ಪ್ರಜ್ವಲ್ ಬಗ್ಗೆ ನಮ್ಮ ನಿಲುವು ಸ್ಪಷ್ಟ, ಮಹಿಳೆಯರ ಮೇಲಿನ ದೌರ್ಜನ್ಯ ಎಂದೂ ಸಹಿಸುವುದಿಲ್ಲ: ಅಮಿತ್ ಶಾ

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಮೊಮ್ಮಗ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಬಗ್ಗೆ ಬಿಜೆಪಿ ಸ್ಪಷ್ಟ ನಿಲುವು ಹೊಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಗುವಾಹಟಿಯಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಶಾ , ನಾವು ದೇಶದ ಮಾತೃಶಕ್ತಿ ಜೊತೆ ನಿಲ್ಲುತ್ತೇವೆ ,ಕರ್ನಾಟಕದಲ್ಲಿರುವುದು ಕಾಂಗ್ರೆಸ್​ ಸರ್ಕಾರ, ಇದುವರೆಗೆ ಏಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದ್ದಾರೆ.

ಪ್ರಜ್ವಲ್ ಬಗ್ಗೆ ನಮ್ಮ ನಿಲುವು ಸ್ಪಷ್ಟ, ಮಹಿಳೆಯರ ಮೇಲಿನ ದೌರ್ಜನ್ಯ ಎಂದೂ ಸಹಿಸುವುದಿಲ್ಲ: ಅಮಿತ್ ಶಾ
ಅಮಿತ್ ಶಾ
Image Credit source: India Today

Updated on: Apr 30, 2024 | 11:36 AM

ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ವಿವಾದದಲ್ಲಿ ಸಿಲುಕಿರುವ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು,  ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿದೆ, ಅವರು ಇನ್ನೂ ಏಕೆ ಕ್ರಮ ಕೈಗೊಂಡಿಲ್ಲ? ಜೆಡಿಎಸ್ ಕೂಡ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಮಹಿಳೆಯರನ್ನು ಅವಮಾನಿಸಬಾರದು. ಇದನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದರು.

ನಾವು ದೇಶದ ಮಾತೃಶಕ್ತಿಯೊಂದಿಗಿದ್ದೇವೆ, ಮಹಿಳಾ ಶಕ್ತಿಯೊಂದಿಗೆ ನಿಲ್ಲುತ್ತೇವೆ ಎಂಬುದು ಭಾರತೀಯ ಜನತಾ ಪಕ್ಷದ ನಿಲುವು ಸ್ಪಷ್ಟವಾಗಿದೆ. ಮಾತೃಶಕ್ತಿಗೆ ಮಾಡಿದ ಅವಮಾನವನ್ನು ಎಂದೂ ಸಹಿಸುವುದಿಲ್ಲ ಎಂಬ ಬದ್ಧತೆಯನ್ನು ನರೇಂದ್ರ ಮೋದಿಯವರು ಹೊಂದಿದ್ದಾರೆ.

ನಮ್ಮ ಮೇಲೆ ಆರೋಪ ಮಾಡಲು ಹೊರಟಿರುವ ಕಾಂಗ್ರೆಸ್ ಪಕ್ಷಕ್ಕೆ ನಾನೊಂದು ಸಣ್ಣ ವಿಚಾರವನ್ನು ಕೇಳಬಯಸುತ್ತೇನೆ, ಅಲ್ಲಿ ಯಾವ ಸರ್ಕಾರವಿದೆ. ಇದುವರೆಗೂ ಏಕೆ ಕ್ರಮ ಕೈಗೊಂಡಿಲ್ಲ? ಕಾನೂನು ಸುವ್ಯವಸ್ಥೆಯ ವಿಷಯ ರಾಜ್ಯ ಸರ್ಕಾರಕ್ಕೆ ಸೇರಿದ್ದು. ನಾನು ಪ್ರಿಯಾಂಕಾ ಗಾಂಧಿಗೆ ಹೇಳಲು ಬಯಸುತ್ತೇನೆ, ನಮ್ಮನ್ನು ಪ್ರಶ್ನಿಸುವ ಬದಲು ಅವರು ತಮ್ಮ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ಬಳಿ ಏಕೆ ತನಿಖೆ ನಡೆಸುತ್ತಿಲ್ಲ ಎಂದು ಕೇಳಲಿ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಪ್ರಜ್ವಲ್ ರೇವಣ್ಣ ಪ್ರಕರಣ: ಸಿದ್ದರಾಮಯ್ಯ, ರೇವಣ್ಣ ಮಧ್ಯೆ ಒಪ್ಪಂದ; ಪ್ರಲ್ಹಾದ್ ಜೋಶಿ ಗಂಭೀರ ಆರೋಪ

ನಾವು ತನಿಖೆಯ ಪರವಾಗಿದ್ದೇವೆ ಮತ್ತು ನಮ್ಮ ಮಿತ್ರ ಪಕ್ಷ ಜೆಡಿಎಸ್ ಕೂಡ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ ಎಂದು ಅಮಿತ್ ಶಾ ಹೇಳಿದರು. ಇಂದು ಅವರ ಕೋರ್ ಕಮಿಟಿ ಸಭೆ ನಡೆಯಲಿದ್ದು, ಮುಂದಿನ ಕಟ್ಟುನಿಟ್ಟಿನ ಕ್ರಮವನ್ನು ನಿರೀಕ್ಷಿಸಲಾಗಿದೆ.

ಅನೇಕ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಅಶ್ಲೀಲ ವಿಡಿಯೋಗಳ ವಿವಾದದ ನಡುವೆಯೇ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದೆ. ಲೋಕಸಭೆ ಚುನಾವಣೆಯ 2 ನೇ ಹಂತದಲ್ಲಿ ಏಪ್ರಿಲ್ 26 ರಂದು ಅವರು ಮತದಾನ ಮುಗಿದ ಒಂದು ದಿನದ ನಂತರ ವೀಡಿಯೊ ತುಣುಕುಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡವು. ಪ್ರಜ್ವಲ್ ದೇಶ ತೊರೆದು ಜರ್ಮನಿಗೆ ತೆರಳಿದ್ದಾರೆ ಎನ್ನಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us