AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amit Shah: ಅಂದು ಮೋದಿ ಹೆಸರು ಹೇಳುವಂತೆ ಸಿಬಿಐ ಅಧಿಕಾರಿಗಳು ನನ್ನ ಮೇಲೆ ಒತ್ತಡ ಹಾಕಿದ್ದರು: ಅಮಿತ್ ಶಾ

ಕಾಂಗ್ರೆಸ್​ ನೇತೃತ್ವದ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಗುಜರಾತ್​ನ ನಕಲಿ ಎನ್​ಕೌಂಟರ್ ಪ್ರಕರಣದಲ್ಲಿ ನರೇಂದ್ರ ಮೋದಿಯವರನ್ನು ಸಿಲುಕಿಸಲು ನನ್ನ ಮೇಲೆ ಸಿಬಿಐ ಒತ್ತಡ ಹಾಕಿತ್ತು ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

Amit Shah: ಅಂದು ಮೋದಿ ಹೆಸರು ಹೇಳುವಂತೆ ಸಿಬಿಐ ಅಧಿಕಾರಿಗಳು ನನ್ನ ಮೇಲೆ ಒತ್ತಡ ಹಾಕಿದ್ದರು: ಅಮಿತ್ ಶಾ
ಅಮಿತ್ ಶಾ
ನಯನಾ ರಾಜೀವ್
|

Updated on: Mar 30, 2023 | 10:49 AM

Share

ಕಾಂಗ್ರೆಸ್​ ನೇತೃತ್ವದ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಗುಜರಾತ್​ನ ನಕಲಿ ಎನ್​ಕೌಂಟರ್ ಪ್ರಕರಣದಲ್ಲಿ ನರೇಂದ್ರ ಮೋದಿಯವರನ್ನು ಸಿಲುಕಿಸಲು ನನ್ನ ಮೇಲೆ ಸಿಬಿಐ ಒತ್ತಡ ಹಾಕಿತ್ತು ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಕೇಂದ್ರದ ಉನ್ನತ ತನಿಖಾ ಸಂಸ್ಥೆಗಳು ಹೇಗೆ ದುರ್ಬಳಕೆಯಾಗುತ್ತಿದ್ದವು ಎಂಬುದಕ್ಕೆ ನಾನೇ ದೊಡ್ಡ ಉದಾಹರಣೆ, ನಾನು ಗುಜರಾತ್​ನ ಗೃಹ ಸಚಿವನಾಗಿದ್ದಾಗ ರಾಜ್ಯದಲ್ಲಿ ಒಂದು ಎನ್​ಕೌಂಟರ್​ ನಡೆದಿತ್ತು, ನನ್ನ ವಿರುದ್ಧ ಪ್ರಕರಣ ದಾಖಲಾಯಿತು ಹಾಗೂ ಸಿಬಿಐ ನನ್ನನ್ನು ಬಂಧಿಸಿದ್ದರು.

ಇಡೀ ತನಿಖೆಯುದ್ದಕ್ಕೂ ಮೋದಿ ಹೆಸರು ಹೇಳುವಂತೆ ಒತ್ತಡ ಹಾಕುತ್ತಿದ್ದರು, ನೀವು ತಲೆ ಕೆಡಿಸಿಕೊಳ್ಳಬೇಡಿ ಮೋದಿ ಹೆಸರು ಹೇಳಿಬಿಡಿ ನಾವು ನಿಮ್ಮನ್ನು ಬಿಟ್ಟುಬಿಡುತ್ತೇವೆ ಎಂದು ಹೇಳಿದ್ದರು. ಆಗ ನಾವು ಪ್ರತಿಭಟಿಸಿರಲಿಲ್ಲ, ಕಲಾಪಗಳಿಗೆ ಅಡ್ಡಿ ಮಾಡಿರಲಿಲ್ಲ, ಮೋದಿ ವಿರುದ್ಧ ತನಿಖಾ ಸಂಸ್ಥೆ ರಚಿಸಲಾಯಿತು, ಅದನ್ನು ಸುಪ್ರೀಂಕೋರ್ಟ್​ ರದ್ದುಪಡಿಸಿತು. 90 ದಿನಗಳ ವಿಚಾರಣೆ ಬಳಿಕ ನನಗೆ ಜಾಮೀನು ಸಿಕ್ಕಿತ್ತು ಎಂದರು.

ಮತ್ತಷ್ಟು ಓದಿ: ಅಮಿತ್ ಶಾ ಪ್ರಯಾಣಿಸುತ್ತಿದ್ದ ಮಾರ್ಗ ಮಧ್ಯೆ ಭದ್ರತಾ ವೈಫಲ್ಯ: ಇಬ್ಬರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಪೊಲೀಸರು

ಸೂರತ್​ನ ನ್ಯಾಯಾಲಯವು ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿರುವ ಕುರಿತು ಪ್ರತಿಕ್ರಿಯಿಸಿರುವ ಅಮಿತ್ ಶಾ ರಾಹುಲ್ ಗಾಂಧಿ ನ್ಯಾಯಾಲಯದಿಂದ ಶಿಕ್ಷೆಗೊಳಗಾಗಿ ಸಂಸದ ಸ್ಥಾನದಿಂದ ಅನರ್ಹಗೊಂಡ ಏಕೈಕ ರಾಜಕಾರಣಿಯೇನಲ್ಲ ಎಂದಿದ್ದಾರೆ.

ಕಾಂಗ್ರೆಸ್ ತಪ್ಪು ಮಾಹಿತಿಯನ್ನು ಎಲ್ಲೆಡೆ ಪಸರಿಸುತ್ತಿದೆ, ನ್ಯಾಯಾಲಯ ದೋಷಿ ಎಂದು ನೀಡಿದ ತೀರ್ಪಿಗೆ ತಡೆ ನೀಡಲು ಬರುವುದಿಲ್ಲ, ಶಿಕ್ಷೆಗೆ ತಡೆ ನೀಡಬಹುದು ಎಂದು ಅವರು ಹೇಳಿದರು.

ತಮ್ಮ ಶಿಕ್ಷೆಗೆ ತಡೆ ನೀಡುವಂತೆ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಯಾವುದೇ ಮನವಿ ಮಾಡಿಲ್ಲ,ಮ ಇದು ದುರಹಂಕಾರವಲ್ಲದೆ ಮತ್ತೇನು, ನಿಮಗೆ ಅನುಕೂಲ ಬೇಕು, ನೀವು ಸಂಸದರಾಗಿರಲು ಬಯಸುತ್ತೀರಿ ಆದರೆ ನ್ಯಾಯಾಲಯದ ಮುಂದೆ ಹೋಗುವುದಿಲ್ಲ.

2013ರಲ್ಲಿ ಯುಪಿಎ ಸರ್ಕಾರದ ಅವಧಿಯಲ್ಲಿ ಸುಪ್ರೀಂಕೋರ್ಟ್​ ಆದೇಶದಿಂದಾಗಿ ಲಾಲು ಪ್ರಸಾದ್ , ಜೆ ಜಯಲಲಿತಾಮತ್ತು ರಶೀದ್ ಅಲ್ವಿ ಸೇರಿದಮತೆ 17 ಮಂದಿ ಪ್ರಮುಖ ನಾಯಕರು ತಮ್ಮ ಸದಸ್ಯತ್ವ ಕಳೆದುಕೊಂಡಿದ್ದರು.

ಅಂದು ನಮ್ಮನ್ನು ಪೀಡಿಸಿದವರೇ ಇಂದು ವಿಧಿಯನ್ನು ದೂರುತ್ತಿದ್ದಾರೆ, ತಮ್ಮ ವರ್ತನೆಯ ಬಗ್ಗೆ ಅವರೇ ಅವಲೋಕನ ಮಾಡಿಕೊಳ್ಳುವ ಅಗತ್ಯವಿದೆ, ಅಮಾಯಕರಾಗಿದ್ದರೆ ಕಾನೂನಿನ ಮೇಲೆ ನಂಬಿಕೆ ಇರಲಿ ಎಂದು ಅಮಿತ್ ಶಾ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ