah) ಇಂದು ತಿರುಪತಿಗೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಅಮಿತ್ ಶಾ ಕುಟುಂಬ ಸಮೇತರಾಗಿ ಆಗಮಿಸಿದ್ದರು, ಮೊದಲು ರೇಣುಗುಂಟ ವಿಮಾನ ನಿಲ್ದಾಣಕ್ಕೆ ಬಂದಿಳಿದರು ರಸ್ತೆಯ ಮೂಲಕ ತಿರುಪತಿಗೆ ತಲುಪಿದರು. ಪ್ರಧಾನ ಅರ್ಚಕರು ವೈದಿಕ ಸ್ತೋತ್ರ ಪಠಣದ ನಡುವೆ ಅವರಿಗೆ ಸಾಂಪ್ರದಾಯಿಕ ಸ್ವಾಗತವನ್ನು ನೀಡಲಾಯಿತು. ಒಂದೆಡೆ ಪ್ರಧಾನಿ ನರೇಂದ್ರ ಮೋದಿ ಕನ್ಯಾಕುಮಾರಿಗೆ ತೆರಳಿದ್ದು 48 ಗಂಟೆಗಳ ಕಾಲ ಧ್ಯಾನ ಮಾಡಲಿದ್ದಾರೆ.

ಅಮಿತ್ ಶಾ ಗಾಂಧಿನಗರದಿಂದ ಕಣಕ್ಕಿಳಿದಿದ್ದು ಅಲ್ಲಿ ಮತದಾನ ಮುಗಿದಿದೆ. 2024ರ ಲೋಕಸಭಾ ಚುನಾವಣೆಯ ಏಳನೇ ಹಾಗೂ ಕೊನೆಯ ಹಂತದ ಮತದಾನ ಜೂನ್​ 1ರಂದು ನಡೆಯಲಿದೆ. ಈ ಹಂತದಲ್ಲಿ 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿನ 57 ಸ್ಥಾನಗಳಿಗೆ ಮತದಾನ ನಡೆಯಲಿದೆ. ಅದೇ ದಿನ ಪಂಜಾಬ್​ ಹಾಗೂ ಹಿಮಾಚಲಪ್ರದೇಶದ ಎಲ್ಲಾ ಸ್ಥಾನಗಳಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.

ಮತ್ತಷ್ಟು ಓದಿ: Kanniyakumari: ವಿವೇಕಾನಂದ ರಾಕ್ ಸ್ಮಾರಕದಲ್ಲಿ ಪ್ರಧಾನಿ ಮೋದಿ ಧ್ಯಾನ , ಇಲ್ಲಿದೆ ಫೋಟೋ

ಈ ಹಂತದಲ್ಲಿ ಬಿಹಾರದ ಎಂಟು, ಚಂಡೀಗಢದ 1, ಹಿಮಾಚಲಪ್ರದೇಶದ 4, ಜಾರ್ಖಂಡ್​ನ 3, ಒಡಿಶಾಲದ 6, ಪಂಜಾಬ್​ನ 13, ಉತ್ತರ ಪ್ರದೇಶದ 13 ಮತ್ತು ಪಶ್ಚಿಮ ಬಂಗಾಳದ 9 ಸ್ಥಾನಗಳಿಗೆ ಮತದಾನ ನಡೆಯಲಿದೆ. ಈ ಹಂತದ ಚುನಾವಣೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ದೊಡ್ಡ ದೊಡ್ಡ ನಾಯಕರ ಭವಿಷ್ಯ ನಿರ್ಧಾರವಾಗಲಿದೆ.

ವಾರಾಣಸಿಯಿಂದ ಚುನಾವಣೆಗೆ ಸ್ಪರ್ಧಿಸತ್ತಿರುವ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್​ನ ಅಜಯ್​ ರೈ ಕಣದಲ್ಲಿದ್ದಾರೆ, ಹಿಮಾಚಲ ಪ್ರದೇಶದಿಂದ ಸ್ಪರ್ಧಿಸುತ್ತಿರುವ ನಟಿ ಕಂಗನಾ ರಣಾವತ್ ವಿರುದ್ಧ ಕಾಂಗ್ರೆಸ್​ನ ವಿಕ್ರಮಾದಿತ್ಯ ಸಿಂಗ್ ಕಣದಲ್ಲಿದ್ದಾರೆ. ಗೋರಖ್​ಪುರದಿಂದ ರವಿ ಕಿಶನ್ ಸ್ಪರ್ಧಿಸುತ್ತಿದ್ದಾರೆ ಅವರ ವಿರುದ್ಧ ಎಸ್​ಪಿಯ ಕಾಜಲ್ ನಿಶಾದ್ ಇದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ