AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amit Shah Missing ಎಂಬ ಹ್ಯಾಷ್​ಟ್ಯಾಗ್​​ ಟ್ವಿಟರ್​​ನಲ್ಲಿ ಟ್ರೆಂಡ್​;  ಹುಡುಕಿಕೊಡಿ ಎಂದು ದೆಹಲಿ ಪೊಲೀಸರಿಗೆ ಎನ್​​ಎಸ್​ಯುಐನಿಂದ ದೂರು

ಬಿಜೆಪಿ ಮತ್ತು ಆಡಳಿತ ಪಕ್ಷದ ನಾಯಕರಷ್ಟೇ ಕೆಲಸ ಮಾಡಬೇಕು ಎಂದೇನೂ ಇಲ್ಲ. ದೇಶಕ್ಕೆ ಒದಗಿದ ಇಂಥ ಕಷ್ಟದ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬ ರಾಜಕಾರಣಿಯೂ ತನ್ನ ಕೈಲಾದ ಕೆಲಸ ಮಾಡಬೇಕು ಎಂದು ನಾಗೇಶ್ ಕರಿಯಪ್ಪ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

Amit Shah Missing ಎಂಬ ಹ್ಯಾಷ್​ಟ್ಯಾಗ್​​ ಟ್ವಿಟರ್​​ನಲ್ಲಿ ಟ್ರೆಂಡ್​;  ಹುಡುಕಿಕೊಡಿ ಎಂದು ದೆಹಲಿ ಪೊಲೀಸರಿಗೆ ಎನ್​​ಎಸ್​ಯುಐನಿಂದ ದೂರು
ಅಮಿತ್ ಶಾ (ಸಂಗ್ರಹ ಚಿತ್ರ)
Lakshmi Hegde
|

Updated on:May 13, 2021 | 9:15 PM

Share

ನವದೆಹಲಿ: ಅಮಿತ್​ ಶಾ ಅವರು ಕಾಣೆಯಾಗಿದ್ದಾರೆ (Amit Shah Missing) ಎಂಬ ಹ್ಯಾಷ್​ಟ್ಯಾಗ್​ ಟ್ವಿಟರ್​ನಲ್ಲಿ ಟ್ರೆಂಡ್​ ಆಗುತ್ತಿದೆ. ಇಂದು ಬೆಳಗ್ಗೆಯಿಂದ ಈ ಹ್ಯಾಷ್​ಟ್ಯಾಗ್​ನಡಿ ಸುಮಾರು 5000 ಟ್ವೀಟ್​ಗಳನ್ನು ಮಾಡಲಾಗಿದೆ. ಅಷ್ಟಕ್ಕೂ ಈ ಹ್ಯಾಷ್​ಟ್ಯಾಗ್​ನಡಿ ಮೊದಲು ಟ್ವೀಟ್ ಮಾಡಿದ್ದು, ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (NSUI).

ಹೀಗೆ ಟ್ವಿಟರ್​ನಲ್ಲಿ ಅಮಿತ್ ಶಾ ಕಾಣೆಯಾಗಿದ್ದಾರೆ ಎಂಬ ಹ್ಯಾಷ್​ಟ್ಯಾಗ್​ ಟ್ರೆಂಡ್ ಆಗುವುದಕ್ಕೂ ಮೊದಲು ಅಂದರೆ, ಬುಧವಾರ ಸಂಜೆ ಎನ್​ಎಸ್​ಯುಐದ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ನಾಗೇಶ್ ಕರಿಯಪ್ಪ, ದೆಹಲಿಯ ಪಾರ್ಲಿಮೆಂಟ್​ ರಸ್ತೆಯ ಪೊಲೀಸ್​ ಠಾಣೆಯಲ್ಲಿ ಈ ಮಿಸ್ಸಿಂಗ್ ದೂರು ದಾಖಲು ಮಾಡಿದ್ದಾರೆ. ಇಡೀ ರಾಷ್ಟ್ರ ಕೊವಿಡ್ 19 ಬಿಕ್ಕಟ್ಟು ಎದುರಿಸುತ್ತಿರುವಾಗ ಗೃಹ ಸಚಿವ ಅಮಿತ್ ಶಾ ಅವರು ಎಲ್ಲಿಯೂ ಕಾಣುತ್ತಿಲ್ಲ. ಅವರೇನು ಮಾಡುತ್ತಿದ್ದಾರೆ..ಎಲ್ಲಿದ್ದಾರೆ ಎಂಬುದೂ ಗೊತ್ತಾಗುತ್ತಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಹಾಗೇ, ರಾಜಕಾರಣಿಗಳು, ಅದರಲ್ಲೂ ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದವರು ಎಂದಿಗೂ ಎಂಥದ್ದೇ ಸಂದರ್ಭ ಬಂದರೂ ನುಣುಚಿಕೊಳ್ಳಬಾರದು ಎಂದೂ ಹೇಳಿದ್ದರು.

ಬಿಜೆಪಿ ಮತ್ತು ಆಡಳಿತ ಪಕ್ಷದ ನಾಯಕರಷ್ಟೇ ಕೆಲಸ ಮಾಡಬೇಕು ಎಂದೇನೂ ಇಲ್ಲ. ದೇಶಕ್ಕೆ ಒದಗಿದ ಇಂಥ ಕಷ್ಟದ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬ ರಾಜಕಾರಣಿಯೂ ತನ್ನ ಕೈಲಾದ ಕೆಲಸ ಮಾಡಬೇಕು ಎಂದು ನಾಗೇಶ್ ಕರಿಯಪ್ಪ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಇನ್ನು ಅಮಿತ್ ಶಾ ಎಲ್ಲಿಗೆ ಹೋಗಿದ್ದಾರೆ ಎಂಬುದನ್ನು ನಮಗೆ ಕೇಂದ್ರ ಸರ್ಕಾರ ತತ್​​ಕ್ಷಣವೇ ತಿಳಿಸಬೇಕು ಎಂದು ಕೂಡ ಕರಿಯಪ್ಪ ಒತ್ತಾಯಿಸಿದ್ದಾರೆ.

2013ರವರೆಗೆ ರಾಜಕಾರಣಿಗಳು, ಕೇಂದ್ರ ಸರ್ಕಾರ ಎಲ್ಲವೂ ಜನರ ಪರವಾಗಿಯೇ ಇದ್ದರು. ಆದರೆ 2014ರಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಇಡೀ ರಾಜಕೀಯ ಚಿತ್ರಣ ಬದಲಾಗಿದೆ ಎಂದು ಎನ್​​ಎಸ್​ಯುಐದ ಸಂವಹನ ವಿಭಾಗ ಮತ್ತು ಮಾಧ್ಯಮ ವಿಭಾಗದ ಮುಖ್ಯಸ್ಥ ಲೋಕೇಶ್​ ಚಗ್ ಆರೋಪಿಸಿದ್ದಾರೆ.

ಇದನ್ನೂ ಓದಿ: ವಲಸೆ ಕಾರ್ಮಿಕರಿಗೆ ಕಡಿಮೆ ದರದಲ್ಲಿ ಸಾರಿಗೆ ಸೌಲಭ್ಯ, ಸಮುದಾಯ ಭೋಜನ ಶಾಲೆ ಒದಗಿಸಲು ಸುಪ್ರೀಂ ಸೂಚನೆ

ICC Test Rankings: ನಂಬರ್ 1 ಪಟ್ಟ ಉಳಿಸಿಕೊಂಡ ಟೀಂ ಇಂಡಿಯಾ! ವೆಸ್ಟ್ ಇಂಡೀಸ್ ಗಮನಾರ್ಹ ಸಾಧನೆ

Published On - 3:34 pm, Thu, 13 May 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!