ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗ್ತಾರೆ, ದೇಶದಿಂದ ಭಯೋತ್ಪಾದನೆ, ನಕ್ಸಲಿಸಂ ಸಂಪೂರ್ಣವಾಗಿ ನಿರ್ಮೂಲನೆ ಮಾಡ್ತಾರೆ: ಅಮಿತ್ ಶಾ

ಈ ದುರಹಂಕಾರದ ಮೈತ್ರಿಯು ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ತುಷ್ಟೀಕರಣದ ರಾಜಕೀಯವನ್ನು ಪೋಷಿಸುತ್ತದೆ ಮತ್ತು ಬಿಜೆಪಿ ಮತ್ತು ಎನ್‌ಡಿಎ ಮೈತ್ರಿಕೂಟವು ನೇಷನ್ ಫಸ್ಟ್ ತತ್ವದ ಮೇಲೆ ನಡೆಯುತ್ತಿರುವ ಮೈತ್ರಿಯಾಗಿದೆ. ಕಾಂಗ್ರೆಸ್ ಮತ್ತು ಇಂಡಿ ಅಲೈಯನ್ಸ್ ದಲಿತರು, ಬುಡಕಟ್ಟುಗಳು ಮತ್ತು ಹಿಂದುಳಿದ ಸಮುದಾಯಗಳನ್ನು ಮತಬ್ಯಾಂಕ್ ಆಗಿ ಬಳಸಿಕೊಂಡರು ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗ್ತಾರೆ, ದೇಶದಿಂದ ಭಯೋತ್ಪಾದನೆ, ನಕ್ಸಲಿಸಂ ಸಂಪೂರ್ಣವಾಗಿ ನಿರ್ಮೂಲನೆ ಮಾಡ್ತಾರೆ: ಅಮಿತ್ ಶಾ
ಅಮಿತ್ ಶಾ

Updated on: Feb 18, 2024 | 12:42 PM

ನರೇಂದ್ರ ಮೋದಿ(Narendra Modi)ಯವರು ಮತ್ತೆ ಪ್ರಧಾನಿಯಾಗುತ್ತಾರೆ ದೇಶದಿಂದ ಭಯೋತ್ಪಾದನೆ, ನಕ್ಸಲಿಸಂನ್ನು ನಿರ್ಮೂಲನೆ ಮಾಡುತ್ತಾರೆ ಎಂದು ಗೃಹ ಸಚಿವ ಅಮಿತ್ ಶಾ(Amit Shah) ಹೇಳಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಪ್ರಚಂಡ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಮೂರನೇ ಅವಧಿಕಾರದ ಗದ್ದುಗೆ ಏರಿ ಉಗ್ರವಾದ, ಭಯೋತ್ಪಾದನೆ, ನಕ್ಸಲಿಸಂಗೆ ಅಂತ್ಯಹಾಡಲಿದ್ದಾರೆ ಎಂದು ಹೇಳಿದರು.

ದೇಶದಲ್ಲಿ ಬಂದ ಎಲ್ಲಾ ಸರ್ಕಾರಗಳು ತಮ್ಮ ಕಾಲಕ್ಕೆ ತಕ್ಕಂತೆ ಅಭಿವೃದ್ಧಿಗೆ ಶ್ರಮಿಸಿವೆ, ಆದರೆ ಮೋದಿ 10 ವರ್ಷಗಳಲ್ಲಿ ಒಟ್ಟಾರೆ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಭಾರತ ಮತ್ತು ಕಾಂಗ್ರೆಸ್‌ನ ಜನರು ದಲಿತರು ಮತ್ತು ಆದಿವಾಸಿಗಳನ್ನು ಮತಗಳಾಗಿ ಬಳಸಿಕೊಂಡರು, ಆದರೆ ಅವರನ್ನು ನರೇಂದ್ರ ಮೋದಿ ಸರ್ಕಾರ ಅವರ ಕಷ್ಟಗಳನ್ನು ಆಲಿಸಿ ಅವರ ಅಭಿವೃದ್ಧಿಗಾಗಿ ಶ್ರಮಿಸಿದೆ.

ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಶಾ, ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿ ಮಾಡುವುದೇ ಸೋನಿಯಾರ ಗುರಿ ಎಂದು ಹೇಳಿದರು. ಇಂಡಿಯಾ ಮೈತ್ರಿಕೂಟದಲ್ಲಿ ಭಾಗಿಯಾಗಿರುವ ಎಲ್ಲಾ ಪಕ್ಷಗಳು ಹಗರಣದಲ್ಲಿ ಮುಳುಗಿವೆ. ಆಮ್ ಆದ್ಮಿ ಪಕ್ಷವೂ ದೆಹಲಿಯಲ್ಲಿ ಹಲವು ಹಗರಣಗಳನ್ನು ಮಾಡಿದೆ.

ಮತ್ತಷ್ಟು ಓದಿ: ಮೈಸೂರು: ಜೆಡಿಎಸ್ ಮೈತ್ರಿ ವಿರುದ್ಧ ಅಪಸ್ವರ ಎತ್ತಿದ ಬಿಜೆಪಿ ನಾಯಕರಿಗೆ ಅಮಿತ್ ಶಾ ಖಡಕ್ ಎಚ್ಚರಿಗೆ

ಪಾಂಡವರು, ಕೌರವರಂತೆ ಲೋಕಸಭಾ ಚುನಾವಣೆಗೂ ಮುನ್ನ ಎರಡು ಪಾಳಯಗಳು ಏರ್ಪಟ್ಟಿವೆ. ಮೋದಿ ನೇತೃತ್ವದ ಎನ್​ಡಿಎ ಮೈತ್ರಿಕೂಟ ರಾಷ್ಟ್ರವೇ ಮೊದಲು ಎಂಬುದು ಅದರ ಆಧಾರ, ಆದರೆ ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡುವುದು ಸೋನಿಯಾ ಗುರಿ, ಮಗಳನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದು ಶರದ್ ಪವಾರ್ ಗುರಿ, ಮಗನನ್ನು ಸಿಎಂ ಮಾಡುವುದು ಉದ್ಧವ್ ಠಾಕ್ರೆ ಗುರಿ, ಮಗನನ್ನು ಸಿಎಂ ಮಾಡುವುದು ಲಾಲು ಯಾದವ್ ಗುರಿಯಾಗಿದ್ದರೆ, ಮಗನನ್ನು ಸಿಎಂ ಮಾಡುವುದು ಮುಲಾಯಂ ಅವರ ಗುರಿಯಾಗಿದೆ.

ಮೋದಿ ಸರ್ಕಾರದ ಅಡಿಯಲ್ಲಿ ಭದ್ರತಾ ನೀತಿ, ವಿದೇಶಾಂಗ ನೀತಿ ಎರಡೂ ಬಲಿಷ್ಠವಾಗಿದೆ. ಇದು ರೈತರು ಮತ್ತು ಬಡ ಕೂಲಿಕಾರ್ಮಿಕರ ಸರ್ಕಾರ. ದೇಶದ ಭದ್ರತೆಗೆ ಮೊದಲ ಆದ್ಯತೆ ಎಂದರು. ಪ್ರಧಾನಿ ಮೋದಿ ನೇತೃತ್ವದಲ್ಲಿ ರೈತರ ಕಲ್ಯಾಣವಾಗಲಿದೆ, ಜಗತ್ತಿನ ಎಲ್ಲೇ ಹೋದರು ನೀವು ಮೋದಿಯವರ ಭಾರತದಿಂದ ಬಂದಿದ್ದೀರಾ ಎಂದು ಅಲ್ಲಿನ ಜನರು ಕೇಳುತ್ತಾರೆ.

ಈ ಗುರುತನ್ನು ಜಗತ್ತಿನಲ್ಲಿ ಮೂಡಿಸುವ ಕೆಲಸವನ್ನು ಮೋದಿ ಮಾಡಿದ್ದಾರೆ. 2047ರಲ್ಲಿ ಭಾರತವು ಸಂಪೂರ್ಣ ಅಭಿವೃದ್ಧಿ ಹೊಂದಿದ ಮತ್ತು ಸ್ವಾವಲಂಬಿ ಭಾರತವಾಗಬೇಕೆಂಬ ಗುರಿಯನ್ನು ಇಡೀ ರಾಷ್ಟ್ರದ ಮುಂದಿಟ್ಟಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us