AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಗ ಉಳಿದಿರುವುದು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮಾತ್ರ; ಉದ್ಧವ್ ಠಾಕ್ರೆಗೆ ಅಮಿತ್ ಶಾ ಟಾಂಗ್

ಮಹಾರಾಷ್ಟ್ರ ರಾಜಕಾರಣದಲ್ಲಿ ನಡೆಯುತ್ತಿರುವ ಕುತೂಹಲಕಾರಿ ಬೆಳವಣಿಗೆಗಳ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉದ್ಧವ್ ಠಾಕ್ರೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉದ್ಧವ್ ಠಾಕ್ರೆ ಅವರ ಶಿವಸೇನೆ ಬಣದ 9 ಲೋಕಸಭಾ ಸಂಸದರಲ್ಲಿ 6 ಮಂದಿ ದೆಹಲಿಯಲ್ಲಿ ನಡೆದ ಸಂಸದೀಯ ಸಭೆಗೆ ಗೈರುಹಾಜರಾಗಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪ್ರತ್ಯೇಕ ಗುಂಪು ರಚಿಸಲು ಅನುಮತಿ ಕೋರಿ ಪತ್ರ ಸಲ್ಲಿಸಿದ ಬೆನ್ನಲ್ಲೇ ಅಮಿತ್ ಶಾ ಅವರಿಂದ ಈ ಹೇಳಿಕೆ ಬಂದಿದೆ.

ಈಗ ಉಳಿದಿರುವುದು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮಾತ್ರ; ಉದ್ಧವ್ ಠಾಕ್ರೆಗೆ ಅಮಿತ್ ಶಾ ಟಾಂಗ್
Amit Shah In KolhapurImage Credit source: PTI
ಸುಷ್ಮಾ ಚಕ್ರೆ
|

Updated on: Jun 20, 2026 | 7:19 PM

Share

ಕೊಲ್ಲಾಪುರ, ಜೂನ್ 20: ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೆ ಸಂಚಲನ ಮೂಡಿದ್ದು, ಶಿವಸೇನಾ (UBT) ಮುಖ್ಯಸ್ಥ ಉದ್ಧವ್ ಠಾಕ್ರೆ (Uddhav Thackeray) ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಮಹಾರಾಷ್ಟ್ರದಲ್ಲಿ ಈಗ ಕೇವಲ ಒಂದೇ ಶಿವಸೇನೆ ಇದೆ. ಅದು ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ” ಎಂದು ಅಮಿತ್ ಶಾ ಹೇಳಿದ್ದಾರೆ. ಉದ್ಧವ್ ಠಾಕ್ರೆ ಬಣದ ಸಂಸದರು ಬಂಡಾಯದ ಹಾದಿಯಲ್ಲಿದ್ದಾರೆ ಎಂಬ ವದಂತಿಗಳ ಬೆನ್ನಲ್ಲೇ ಈ ಹೇಳಿಕೆ ಹೊರಬಿದ್ದಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.

ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಾ ಉದ್ಧವ್ ಠಾಕ್ರೆ ಬಣವನ್ನು ಲೇವಡಿ ಮಾಡಿದ ಅಮಿತ್ ಶಾ, “ಬಾಳಾಸಾಹೇಬ್ ಠಾಕ್ರೆ ಅವರ ನೈಜ ಹಿಂದೂತ್ವದ ಸಿದ್ಧಾಂತಗಳನ್ನು ಏಕನಾಥ್ ಶಿಂಧೆ ಅವರು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಹೀಗಾಗಿ, ಅಧಿಕೃತ ಮತ್ತು ನಿಜವಾದ ಶಿವಸೇನೆ ಎಂದರೆ ಅದು ಶಿಂಧೆ ನೇತೃತ್ವದ ಪಕ್ಷ ಮಾತ್ರ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಜೊತೆ ವಿಲೀನಕ್ಕೆ ಉದ್ಧವ್ ಠಾಕ್ರೆ ಪ್ಲಾನ್; ಶಿವಸೇನೆಯ 6 ಬಂಡಾಯ ಸಂಸದರಿಂದ ಸ್ಪೀಕರ್‌ಗೆ ದೂರು

ಅಮಿತ್ ಶಾ ಅವರ ಈ ಹೇಳಿಕೆಯು ಕೇವಲ ರಾಜಕೀಯ ಟೀಕೆಯಾಗಿರದೆ, ಪ್ರಸ್ತುತ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಆಂತರಿಕ ರಾಜಕೀಯ ಬೆಳವಣಿಗೆಗಳ ಸ್ಪಷ್ಟ ಸೂಚನೆಯಾಗಿದೆ ಎನ್ನಲಾಗಿದೆ. ವರದಿಗಳ ಪ್ರಕಾರ, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (UBT) ಬಣದ ಹಲವು ಹಾಲಿ ಸಂಸದರು ಮತ್ತು ಹಿರಿಯ ನಾಯಕರು ಅವರ ನಾಯಕತ್ವದ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಅವರೆಲ್ಲರೂ ಶೀಘ್ರದಲ್ಲೇ ಏಕನಾಥ್ ಶಿಂಧೆ ಬಣ ಅಥವಾ ಎನ್‌ಡಿಎ ಪಾಳಯವನ್ನು ಸೇರಲಿದ್ದಾರೆ ಎಂಬ ವದಂತಿಗಳು ದಟ್ಟವಾಗಿವೆ.

ಇದನ್ನೂ ಓದಿ: ಬೇರೆ ಪಕ್ಷಕ್ಕೆ ಹೋಗುವುದಿದ್ದರೆ ಮೊದಲು ರಾಜೀನಾಮೆ ಕೊಡಿ; ಶಿವಸೇನೆ ಸಂಸದರಿಗೆ ಸಂಜಯ್ ರಾವತ್ ಸವಾಲು

ಭಾರತೀಯ ಚುನಾವಣಾ ಆಯೋಗವು ಈಗಾಗಲೇ ಏಕನಾಥ್ ಶಿಂಧೆ ಬಣಕ್ಕೆ ‘ಬಿಲ್ಲು ಮತ್ತು ಬಾಣ’ ಚಿಹ್ನೆ ಹಾಗೂ ‘ಶಿವಸೇನೆ’ ಎಂಬ ಮೂಲ ಹೆಸರಿನ ಮಾನ್ಯತೆ ನೀಡಿದೆ. ಇದನ್ನು ತಮ್ಮ ಭಾಷಣದ ಮೂಲಕ ಜನರಿಗೆ ಮತ್ತೊಮ್ಮೆ ನೆನಪಿಸಿದ ಅಮಿತ್ ಶಾ, ಉದ್ಧವ್ ಠಾಕ್ರೆ ಅವರ ಪಕ್ಷವು ಈಗ ಕೇವಲ ಒಂದು ಬಣವಾಗಿ ಮಾತ್ರ ಉಳಿದಿದೆ ಎಂಬುದನ್ನು ಒತ್ತಿಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ