AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿವೃದ್ಧಿ ಹೊಂದಿದ ಭಾರತ ನೋಡಲು ಖರ್ಗೆ ಬದುಕಿರಬೇಕು: ಅಮಿತ್ ಶಾ

ಅಭಿವೃದ್ಧಿ ಹೊಂದಿದ ಭಾರತವ ನೋಡುವವರೆಗೂ ನೀವು ಬದುಕಿರಬೇಕು, ದೀರ್ಘ ಆಯುಷ್ಯ ನಿಮ್ಮದಾಗಲಿ ಎಂದು ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ನನಗೆ ಈಗ 83 ವರ್ಷ, ಪ್ರಧಾನಿ ಮೋದಿಯನನ್ನು ಕುರ್ಚಿಯಿಂದ ಕೆಳಗಿಳಿಸುವವರೆಗೂ ನಾನು ಸಾಯುವುದಿಲ್ಲ ಎಂದು ಹೇಳಿಕೆ ನೀಡಿದ್ದ ಖರ್ಗೆಗೆ ಶಾ ಪ್ರತ್ಯುತ್ತರ ನೀಡಿದ್ದಾರೆ.

ಅಭಿವೃದ್ಧಿ ಹೊಂದಿದ ಭಾರತ ನೋಡಲು ಖರ್ಗೆ ಬದುಕಿರಬೇಕು: ಅಮಿತ್ ಶಾ
ಅಮಿತ್ ಶಾ-ಮಲ್ಲಿಕಾರ್ಜುನ ಖರ್ಗೆImage Credit source: OpIndia
ನಯನಾ ರಾಜೀವ್
|

Updated on: Sep 30, 2024 | 11:06 AM

Share

ಅಭಿವೃದ್ಧಿ ಹೊಂದಿದ ಭಾರತವ ನೋಡಲು ನೀವು ಬದುಕಿರಬೇಕು, ದೀರ್ಘ ಆಯುಷ್ಯ ನಿಮ್ಮದಾಗಲಿ ಎಂದು ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ನನಗೆ ಈಗ 83 ವರ್ಷ, ಪ್ರಧಾನಿ ಮೋದಿಯನನ್ನು ಕುರ್ಚಿಯಿಂದ ಕೆಳಗಿಳಿಸುವವರೆಗೂ ನಾನು ಸಾಯುವುದಿಲ್ಲ ಎಂದು ಹೇಳಿಕೆ ನೀಡಿದ್ದ ಖರ್ಗೆಗೆ ಶಾ ಪ್ರತ್ಯುತ್ತರ ನೀಡಿದ್ದಾರೆ.

ಖರ್ಗೆಯವರು ಸಂಪೂರ್ಣವಾಗಿ ಅಸಹ್ಯಕರ ಮತ್ತು ಅವಮಾನಕರವಾಗಿ ಮಾತನಾಡಿದ್ದಾರೆ, ಅನಾವಶ್ಯಕವಾಗಿ ವೈಯಕ್ತಿಕ ವಿಚಾರಗಳಿಗೆ ಮೋದಿಯವರನ್ನು ಎಳೆದು ತಂದಿದ್ದಾರೆ. ಪ್ರಧಾನಿ ಮೋದಿಯವರ ಮೇಲೆ‌ ಎಷ್ಟು ದ್ವೇಷ ಇದೆ ಎನ್ನುವುದನ್ನು ತೋರಿಸುತ್ತದೆ.

ಖರ್ಗೆಯವರ ಆರೋಗ್ಯ ಸುಧಾರಿಸಲಿ ಎಂದು ಮೋದಿಯವರು ಹಾಗೂ ನಾನು ಪ್ರಾರ್ಥನೆ ಮಾಡುತ್ತೇನೆ ಮೋದಿ 2047 ಅಭಿವೃದ್ಧಿ ಹೊಂದಿದ ಭಾರತವನ್ನು ನೋಡುವವರೆಗೂ ಬದುಕಿರಲಿ ಎಂದು ಹೇಳಿದ್ದಾರೆ. ಜಮ್ಮುವಿನ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಾ ಖರ್ಗೆ ಅಸ್ವಸ್ಥರಾಗಿದ್ದರು. ಈ ಸಂದರ್ಭದಲ್ಲಿ ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ನಾನು ಸಾಯುವುದಿಲ್ಲ ಎಂದರು.

ಮತ್ತಷ್ಟು ಓದಿ: ಜಮ್ಮುವಿನಲ್ಲಿ ಸಭೆಯ ವೇಳೆ ಅಸ್ವಸ್ಥಗೊಂಡಿದ್ದ ಖರ್ಗೆ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಪ್ರಧಾನಿ ಮೋದಿಯವರ ಬಗ್ಗೆ ಕಾಂಗ್ರೆಸ್​ನವರಿಗೆ ಎಷ್ಟು ದ್ವೇಷ ಮತ್ತು ಭಯವಿದೆ ಎಂಬುದನ್ನು ಇದು ತೋರಿಸುತ್ತದೆ, ಅವರು ನಿರಂತರವಾಗಿ ಮೋದಿ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ಶಾ ಹೇಳಿದರು. ಖರ್ಗೆ ಅವರ ಆರೋಗ್ಯದ ಬಗ್ಗೆ ಹೇಳುವುದಾದರೆ, ಮೋದಿ ಕೂಡ ಪ್ರಾರ್ಥಿಸುತ್ತಾರೆ, ನಾನು ಪ್ರಾರ್ಥಿಸುತ್ತೇನೆ ಮತ್ತು ನಾವೆಲ್ಲರೂ ಅವರು ದೀರ್ಘ ಮತ್ತು ಆರೋಗ್ಯಕರವಾಗಿ ಬದುಕಲಿ ಎಂದು ಪ್ರಾರ್ಥಿಸುತ್ತೇವೆ. ಅವರು ಇನ್ನೂ ಹಲವು ವರ್ಷಗಳ ಕಾಲ ಬದುಕಲಿ ಮತ್ತು 2047 ರ ಹೊತ್ತಿಗೆ ಅಭಿವೃದ್ಧಿ ಹೊಂದಿದ ಭಾರತದ ನಿರ್ಮಾಣವನ್ನು ನೋಡಲು ಬದುಕಲಿ ಎಂದರು.

ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ಕರೆ ಮಾಡಿ ಖರ್ಗೆಯವರು ಆರೋಗ್ಯ ವಿಚಾರಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಗಣಿಗಾರಿಕೆ ಮತ್ತು ಮದ್ಯದ ಒಪ್ಪಂದಗಳಂತಹ ಪ್ರಮುಖ ಕ್ಷೇತ್ರಗಳಲ್ಲಿ ಹೊರಗಿನವರಿಗೆ ಪ್ರಾಬಲ್ಯ ಸಾಧಿಸಲು ಬಿಜೆಪಿ ಅವಕಾಶ ನೀಡುತ್ತಿದೆ ಎಂದು ಖರ್ಗೆ ಆರೋಪಿಸಿದರು.

ಕೆಲಕಾಲ ಅವರನ್ನು ವೇದಿಕೆಯ ಮೇಲೆ ಕೂರಿಸಲಾಯಿತು. ಸ್ವಲ್ಪ ಹೊತ್ತು ಕುಳಿತ ನಂತರ ಮತ್ತೊಮ್ಮೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಅವರು ನಂತರ ವೇದಿಕೆ ಮೇಲೆ ನಿಂತು ಭಾಷಣ ಆರಂಭಿಸಿ ಜಮ್ಮು-ಕಾಶ್ಮೀರ ರಾಜ್ಯ ಸ್ಥಾನಮಾನ ಮರುಸ್ಥಾಪಿಸಲು ಹೋರಾಟ ನಡೆಸುತ್ತೇವೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ