AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

26/11 Mumbai Attack: ಮುಂಬೈ ದಾಳಿಯನ್ನು ಮರೆತಿಲ್ಲ, ಮರೆಯುವುದೂ ಇಲ್ಲ; ಉಗ್ರರಿಗೆ ಕೇಂದ್ರ ಸಚಿವರಿಂದ ಖಡಕ್ ಸಂದೇಶ

26/11 Mumbai Attack; ಮುಂಬೈ ದಾಳಿಯನ್ನು ನಾವು ಮರೆತಿಲ್ಲ, ಮರೆಯುವುದೂ ಇಲ್ಲ ಎಂದು ಕೇಂದ್ರ ಸಚಿವರು ಉಗ್ರರಿಗೆ ಖಡಕ್ ಸಂದೇಶವನ್ನೂ ರವಾನಿಸಿದ್ದಾರೆ.

26/11 Mumbai Attack: ಮುಂಬೈ ದಾಳಿಯನ್ನು ಮರೆತಿಲ್ಲ, ಮರೆಯುವುದೂ ಇಲ್ಲ; ಉಗ್ರರಿಗೆ ಕೇಂದ್ರ ಸಚಿವರಿಂದ ಖಡಕ್ ಸಂದೇಶ
2008ರ ನವೆಂಬರ್ 26ರಂದು ಮುಂಬೈಯಲ್ಲಿ ನಡೆದಿದ್ದ ಉಗ್ರ ದಾಳಿಯ ಸಂಗ್ರಹ ಚಿತ್ರImage Credit source: PTI
TV9 Web
| Edited By: |

Updated on:Nov 26, 2022 | 11:05 AM

Share

ನವದೆಹಲಿ: 2008ರ ನವೆಂಬರ್ 26ರಂದು ಮುಂಬೈಯಲ್ಲಿ ನಡೆದಿದ್ದ ಉಗ್ರ ದಾಳಿ(26/11 Mumbai Attack) ಸಂತ್ರಸ್ತರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh), ವಿದೇಶಾಂಗ ವ್ಯವಹಾರಗಳ ಸಚಿವ ಎಸ್​. ಜೈಶಂಕರ್ (S. Jaishankar) ಸೇರಿದಂತೆ ಅನೇಕ ಗಣ್ಯರು ಗೌರವ ಸಲ್ಲಿಸಿದರು. ಇದೇ ವೇಳೆ, ಮುಂಬೈ ದಾಳಿಯನ್ನು ನಾವು ಮರೆತಿಲ್ಲ, ಮರೆಯುವುದೂ ಇಲ್ಲ ಎಂದು ಕೇಂದ್ರ ಸಚಿವರು ಉಗ್ರರಿಗೆ ಖಡಕ್ ಸಂದೇಶವನ್ನೂ ರವಾನಿಸಿದ್ದಾರೆ.

ದಾಳಿ ಸಂತ್ತಸ್ತರ ಪ್ರೀತಿಪಾತ್ರರು ಮತ್ತು ಕುಟುಂಬಗಳ ನಿರಂತರ ನೋವಿನಲ್ಲಿ ನಾವೂ ಭಾಗಿಯಾಗಿದ್ದೇವೆ. ಕರ್ತವ್ಯದ ವೇಳೆ ವೀರಾವೇಶದಿಂದ ಹೋರಾಡಿ ತ್ಯಾಗ, ಬಲಿದಾನ ಮಾಡಿದ ಭದ್ರತಾ ಸಿಬ್ಬಂದಿಗೆ ರಾಷ್ಟ್ರ ಗೌರವ ಸಲ್ಲಿಸುತ್ತದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಸಂದೇಶದಲ್ಲಿ ತಿಳಿಸಿದ್ದಾರೆ.

ಇದಕ್ಕೂ ಮುನ್ನ ವಿದೇಶಾಂಗ ಸಚಿವ ಜೈಶಂಕರ್ ಅವರು ಕಳೆದ ತಿಂಗಳು ಮುಂಬೈಯ ತಾಜ್ ಹೋಟೆಲ್​ನಲ್ಲಿ ನಡೆದಿದ್ದ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ನೀಡಿದ್ದ ಹೇಳಿಕೆಗಳ ವಿಡಿಯೊ ತುಣುಕನ್ನು ಹಂಚಿಕೊಳ್ಳುವ ಮೂಲಕ ಗೌರವ ಸಲ್ಲಿಸಿದ್ದಾರೆ. ಇದೇ ತಾಜ್ ಹೋಟೆಲ್ ಮೇಲೆ 2008ರ ನವೆಂಬರ್ 26ರಂದು ದಾಳಿ ನಡೆದಿತ್ತು.

ಭಯೋತ್ಪಾದನೆಯು ಮಾನವೀಯತೆಗೆ ಬಹುದೊಡ್ಡ ಬೆದರಿಕೆ. ಇಂದು 26/11ರ ದಾಳಿ ಸಂತ್ರಸ್ತರನ್ನು ನೆನೆಯುವಲ್ಲಿ ವಿಶ್ವವೇ ಭಾರತದ ಜತೆ ನಿಂತಿದೆ. ಈ ದಾಳಿಗೆ ಕಾರಣರಾದವರಿಗೆ ಶಿಕ್ಷೆಯಾಗಬೇಕು. ಜಗತ್ತಿನಾದ್ಯಂತ ಭಯೋತ್ಪಾದಕ ದಾಳಿಗೆ ಬಲಿಯಾದವರನ್ನೆಲ್ಲ ನಾವು ಸ್ಮರಿಸಿಕೊಳ್ಳುತ್ತೇವೆ ಎಂದು ಜೈಶಂಕರ್ ಟ್ವೀಟ್ ಮಾಡಿದ್ದಾರೆ.

ಈ ದೇಶವು 26/11ರ ದಾಳಿಯನ್ನು ಮರೆತಿಲ್ಲ. ಮರೆಯುವುದೂ ಇಲ್ಲ. ದಾಳಿಯಲ್ಲಿ ಮೃತಟ್ಟವರಿಗೆ ನನ್ನ ಗೌರವ ನಮನಗಳು. ದಾಳಿ ಸಂದರ್ಭ ಬಲಿದಾನ ಮಾಡಿದ, ದೇಶಕ್ಕಾಗಿ ತ್ಯಾಗ ಮಾಡಿದ ಭದ್ರತಾ ಸಿಬ್ಬಂದಿಗೆ ಹೃದಯಾಂತರಾಳದ ನಮನಗಳು ಎಂದು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಭಯೋತ್ಪಾದಕರ ವಿರುದ್ಧ ಹೋರಾಡುವ ಮೂಲಕ ಉನ್ನತ ತ್ಯಾಗ ಮಾಡಿದ ನಮ್ಮ ಕೆಚ್ಚೆದೆಯ ಭದ್ರತಾ ಸಿಬ್ಬಂದಿಯನ್ನು ನೆನಪಿಸಿಕೊಳ್ಳುತ್ತೇನೆ ಮತ್ತು ನಮಿಸುತ್ತೇನೆ. ಇವರ ತ್ಯಾಗವು ಇಂದು ಇಡೀ ಜಗತ್ತಿಗೆ ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಿನಿಂದ ಹೋರಾಡುವ ಸಂದೇಶವನ್ನು ನೀಡಿದೆ. ದಾಳಿಯಲ್ಲಿ ಮೃತಪಟ್ಟವರಿಗೆ ಗೌರವ ನಮನಗಳು ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

2008ರ ನವೆಂಬರ್ 26ರಂದು ಮುಂಬೈಯಲ್ಲಿ ನಡೆದ ದಾಳಿಯಲ್ಲಿ ಆರು ಮಂದಿ ಅಮೆರಿಕ ಪ್ರಜೆಗಳು ಸೇರಿದಂತೆ ಒಟ್ಟು 166 ಮಂದಿ ಮೃತಪಟ್ಟಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:01 am, Sat, 26 November 22

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ