AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amit Shah Missing ಎಂಬ ಹ್ಯಾಷ್​ಟ್ಯಾಗ್​​ ಟ್ವಿಟರ್​​ನಲ್ಲಿ ಟ್ರೆಂಡ್​;  ಹುಡುಕಿಕೊಡಿ ಎಂದು ದೆಹಲಿ ಪೊಲೀಸರಿಗೆ ಎನ್​​ಎಸ್​ಯುಐನಿಂದ ದೂರು

ಬಿಜೆಪಿ ಮತ್ತು ಆಡಳಿತ ಪಕ್ಷದ ನಾಯಕರಷ್ಟೇ ಕೆಲಸ ಮಾಡಬೇಕು ಎಂದೇನೂ ಇಲ್ಲ. ದೇಶಕ್ಕೆ ಒದಗಿದ ಇಂಥ ಕಷ್ಟದ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬ ರಾಜಕಾರಣಿಯೂ ತನ್ನ ಕೈಲಾದ ಕೆಲಸ ಮಾಡಬೇಕು ಎಂದು ನಾಗೇಶ್ ಕರಿಯಪ್ಪ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

Amit Shah Missing ಎಂಬ ಹ್ಯಾಷ್​ಟ್ಯಾಗ್​​ ಟ್ವಿಟರ್​​ನಲ್ಲಿ ಟ್ರೆಂಡ್​;  ಹುಡುಕಿಕೊಡಿ ಎಂದು ದೆಹಲಿ ಪೊಲೀಸರಿಗೆ ಎನ್​​ಎಸ್​ಯುಐನಿಂದ ದೂರು
ಅಮಿತ್ ಶಾ (ಸಂಗ್ರಹ ಚಿತ್ರ)
Lakshmi Hegde
|

Updated on:May 13, 2021 | 9:15 PM

Share

ನವದೆಹಲಿ: ಅಮಿತ್​ ಶಾ ಅವರು ಕಾಣೆಯಾಗಿದ್ದಾರೆ (Amit Shah Missing) ಎಂಬ ಹ್ಯಾಷ್​ಟ್ಯಾಗ್​ ಟ್ವಿಟರ್​ನಲ್ಲಿ ಟ್ರೆಂಡ್​ ಆಗುತ್ತಿದೆ. ಇಂದು ಬೆಳಗ್ಗೆಯಿಂದ ಈ ಹ್ಯಾಷ್​ಟ್ಯಾಗ್​ನಡಿ ಸುಮಾರು 5000 ಟ್ವೀಟ್​ಗಳನ್ನು ಮಾಡಲಾಗಿದೆ. ಅಷ್ಟಕ್ಕೂ ಈ ಹ್ಯಾಷ್​ಟ್ಯಾಗ್​ನಡಿ ಮೊದಲು ಟ್ವೀಟ್ ಮಾಡಿದ್ದು, ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (NSUI).

ಹೀಗೆ ಟ್ವಿಟರ್​ನಲ್ಲಿ ಅಮಿತ್ ಶಾ ಕಾಣೆಯಾಗಿದ್ದಾರೆ ಎಂಬ ಹ್ಯಾಷ್​ಟ್ಯಾಗ್​ ಟ್ರೆಂಡ್ ಆಗುವುದಕ್ಕೂ ಮೊದಲು ಅಂದರೆ, ಬುಧವಾರ ಸಂಜೆ ಎನ್​ಎಸ್​ಯುಐದ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ನಾಗೇಶ್ ಕರಿಯಪ್ಪ, ದೆಹಲಿಯ ಪಾರ್ಲಿಮೆಂಟ್​ ರಸ್ತೆಯ ಪೊಲೀಸ್​ ಠಾಣೆಯಲ್ಲಿ ಈ ಮಿಸ್ಸಿಂಗ್ ದೂರು ದಾಖಲು ಮಾಡಿದ್ದಾರೆ. ಇಡೀ ರಾಷ್ಟ್ರ ಕೊವಿಡ್ 19 ಬಿಕ್ಕಟ್ಟು ಎದುರಿಸುತ್ತಿರುವಾಗ ಗೃಹ ಸಚಿವ ಅಮಿತ್ ಶಾ ಅವರು ಎಲ್ಲಿಯೂ ಕಾಣುತ್ತಿಲ್ಲ. ಅವರೇನು ಮಾಡುತ್ತಿದ್ದಾರೆ..ಎಲ್ಲಿದ್ದಾರೆ ಎಂಬುದೂ ಗೊತ್ತಾಗುತ್ತಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಹಾಗೇ, ರಾಜಕಾರಣಿಗಳು, ಅದರಲ್ಲೂ ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದವರು ಎಂದಿಗೂ ಎಂಥದ್ದೇ ಸಂದರ್ಭ ಬಂದರೂ ನುಣುಚಿಕೊಳ್ಳಬಾರದು ಎಂದೂ ಹೇಳಿದ್ದರು.

ಬಿಜೆಪಿ ಮತ್ತು ಆಡಳಿತ ಪಕ್ಷದ ನಾಯಕರಷ್ಟೇ ಕೆಲಸ ಮಾಡಬೇಕು ಎಂದೇನೂ ಇಲ್ಲ. ದೇಶಕ್ಕೆ ಒದಗಿದ ಇಂಥ ಕಷ್ಟದ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬ ರಾಜಕಾರಣಿಯೂ ತನ್ನ ಕೈಲಾದ ಕೆಲಸ ಮಾಡಬೇಕು ಎಂದು ನಾಗೇಶ್ ಕರಿಯಪ್ಪ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಇನ್ನು ಅಮಿತ್ ಶಾ ಎಲ್ಲಿಗೆ ಹೋಗಿದ್ದಾರೆ ಎಂಬುದನ್ನು ನಮಗೆ ಕೇಂದ್ರ ಸರ್ಕಾರ ತತ್​​ಕ್ಷಣವೇ ತಿಳಿಸಬೇಕು ಎಂದು ಕೂಡ ಕರಿಯಪ್ಪ ಒತ್ತಾಯಿಸಿದ್ದಾರೆ.

2013ರವರೆಗೆ ರಾಜಕಾರಣಿಗಳು, ಕೇಂದ್ರ ಸರ್ಕಾರ ಎಲ್ಲವೂ ಜನರ ಪರವಾಗಿಯೇ ಇದ್ದರು. ಆದರೆ 2014ರಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಇಡೀ ರಾಜಕೀಯ ಚಿತ್ರಣ ಬದಲಾಗಿದೆ ಎಂದು ಎನ್​​ಎಸ್​ಯುಐದ ಸಂವಹನ ವಿಭಾಗ ಮತ್ತು ಮಾಧ್ಯಮ ವಿಭಾಗದ ಮುಖ್ಯಸ್ಥ ಲೋಕೇಶ್​ ಚಗ್ ಆರೋಪಿಸಿದ್ದಾರೆ.

ಇದನ್ನೂ ಓದಿ: ವಲಸೆ ಕಾರ್ಮಿಕರಿಗೆ ಕಡಿಮೆ ದರದಲ್ಲಿ ಸಾರಿಗೆ ಸೌಲಭ್ಯ, ಸಮುದಾಯ ಭೋಜನ ಶಾಲೆ ಒದಗಿಸಲು ಸುಪ್ರೀಂ ಸೂಚನೆ

ICC Test Rankings: ನಂಬರ್ 1 ಪಟ್ಟ ಉಳಿಸಿಕೊಂಡ ಟೀಂ ಇಂಡಿಯಾ! ವೆಸ್ಟ್ ಇಂಡೀಸ್ ಗಮನಾರ್ಹ ಸಾಧನೆ

Published On - 3:34 pm, Thu, 13 May 21

Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್