AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಗಾಸಸ್​ ಸ್ಪೈವೇರ್​: ಅಂತಾರಾಷ್ಟ್ರೀಯ ಏಜೆನ್ಸಿಗಳು, ಭಾರತದ ಪ್ರತಿಪಕ್ಷಗಳಿಗೆ ಗೃಹ ಸಚಿವ ಅಮಿತ್​ ಶಾರಿಂದ ಕಟು ತಿರುಗೇಟು

ಸಂಸತ್ತಿನಲ್ಲಿ ಪ್ರಾರಂಭವಾಗಿರುವ ಮುಂಗಾರು ಅಧಿವೇಶನದಲ್ಲಿ ಚರ್ಚೆಗೆ ಅಡ್ಡಿಯುಂಟುಮಾಡಲು ಪ್ರತಿಪಕ್ಷಗಳು ಇದೀಗ ಪೆಗಾಸಸ್​ ಸ್ಪೈವೇರ್​ ವಿಷಯವನ್ನು ದೊಡ್ಡದು ಮಾಡುತ್ತಿವೆ ಎಂದು ಅಮಿತ್ ಶಾ ತಿಳಿಸಿದ್ದಾರೆ.

ಪೆಗಾಸಸ್​ ಸ್ಪೈವೇರ್​: ಅಂತಾರಾಷ್ಟ್ರೀಯ ಏಜೆನ್ಸಿಗಳು, ಭಾರತದ ಪ್ರತಿಪಕ್ಷಗಳಿಗೆ ಗೃಹ ಸಚಿವ ಅಮಿತ್​ ಶಾರಿಂದ ಕಟು ತಿರುಗೇಟು
ಅಮಿತ್ ಶಾ (ಸಂಗ್ರಹ ಚಿತ್ರ)
TV9 Web
| Edited By: |

Updated on: Jul 20, 2021 | 9:35 AM

Share

ದೆಹಲಿ: ಸದ್ಯ ಇಸ್ರೇಲಿ ಸ್ಪೈವೇರ್​ ಪೆಗಾಸಸ್​ ಬಗ್ಗೆ ಭಾರತದಲ್ಲಿ ಮತ್ತೊಮ್ಮೆ ಚರ್ಚೆ ಭುಗಿಲೆದ್ದಿದೆ. ಪೆಗಾಸಸ್​ ಸ್ಪೈವೇರ್​ ಮೂಲಕ ಯಾರೆಲ್ಲರ ಮೇಲೆ ಕಣ್ಗಾವಲು ಇಡಲಾಗಿದೆ ಎಂಬ ಪಟ್ಟಿಯನ್ನು ದಿ ವೈರ್​ ನ್ಯೂಸ್​ ವೆಬ್​​ಸೈಟ್​ ಬಿಡುಗಡೆ ಮಾಡಿದ್ದು ಅದರಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ಪ್ರಶಾಂತ್​ ಕಿಶೋರ್​, ಅಭಿಷೇಕ್​ ಬ್ಯಾನರ್ಜಿ ಮತ್ತಿತರರ ಹೆಸರು ಇದೆ. ಇದೀಗ ಪ್ರತಿಪಕ್ಷಗಳು ಇದೇ ವಿಚಾರವಾಗಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

ಸದ್ಯ ಚರ್ಚೆಯಲ್ಲಿರುವ ಪೆಗಾಸಸ್​ ಇಸ್ರೇಲಿ ಸ್ಪೈವೇರ್​ ಬಗ್ಗೆ ಮಾತನಾಡಿ, ಕಾಂಗ್ರೆಸ್​ ಮತ್ತು ಅಂತಾರಾಷ್ಟ್ರೀಯ ಸಂಸ್ಥೆಗಳಿಗೆ ತಿರುಗೇಟು ನೀಡಿದ ಗೃಹ ಸಚಿವ ಅಮಿತ್​ ಶಾ, ಯಾರಿಗೂ ತಮ್ಮ ಪಿತೂರಿಯಿಂದ ಭಾರತದ ಅಭಿವೃದ್ಧಿಯನ್ನು ಹಳಿತಪ್ಪಿಸಲು ಸಾಧ್ಯವಿಲ್ಲ ಎಂದು ಕಟುವಾಗಿಯೇ ಹೇಳಿದ್ದಾರೆ.

ಭಾರತದಲ್ಲಿ ಹಾಲಿ ಇಬ್ಬರು ಸಚಿವರು, 40ಕ್ಕೂ ಹೆಚ್ಚು ಮಂದಿ ಪತ್ರಕರ್ತರು, ಮೂವರು ಪ್ರತಿಪಕ್ಷ ನಾಯಕರು, ಹಾಲಿ ನ್ಯಾಯಾಧೀಶರೊಬ್ಬರು, ಉದ್ಯಮಿಗಳು, ಹಲವು ಕಾರ್ಯಕರ್ತರು ಸೇರಿ 300 ಮಂದಿಯ ಫೋನ್​ನ್ನು ಹ್ಯಾಕ್​ ಮಾಡಿ, ಅವರ ಮೇಲೆ ಕಣ್ಗಾವಲು ಇಡಲಾಗಿದೆ. ಅದರಲ್ಲೂ ಈ ಸ್ಪೈವೇರ್​​ ಸರ್ಕಾರಿ ಸಂಸ್ಥೆಗಳಿಗೆ ಮಾತ್ರ ಮಾರಾಟವಾಗಿದೆ ಎಂದೂ ಭಾನುವಾರ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ. ಆದರೆ ಇದರಲ್ಲಿ ಸರ್ಕಾರದ ಪಾತ್ರ ಏನೇನೂ ಇಲ್ಲವೆಂದು ಅಮಿತ್​ ಶಾ ಸಮರ್ಥಿಸಿಕೊಂಡಿದ್ದಾರೆ.

ಸಂಸತ್ತಿನಲ್ಲಿ ಪ್ರಾರಂಭವಾಗಿರುವ ಮುಂಗಾರು ಅಧಿವೇಶನದಲ್ಲಿ ಚರ್ಚೆಗೆ ಅಡ್ಡಿಯುಂಟುಮಾಡಲು ಪ್ರತಿಪಕ್ಷಗಳು ಇದೀಗ ಪೆಗಾಸಸ್​ ಸ್ಪೈವೇರ್​ ವಿಷಯವನ್ನು ದೊಡ್ಡದು ಮಾಡುತ್ತಿವೆ. ಇಷ್ಟುದಿನ ನನಗೆ ಟೀಕಿಸಲು ಕ್ರೊನೊಲಜಿ ಅರ್ಥ ಮಾಡಿಕೊಳ್ಳಿ ಎಂಬ ವಾಕ್ಯವನ್ನು ಉಪಯೋಗಿಸುತ್ತಿದ್ದರು. ನಾನು ಅದೇ ವಾಕ್ಯವನ್ನು ತಿರುಗಿ ಈಗ ಅವರಿಗೇ ಹೇಳುತ್ತೇನೆ. ಕ್ರೊನೊಲಜಿ ಅರ್ಥ ಮಾಡಿಕೊಳ್ಳಿ ಎಂದು ಅಮಿತ್​ ಶಾ ತಿರುಗೇಟು ನೀಡಿದರು. ವಿಶ್ವಮಟ್ಟದಲ್ಲಿ ಭಾರತವನ್ನು ಅವಮಾನಿಸುವ ಒಂದೇ ಕಾರಣವನ್ನಿಟ್ಟುಕೊಂಡು ಈ ಬೇಹುಗಾರಿಕೆ ವರದಿ ಮಾಡಲಾಗಿದೆ. ಆದರೆ ಪ್ರಧಾನಿ ಮೋದಿ ಸರ್ಕಾರದ ಏಕೈಕ ಗುರಿಯೆಂದರೆ ರಾಷ್ಟ್ರದ ಅಭಿವೃದ್ಧಿ. ಮತ್ತು ಅದಕ್ಕೆ ಏನೇನು ಬೇಕೋ ಅದನ್ನು ಮಾತ್ರ ಮಾಡುತ್ತದೆ ಎಂದು ಅಮಿತ್​ ಶಾ ಹೇಳಿದ್ದಾರೆ.

ಇದನ್ನೂ ಓದಿ: ಗರಿಬಿಚ್ಚಿ ಕುಣಿಯುತ್ತಿದ್ದ ನವಿಲಿನ ಮೇಲೆ ಹುಲಿ ದಾಳಿ; ರಾಷ್ಟ್ರಪಕ್ಷಿ ಹಾಗೂ ರಾಷ್ಟ್ರಪ್ರಾಣಿ ಮುಖಾಮುಖಿಯಾದ ವಿಡಿಯೋ ವೈರಲ್

Amit Shah strong rebuttal to Opposition Leaders on Pegasus snooping row

Follow Us
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ