AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CM Stalin: ಅಮಿತ್ ಶಾ ಇತರ ಭಾಷೆಗಳಿಗೆ ವಿಷವನ್ನು ನೀಡಿ, ಹಿಂದಿಗೆ ತಾಯಿಯ ಹಾಲುಣಿಸುತ್ತಿದ್ದಾರೆ: ಎಂಕೆ ಸ್ಟಾಲಿನ್

ಗೃಹ ಸಚಿವ ಅಮಿತ್ ಶಾ ಅವರು ಅಧ್ಯಕ್ಷ ದ್ರೌಪದಿ ಮುರ್ಮು ಅವರಿಗೆ ನೀಡಿದ ಅಧಿಕೃತ ಭಾಷೆಯ ಸಂಸತ್ ಸಮಿತಿಯ ವರದಿಯನ್ನು ಹೈಲೈಟ್ ಮಾಡಿದ ಸಿಎಂ ಸ್ಟಾಲಿನ್, ವರದಿಯು ಐಐಟಿ, ಐಐಎಂ ಮತ್ತು ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಹಿಂದಿಯನ್ನು ಬೋಧನಾ ಮಾಧ್ಯಮವಾಗಿ ಶಿಫಾರಸು ಮಾಡಿದೆ ಎಂದು ಹೇಳಿದರು.

CM Stalin: ಅಮಿತ್ ಶಾ ಇತರ ಭಾಷೆಗಳಿಗೆ ವಿಷವನ್ನು ನೀಡಿ, ಹಿಂದಿಗೆ ತಾಯಿಯ ಹಾಲುಣಿಸುತ್ತಿದ್ದಾರೆ: ಎಂಕೆ ಸ್ಟಾಲಿನ್
Amit Shah and MK Stalin
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on: Oct 10, 2022 | 4:25 PM

Share

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಭಾರತೀಯ ಜನತಾ ಪಕ್ಷ (ಬಿಜೆಪಿ) ಒಂದು ರಾಷ್ಟ್ರ, ಒಂದು ಭಾಷೆ, ಒಂದು ಧರ್ಮ, ಒಂದು ಆಹಾರ ಮತ್ತು ಒಂದು ಸಂಸ್ಕೃತಿಯನ್ನು ಜಾರಿಗೊಳಿಸುತ್ತಿದೆ ಎಂದು ಆರೋಪಿಸಿದರು ಮತ್ತು ಇದು ಭಾರತೀಯ ಒಕ್ಕೂಟಕ್ಕೆ ಹಾನಿ ಮಾಡುತ್ತದೆ ಎಂದು ಹೇಳಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರು ಅಧ್ಯಕ್ಷ ದ್ರೌಪದಿ ಮುರ್ಮು ಅವರಿಗೆ ನೀಡಿದ ಅಧಿಕೃತ ಭಾಷೆಯ ಸಂಸತ್ ಸಮಿತಿಯ ವರದಿಯನ್ನು ಹೈಲೈಟ್ ಮಾಡಿದ ಸಿಎಂ ಸ್ಟಾಲಿನ್, ವರದಿಯು ಐಐಟಿ, ಐಐಎಂ ಮತ್ತು ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಹಿಂದಿಯನ್ನು ಬೋಧನಾ ಮಾಧ್ಯಮವಾಗಿ ಶಿಫಾರಸು ಮಾಡಿದೆ ಎಂದು ಹೇಳಿದರು.

22 ಅಧಿಕೃತ ಭಾಷೆಗಳಿಗೆ ಹೆಚ್ಚಿನ ಭಾಷೆಗಳನ್ನು ಸೇರಿಸಬೇಕೆಂದು ಜನರು ಒತ್ತಾಯಿಸುತ್ತಿರುವಾಗ ಇಂತಹ ವರದಿಯ ಅಗತ್ಯವೇನು? ಕೇಂದ್ರ ಸರ್ಕಾರದ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಂದ ಇಂಗ್ಲಿಷ್ ಅನ್ನು ತೆಗೆದುಹಾಕಲು ಏಕೆ ಶಿಫಾರಸು ಮಾಡಲಾಗಿದೆ? ಎಂದು ಸಿಎಂ ಸ್ಟಾಲಿನ್ ಅವರನ್ನು ಪ್ರಶ್ನಿಸಿ, ಈ ಕ್ರಮಕ್ಕೆ ಕೇಂದ್ರವನ್ನು ಸ್ಟಾಲಿನ್ ತರಾಟೆಗೆ ತೆಗೆದುಕೊಂಡಿದೆ.

ಇದನ್ನು ಓದಿ: ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಮನವಿ; ಇದು ನ್ಯಾಯಾಲಯದ ಕೆಲಸವೇ? ಎಂದು ಅರ್ಜಿ ವಜಾ ಮಾಡಿದ ಸುಪ್ರೀಂ

ಸಂಸತ್ತಿನಲ್ಲಿ ಭಾರತ್ ಮಾರಾ ಕೀ ಜೈ ಎಂದು ಹೇಳುವುದು, ಅದನ್ನು ರಾಜಕೀಯ ಪಕ್ಷಗಳ ಘೋಷಣೆಯಾಗಿಸುವುದು, ಇತರ ಭಾಷೆಗಳಿಗೆ ವಿಷವನ್ನು ನೀಡಿ, ಹಿಂದಿಗೆ ತಾಯಿಯ ಹಾಲು ಉಣಿಸಿದಂತಿದೆ. ಇದು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಸಿಎಂ ಸ್ಟಾಲಿನ್ ಹೇಳಿದ್ದಾರೆ. ಸೆಪ್ಟೆಂಬರ್ 16 ರಂದು ಗೃಹ ಸಚಿವ ಅಮಿತ್ ಶಾ ಅವರು ಹಿಂದಿ ದಿವಸ್ ಆಚರಿಸಿದರು ಮತ್ತು ಹಿಂದಿ ಅಧಿಕೃತ ಭಾಷೆ ಎಂದು ಹೇಳಿದ್ದರು ಮತ್ತು ಅವರ ನೇತೃತ್ವದ ಸಮಿತಿ ಈಗ ಶಿಕ್ಷಣ ಸಂಸ್ಥೆಗಳ ಮೇಲೆ ಹಿಂದಿ ಹೇರಲು ಪ್ರಯತ್ನಿಸುತ್ತಿದೆ ಎಂದು ಸಿಎಂ ಸ್ಟಾಲಿನ್ ಹೇಳಿದ್ದಾರೆ.

ಪ್ರಾಯೋಗಿಕವಲ್ಲದ ಯಾವುದನ್ನಾದರೂ ಹೇರುವುದು ಹಿಂದಿ ಭಾಷಿಕರನ್ನು ಪ್ರಥಮ ದರ್ಜೆಯ ನಾಗರಿಕರು ಎಂದು ಕರೆಯುವುದು ಮತ್ತು ಹಿಂದಿಯೇತರ ಭಾಷಿಕರನ್ನು ಎರಡನೇ ದರ್ಜೆಯ ನಾಗರಿಕರು ಎಂದು ಕರೆಯುವುದು. ಮಾತೃಭಾಷೆಯನ್ನು ಹೊಗಳುವವರು ಇದನ್ನು ಒಪ್ಪುವುದಿಲ್ಲ. ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಭಾರತದಲ್ಲಿ ತಮಿಳು ಮತ್ತು ಇತರ ಭಾಷೆಗಳನ್ನು ಸಮಾನವಾಗಿ ಕಾಣಬೇಕು ಎಂದು ಎಂ.ಕೆ.ಸ್ಟಾಲಿನ್ ಹೇಳಿದರು.

ಎಲ್ಲಾ ಭಾಷೆಗಳನ್ನು ಸರ್ಕಾರದ ಅಧಿಕೃತ ಭಾಷೆಯನ್ನಾಗಿ ಮಾಡಬೇಕು. ಹಿಂದಿಯನ್ನು ಹೇರುವ ಮತ್ತು ಇನ್ನೊಂದು ಭಾಷಾಯುದ್ಧವನ್ನು ನಮ್ಮ ಮೇಲೆ ಹೇರುವ ನಿಲುವು ತೆಗೆದುಕೊಳ್ಳಬೇಡಿ. ಮಾತೃಭಾಷಾ ಭಾವನೆ ಎಂಬ ಬೆಂಕಿ ಹಚ್ಚುವ ಪ್ರಯತ್ನ ಮಾಡಬೇಡಿ ಎಂದು ತಮಿಳುನಾಡು ಸಿಎಂ ಎಚ್ಚರಿಕೆ ನೀಡಿದ್ದಾರೆ.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?