AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಕಾಶ್ಮೀರದ ಭದ್ರತಾ ಪರಿಸ್ಥಿತಿ ಪರಿಶೀಲಿಸಿದ ಅಮಿತ್ ಶಾ; ಭಯೋತ್ಪಾದನೆ ವಿರುದ್ಧ ಹೋರಾಟ ಚುರುಕುಗೊಳಿಸಲು ಆದೇಶ

ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮಾಜಿ ಸೈನಿಕ ಮಂಜೂರ್ ಅಹ್ಮದ್ ವಾಗೆ ಸಾವನ್ನಪ್ಪಿ ಅವರ ಪತ್ನಿ ಮತ್ತು ಸೊಸೆ ಗಾಯಗೊಂಡಿದ್ದರು. ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಜಮ್ಮು ಮತ್ತು ಕಾಶ್ಮೀರ ಭದ್ರತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಯೋತ್ಪಾದನೆಯ ವಿರುದ್ಧದ ಹೋರಾಟವನ್ನು ಹೆಚ್ಚಿಸುವ ಅಗತ್ಯವನ್ನು ಒತ್ತಿ ಹೇಳಿದರು.

ಜಮ್ಮು ಕಾಶ್ಮೀರದ ಭದ್ರತಾ ಪರಿಸ್ಥಿತಿ ಪರಿಶೀಲಿಸಿದ ಅಮಿತ್ ಶಾ; ಭಯೋತ್ಪಾದನೆ ವಿರುದ್ಧ ಹೋರಾಟ ಚುರುಕುಗೊಳಿಸಲು ಆದೇಶ
Home Minister Amit Shah
ಸುಷ್ಮಾ ಚಕ್ರೆ
|

Updated on: Feb 05, 2025 | 7:57 PM

Share

ನವದೆಹಲಿ: ಕೇಂದ್ರ ಸರ್ಕಾರದ ನಿರಂತರ ಮತ್ತು ಸಂಘಟಿತ ಪ್ರಯತ್ನಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನಾ ಪರಿಸರ ವ್ಯವಸ್ಥೆಯನ್ನು ಬಹಳ ದುರ್ಬಲಗೊಳಿಸಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಭಯೋತ್ಪಾದನೆಯ ವಿರುದ್ಧದ ಹೋರಾಟವನ್ನು ಹೆಚ್ಚಿಸುವಂತೆ ಎಲ್ಲಾ ಭದ್ರತಾ ಸಂಸ್ಥೆಗಳಿಗೆ ನಿರ್ದೇಶನ ನೀಡಿದ್ದಾರೆ. ಒಳನುಸುಳುವಿಕೆ ಮತ್ತು ಭಯೋತ್ಪಾದಕ ಕೃತ್ಯಗಳ ವಿರುದ್ಧ ನಿರ್ದಯವಾಗಿ ಕಠಿಣ ಕ್ರಮ ಕೈಗೊಳ್ಳುವಂತೆ ಅಮಿತ್ ಶಾ ಭದ್ರತಾ ಸಂಸ್ಥೆಗಳಿಗೆ ಸೂಚಿಸಿದ್ದಾರೆ.

ಇಂದು ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ನಿರಂತರ ಮತ್ತು ಸಂಘಟಿತ ಪ್ರಯತ್ನಗಳಿಂದಾಗಿ ಕೇಂದ್ರಾಡಳಿತ ಪ್ರದೇಶದಲ್ಲಿ ಭಯೋತ್ಪಾದನೆಯ ಪರಿಸರ ವ್ಯವಸ್ಥೆ ದುರ್ಬಲಗೊಂಡಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಜಮ್ಮು ಮತ್ತು ಕಾಶ್ಮೀರದಿಂದ ಭಯೋತ್ಪಾದನೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಬದ್ಧವಾಗಿದೆ. ಮೋದಿ ಸರ್ಕಾರದ ನಿರಂತರ ಮತ್ತು ಸಂಘಟಿತ ಪ್ರಯತ್ನಗಳಿಂದಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದನಾ ಪರಿಸರ ವ್ಯವಸ್ಥೆಯು ಗಮನಾರ್ಹವಾಗಿ ದುರ್ಬಲಗೊಂಡಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮೋದಿ, ಅಮಿತ್ ಶಾ ತೀರ್ಥಸ್ನಾನದ ಕುರಿತಾದ ಖರ್ಗೆ ವ್ಯಂಗ್ಯಕ್ಕೆ ವಿಜಯೇಂದ್ರ ತಿರುಗೇಟು

ಭಯೋತ್ಪಾದಕರ ಅಸ್ತಿತ್ವವನ್ನು ಬೇರುಸಹಿತ ಕಿತ್ತುಹಾಕುವುದು ನಮ್ಮ ಗುರಿಯಾಗಿರಬೇಕು. ಎಲ್ಲಾ ಭದ್ರತಾ ಸಂಸ್ಥೆಗಳು ಒಳನುಸುಳುವಿಕೆ ಮತ್ತು ಭಯೋತ್ಪಾದಕ ಕೃತ್ಯಗಳ ವಿರುದ್ಧ ನಿರ್ದಯವಾದ ಕ್ರಮ ಕೈಗೊಳ್ಳುವಂತೆ ಅಮಿತ್ ಶಾ ಹೇಳಿದ್ದಾರೆ. ಹೊಸ ಕ್ರಿಮಿನಲ್ ಕಾನೂನುಗಳ ಸಕಾಲಿಕ ಅನುಷ್ಠಾನವನ್ನು ಗಮನದಲ್ಲಿಟ್ಟುಕೊಂಡು ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ಹುದ್ದೆಗಳಲ್ಲಿ ಹೊಸ ನೇಮಕಾತಿಗಳನ್ನು ಮಾಡುವಂತೆ ಅಮಿತ್ ಶಾ ಏಜೆನ್ಸಿಗಳಿಗೆ ನಿರ್ದೇಶನ ನೀಡಿದರು.

ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮಾಜಿ ಸೈನಿಕ ಮಂಜೂರ್ ಅಹ್ಮದ್ ವಾಗೆ ಸಾವನ್ನಪ್ಪಿದರು ಮತ್ತು ಅವರ ಪತ್ನಿ ಮತ್ತು ಸೊಸೆ ಗಾಯಗೊಂಡಿದ್ದರು. ಇದಾದ ನಂತರ ಸಭೆಗಳನ್ನು ಕರೆಯಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿಕ್ಕಬಳ್ಳಾಪುರ: 1 ಕೋಟಿ 11 ಲಕ್ಷ ರೂ ಮೌಲ್ಯದ ಕುದುರೆಗೆ ಅದ್ದೂರಿ ಸ್ವಾಗತ
ಚಿಕ್ಕಬಳ್ಳಾಪುರ: 1 ಕೋಟಿ 11 ಲಕ್ಷ ರೂ ಮೌಲ್ಯದ ಕುದುರೆಗೆ ಅದ್ದೂರಿ ಸ್ವಾಗತ
ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು
Weekly Horoscope: ಜುಲೈ 21 ರಿಂದ 27ರವರೆಗಿನ ವಾರ ಭವಿಷ್ಯ
Weekly Horoscope: ಜುಲೈ 21 ರಿಂದ 27ರವರೆಗಿನ ವಾರ ಭವಿಷ್ಯ