Sign In

By signing in or creating an account, you agree with Associated Broadcasting Company's Terms & Conditions and Privacy Policy.

Amit Shah: ಅಂದು ಮೋದಿ ಹೆಸರು ಹೇಳುವಂತೆ ಸಿಬಿಐ ಅಧಿಕಾರಿಗಳು ನನ್ನ ಮೇಲೆ ಒತ್ತಡ ಹಾಕಿದ್ದರು: ಅಮಿತ್ ಶಾ

ಕಾಂಗ್ರೆಸ್​ ನೇತೃತ್ವದ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಗುಜರಾತ್​ನ ನಕಲಿ ಎನ್​ಕೌಂಟರ್ ಪ್ರಕರಣದಲ್ಲಿ ನರೇಂದ್ರ ಮೋದಿಯವರನ್ನು ಸಿಲುಕಿಸಲು ನನ್ನ ಮೇಲೆ ಸಿಬಿಐ ಒತ್ತಡ ಹಾಕಿತ್ತು ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

Amit Shah: ಅಂದು ಮೋದಿ ಹೆಸರು ಹೇಳುವಂತೆ ಸಿಬಿಐ ಅಧಿಕಾರಿಗಳು ನನ್ನ ಮೇಲೆ ಒತ್ತಡ ಹಾಕಿದ್ದರು: ಅಮಿತ್ ಶಾ
ಅಮಿತ್ ಶಾ
Follow us
ನಯನಾ ರಾಜೀವ್
|

Updated on: Mar 30, 2023 | 10:49 AM

ಕಾಂಗ್ರೆಸ್​ ನೇತೃತ್ವದ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಗುಜರಾತ್​ನ ನಕಲಿ ಎನ್​ಕೌಂಟರ್ ಪ್ರಕರಣದಲ್ಲಿ ನರೇಂದ್ರ ಮೋದಿಯವರನ್ನು ಸಿಲುಕಿಸಲು ನನ್ನ ಮೇಲೆ ಸಿಬಿಐ ಒತ್ತಡ ಹಾಕಿತ್ತು ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಕೇಂದ್ರದ ಉನ್ನತ ತನಿಖಾ ಸಂಸ್ಥೆಗಳು ಹೇಗೆ ದುರ್ಬಳಕೆಯಾಗುತ್ತಿದ್ದವು ಎಂಬುದಕ್ಕೆ ನಾನೇ ದೊಡ್ಡ ಉದಾಹರಣೆ, ನಾನು ಗುಜರಾತ್​ನ ಗೃಹ ಸಚಿವನಾಗಿದ್ದಾಗ ರಾಜ್ಯದಲ್ಲಿ ಒಂದು ಎನ್​ಕೌಂಟರ್​ ನಡೆದಿತ್ತು, ನನ್ನ ವಿರುದ್ಧ ಪ್ರಕರಣ ದಾಖಲಾಯಿತು ಹಾಗೂ ಸಿಬಿಐ ನನ್ನನ್ನು ಬಂಧಿಸಿದ್ದರು.

ಇಡೀ ತನಿಖೆಯುದ್ದಕ್ಕೂ ಮೋದಿ ಹೆಸರು ಹೇಳುವಂತೆ ಒತ್ತಡ ಹಾಕುತ್ತಿದ್ದರು, ನೀವು ತಲೆ ಕೆಡಿಸಿಕೊಳ್ಳಬೇಡಿ ಮೋದಿ ಹೆಸರು ಹೇಳಿಬಿಡಿ ನಾವು ನಿಮ್ಮನ್ನು ಬಿಟ್ಟುಬಿಡುತ್ತೇವೆ ಎಂದು ಹೇಳಿದ್ದರು. ಆಗ ನಾವು ಪ್ರತಿಭಟಿಸಿರಲಿಲ್ಲ, ಕಲಾಪಗಳಿಗೆ ಅಡ್ಡಿ ಮಾಡಿರಲಿಲ್ಲ, ಮೋದಿ ವಿರುದ್ಧ ತನಿಖಾ ಸಂಸ್ಥೆ ರಚಿಸಲಾಯಿತು, ಅದನ್ನು ಸುಪ್ರೀಂಕೋರ್ಟ್​ ರದ್ದುಪಡಿಸಿತು. 90 ದಿನಗಳ ವಿಚಾರಣೆ ಬಳಿಕ ನನಗೆ ಜಾಮೀನು ಸಿಕ್ಕಿತ್ತು ಎಂದರು.

ಮತ್ತಷ್ಟು ಓದಿ: ಅಮಿತ್ ಶಾ ಪ್ರಯಾಣಿಸುತ್ತಿದ್ದ ಮಾರ್ಗ ಮಧ್ಯೆ ಭದ್ರತಾ ವೈಫಲ್ಯ: ಇಬ್ಬರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಪೊಲೀಸರು

ಸೂರತ್​ನ ನ್ಯಾಯಾಲಯವು ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿರುವ ಕುರಿತು ಪ್ರತಿಕ್ರಿಯಿಸಿರುವ ಅಮಿತ್ ಶಾ ರಾಹುಲ್ ಗಾಂಧಿ ನ್ಯಾಯಾಲಯದಿಂದ ಶಿಕ್ಷೆಗೊಳಗಾಗಿ ಸಂಸದ ಸ್ಥಾನದಿಂದ ಅನರ್ಹಗೊಂಡ ಏಕೈಕ ರಾಜಕಾರಣಿಯೇನಲ್ಲ ಎಂದಿದ್ದಾರೆ.

ಕಾಂಗ್ರೆಸ್ ತಪ್ಪು ಮಾಹಿತಿಯನ್ನು ಎಲ್ಲೆಡೆ ಪಸರಿಸುತ್ತಿದೆ, ನ್ಯಾಯಾಲಯ ದೋಷಿ ಎಂದು ನೀಡಿದ ತೀರ್ಪಿಗೆ ತಡೆ ನೀಡಲು ಬರುವುದಿಲ್ಲ, ಶಿಕ್ಷೆಗೆ ತಡೆ ನೀಡಬಹುದು ಎಂದು ಅವರು ಹೇಳಿದರು.

ತಮ್ಮ ಶಿಕ್ಷೆಗೆ ತಡೆ ನೀಡುವಂತೆ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಯಾವುದೇ ಮನವಿ ಮಾಡಿಲ್ಲ,ಮ ಇದು ದುರಹಂಕಾರವಲ್ಲದೆ ಮತ್ತೇನು, ನಿಮಗೆ ಅನುಕೂಲ ಬೇಕು, ನೀವು ಸಂಸದರಾಗಿರಲು ಬಯಸುತ್ತೀರಿ ಆದರೆ ನ್ಯಾಯಾಲಯದ ಮುಂದೆ ಹೋಗುವುದಿಲ್ಲ.

2013ರಲ್ಲಿ ಯುಪಿಎ ಸರ್ಕಾರದ ಅವಧಿಯಲ್ಲಿ ಸುಪ್ರೀಂಕೋರ್ಟ್​ ಆದೇಶದಿಂದಾಗಿ ಲಾಲು ಪ್ರಸಾದ್ , ಜೆ ಜಯಲಲಿತಾಮತ್ತು ರಶೀದ್ ಅಲ್ವಿ ಸೇರಿದಮತೆ 17 ಮಂದಿ ಪ್ರಮುಖ ನಾಯಕರು ತಮ್ಮ ಸದಸ್ಯತ್ವ ಕಳೆದುಕೊಂಡಿದ್ದರು.

ಅಂದು ನಮ್ಮನ್ನು ಪೀಡಿಸಿದವರೇ ಇಂದು ವಿಧಿಯನ್ನು ದೂರುತ್ತಿದ್ದಾರೆ, ತಮ್ಮ ವರ್ತನೆಯ ಬಗ್ಗೆ ಅವರೇ ಅವಲೋಕನ ಮಾಡಿಕೊಳ್ಳುವ ಅಗತ್ಯವಿದೆ, ಅಮಾಯಕರಾಗಿದ್ದರೆ ಕಾನೂನಿನ ಮೇಲೆ ನಂಬಿಕೆ ಇರಲಿ ಎಂದು ಅಮಿತ್ ಶಾ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ