AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amit Shah: ಅಕ್ಟೋಬರ್‌ನಲ್ಲಿ ಅಮಿತ್ ಶಾ ಜಮ್ಮು- ಕಾಶ್ಮೀರಕ್ಕೆ ಭೇಟಿ, ಪಹಾರಿ ಸಮುದಾಯಕ್ಕೆ ವಿಶೇಷ ಸ್ಥಾನಮಾನ ನೀಡುವ ಸಾಧ್ಯತೆ

ಉತ್ತರ ಕಾಶ್ಮೀರದ ಬಾರಾಮುಲ್ಲಾ ಪಟ್ಟಣದಲ್ಲಿ ಬೃಹತ್ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪಹಾರಿ ಸಮುದಾಯಕ್ಕೆ ರಾಜ್ಯದಲ್ಲಿ ವಿಶೇಷ ಸ್ಥಾನಮಾನ ನೀಡುವ ಕುರಿತು ಶಾ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ.

Amit Shah: ಅಕ್ಟೋಬರ್‌ನಲ್ಲಿ ಅಮಿತ್ ಶಾ ಜಮ್ಮು- ಕಾಶ್ಮೀರಕ್ಕೆ ಭೇಟಿ, ಪಹಾರಿ ಸಮುದಾಯಕ್ಕೆ ವಿಶೇಷ  ಸ್ಥಾನಮಾನ ನೀಡುವ ಸಾಧ್ಯತೆ
Amit Shah
TV9 Web
| Edited By: |

Updated on:Sep 24, 2022 | 12:07 PM

Share

ಗೃಹ ಸಚಿವ ಅಮಿತ್ ಶಾ ಮುಂದಿನ ವಾರ ಜಮ್ಮು- ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಕಾಶ್ಮೀರದ ಬಾರಾಮುಲ್ಲಾ ಪಟ್ಟಣದಲ್ಲಿ ಬೃಹತ್ ರ್ಯಾಲಿ ನಡೆಸಲಿದ್ದಾರೆ. ಈ ಸಮಯದಲ್ಲಿ ಪ್ರಮುಖ ಘೋಷಣೆಗಳನ್ನು ಮಾಡುವ ಸಾಧ್ಯತೆಯಿದೆ. 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ, ಇದು ಕಾಶ್ಮೀರಕ್ಕೆ ಗೃಹ ಸಚಿವರ ಎರಡನೇ ಭೇಟಿಯಾಗಿದೆ. ಇದಕ್ಕೂ ಮುನ್ನ ಅವರು ಕಳೆದ ವರ್ಷ ಪುಲ್ವಾಮಾ ಮತ್ತು ಶ್ರೀನಗರಕ್ಕೆ ಭೇಟಿ ನೀಡಿದ್ದರು.

ಯುಟಿಗೆ ಷಾ ಅವರ ಎರಡು ದಿನಗಳ ಭೇಟಿಯ ಸಂದರ್ಭದಲ್ಲಿ ಉತ್ತರ ಕಾಶ್ಮೀರದ ಬಾರಾಮುಲ್ಲಾ ಪಟ್ಟಣದಲ್ಲಿ ಬೃಹತ್ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪಹಾರಿ ಸಮುದಾಯಕ್ಕೆ ರಾಜ್ಯದಲ್ಲಿ ವಿಶೇಷ ಸ್ಥಾನಮಾನ ನೀಡುವ ಕುರಿತು ಶಾ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ. ಗುಜ್ಜರರಂತೆಯೇ ಪಹಾರಿ ಸಮುದಾಯವೂ ವಿಶೇಷ ಸ್ಥಾನಮಾನ ನೀಡುವಂತೆ ಹಲವು ವರ್ಷಗಳಿಂದ ಒತ್ತಾಯಿಸುತ್ತಿದ್ದರೂ ಗುಜ್ಜರ್ ಸಮುದಾಯದ ಮುಖಂಡರು ಈ ಬೇಡಿಕೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಬಿಜೆಪಿ ರಾಜ್ಯ ವಕ್ತಾರ ಅಲ್ತಾಫ್ ಠಾಕೂರ್ ಮಾತನಾಡಿ, ಗೃಹ ಸಚಿವರು ಬಾರಾಮುಲ್ಲಾದ ಡಿಗ್ರಿ ಕಾಲೇಜಿನಲ್ಲಿ ಬೃಹತ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅವರು ಈ ರ್ಯಾಲಿಯಲ್ಲಿ ಪಹಾರಿ ಮತ್ತು ಒಬಿಸಿಗಳ ಬಗ್ಗೆ ಪ್ರಮುಖ ಘೋಷಣೆ ಮಾಡಲಿದ್ದಾರೆ. ಅಕ್ಟೋಬರ್ 1 ರಂದು ಶ್ರೀನಗರಕ್ಕೆ ಆಗಮಿಸಲಿದ್ದಾರೆ ಎಂದು ಹೇಳಿದರು.

J&K ನಲ್ಲಿ ಅಮಿತ್ ಶಾ ಅವರು ವ್ಯಾಪಾರ ಸಮುದಾಯದ ಸದಸ್ಯರೊಂದಿಗೆ, ವಿಶೇಷವಾಗಿ ಹೋಟೆಲ್ ಮಾಲೀಕರು ಮತ್ತು ಪ್ರವಾಸೋದ್ಯಮ ಮತ್ತು ಇತರ ಸಂಬಂಧಿತ ಕ್ಷೇತ್ರಗಳಿಗೆ ಸಂಬಂಧಿಸಿದ ಉದ್ಯಮಿಗಳೊಂದಿಗೆ ಪ್ರತ್ಯೇಕ ಸಭೆಗಳನ್ನು ನಡೆಸುವ ಸಾಧ್ಯತೆಯಿದೆ. ಶಾ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಪಂಚಾಯತ್ ಪ್ರತಿನಿಧಿಗಳನ್ನು ಭೇಟಿ ಮಾಡಬಹುದು ಎಂದು ಮೂಲಗಳು ತಿಳಿಸಿವೆ. ಅಮಿತ್ ಶಾ ಕಾಶ್ಮೀರದ ಶಾಲೆಯೊಂದರಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಿದ್ದಾರೆ. ಭದ್ರತಾ ಕಾರಣಗಳಿಗಾಗಿ ಆಯ್ಕೆಯಾದ ಶಾಲೆಗಳನ್ನು ಮುಂದಿನ ಭಾನುವಾರ ಅಂತಿಮಗೊಳಿಸಲಾಗುತ್ತದೆ. ಜಮ್ಮುವಿನಲ್ಲಿ ಮತ್ತೊಂದು ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವುದರ ಜೊತೆಗೆ ಷಾ ಯುಟಿಗೆ ಅಭಿವೃದ್ಧಿ ಯೋಜನೆಗಳನ್ನು ಘೋಷಿಸುವ ಸಾಧ್ಯತೆಯಿದೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ, ಅಮಿತ್ ಶಾ ಮೂರು ದಿನಗಳ ಕಾಲ ಜಮ್ಮು- ಕಾಶ್ಮೀರಕ್ಕೆ ಭೇಟಿ ನೀಡಿದ್ದರು ಅವರು ಯುಟಿಯಲ್ಲಿ ಹಲವಾರು ಯೋಜನೆಗಳಿಗೆ ಅಡಿಗಲ್ಲು ಹಾಕಿದರು. ಆ ಸಮಯದಲ್ಲಿ ಶಾ ಯಾವುದೇ ಮುಖ್ಯವಾಹಿನಿಯ ರಾಜಕೀಯ ಪಕ್ಷಗಳ ನಾಯಕರ ಜೊತೆ ಯಾವುದೇ ಸಭೆ ನಡೆಸಿರಲಿಲ್ಲ. ಯುಟಿಯಲ್ಲಿ ಚುನಾವಣೆಗಳು ನಡೆಯುತ್ತಿದ್ದಂತೆ ಶಾ ಅವರ ಜಮ್ಮು- ಕಾಶ್ಮೀರ ಭೇಟಿ ಮಹತ್ವ ಪಡೆದುಕೊಂಡಿದೆ. ಯುಟಿ ಸರ್ಕಾರವು ಚುನಾವಣೆಗೆ ಬಹುತೇಕ ಎಲ್ಲಾ ಸಿದ್ಧತೆಗಳನ್ನು ನಡೆಸಲಾಗಿದೆ ಎಂದು ಈಗಾಗಲೇ ಹೇಳಿದೆ ಮತ್ತು ಚುನಾವಣೆಯ ದಿನಾಂಕವನ್ನು ನಿರ್ಧರಿಸುವುದು ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಬಿಟ್ಟದ್ದು. ಎಲ್ಲಾ ರಾಜಕೀಯ ಪಕ್ಷಗಳು ಸಹ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಮೊದಲ ಚುನಾವಣೆಗೆ ತಯಾರಿ ಆರಂಭಿಸಿವೆ.

Published On - 12:06 pm, Sat, 24 September 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ