AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WITT: ಇಡಿ, ಸಿಬಿಐ ದಾಳಿಗಳನ್ನು ಪ್ರಶ್ನಿಸುತ್ತಿರುವವರಿಗೆ ಖಡಕ್ ಉತ್ತರ ಕೊಟ್ಟ ಶಾ!

ದೇಶದ ನಂಬರ್ ಒನ್ ನ್ಯೂಸ್ ನೆಟ್​ವರ್ಕ್​ ಟಿವಿ9 ನಡೆಸಿದ ಮೂರು ದಿನಗಳ ವಾಟ್ ಇಂಡಿಯಾ ಥಿಂಕ್ಸ್‌ ಟುಡೇ ಸಮಾವೇಶದ ಕೊನೆ ದಿನಾದ ಇಂದು (ಫೆಬ್ರವರಿ 27) ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿವಹಿಸಿದ್ದು, ಟಿವಿ9 ಜಾಗತಿಕ ಸಮಾವೇಶವನ್ನ ಅಮಿತ್ ಶಾ ಶ್ಲಾಘಿಸಿದರು. ಅಲ್ಲದೇ ಇದೇ ವೇಳೆ ಭ್ರಷ್ಟ ರಾಜಕಾರಣಿಗಳ ಕುರಿತು ಮಾತನಾಡಿದರು.

WITT: ಇಡಿ, ಸಿಬಿಐ ದಾಳಿಗಳನ್ನು  ಪ್ರಶ್ನಿಸುತ್ತಿರುವವರಿಗೆ ಖಡಕ್ ಉತ್ತರ ಕೊಟ್ಟ ಶಾ!
TV9 Web
| Edited By: |

Updated on:Feb 27, 2024 | 10:42 PM

Share

ನವದೆಹಲಿ, (ಫೆಬ್ರವರಿ 27): ಟಿವಿ9 ನೆಟ್‌ವರ್ಕ್‌ನ ವಾಟ್ ಇಂಡಿಯಾ ಥಿಂಕ್ಸ್ ಟುಡೇ (WITT) ಕಾರ್ಯಕ್ರಮದ ಕೊನೆ ದಿನವಾದ ಇಂದು(ಫೆ.27) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಭಾಗವಹಿಸಿದರು. ವೇಳೆ ಭ್ರಷ್ಟ ರಾಜಕಾರಣಿಗಳ ವಿರುದ್ಧ ಕಠಿಣ ಕ್ರಮದ ಕುರಿತು ಮಾತನಾಡಿ ಅಮಿತ್ ಶಾ, ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದ ಹಗರಣಗಳನ್ನು ಪ್ರಸ್ತಾಪಿಸಿ ವಾಗ್ದಾಳಿ ನಡೆಸಿದರು. ಅಲ್ಲದೇ ಕೇಂದ್ರ ತನಿಖಾ ಸಂಸ್ಥೆಗಳ ಬಗ್ಗೆ ಪ್ರಶ್ನಿಸುತ್ತಿರುವ ಕಾಂಗ್ರೆಸ್​​ಗೆ ಖಡಕ್ ಉತ್ತರ ನೀಡಿದ್ದಾರೆ.

ಇಡಿ ಮತ್ತು ಸಿಬಿಐನಂತಹ ಕೇಂದ್ರೀಯ ತನಿಖಾ ಸಂಸ್ಥೆಗಳ ಕ್ರಮಗಳ ಬಗ್ಗೆ ನಿರಂತರವಾಗಿ ಪ್ರತಿಪಕ್ಷಗಳು ಪ್ರಶ್ನಿಸುತ್ತಿರುವ ಬಗ್ಗೆ ಉತ್ತರಿಸಿದ ಶಾ, ಕೇಂದ್ರೀಯ ತನಿಖಾ ಸಂಸ್ಥೆಗಳು ಯಾರ ವಿರುದ್ಧ ಕ್ರಮ ಕೈಗೊಳ್ಳುತ್ತಿವೆಯೋ ಅವರಲ್ಲಿ ಶೇಕಡಾ 5 ರಷ್ಟು ಮಾತ್ರ. ಉಳಿದ ಕಪ್ಪುಹಣ ಹೊಂದಿರುವವರ ಬಗ್ಗೆ ಮಾತನಾಡಿದರೆ ಅವರ ಸಂಖ್ಯೆ 95 ಇದೆ ಎಂದು ಟಾಂಗ್ ಕೊಟ್ಟರು. ಈ ಮೂಲಕ ಸಿಬಿಐ, ಇಡಿ ದಾಳಿ ಬಗ್ಗೆ ಸಮರ್ಥಿಸಿಕೊಂಡರು.

ಇದನ್ನೂ ಓದಿ: WITT 2024: ಮಕ್ಕಳನ್ನು ಪ್ರಧಾನಿ-ಸಿಎಂ ಮಾಡಲು ಹೊರಟಿರುವ ಕುಟುಂಬ ಪಕ್ಷಗಳ ಮೈತ್ರಿಯೇ ಐಎನ್​ಡಿಐ: ಅಮಿತ್ ಶಾ

ದೇಶದಲ್ಲಿ ಯುಪಿಎ ಅಧಿಕಾರದಲ್ಲಿದ್ದಾಗ ಸರ್ಕಾರದೊಳಗೆ ಹಲವು ದೊಡ್ಡ ಹಗರಣಗಳು ನಡೆದಿದ್ದವು. ಯುಪಿಎ ಸರಕಾರdಲ್ಲಿ ಕಾಮನ್‌ವೆಲ್ತ್, 2ಜಿಯಿಂದ ಕಲ್ಲಿದ್ದಲು ಹಗರಣದವರೆಗೆ ಸಂಪೂರ್ಣವಾಗಿ ಹಗರಣಗಳ ಸರಕಾರವಾಗಿತ್ತು. ಆ ಬಗ್ಗೆ ಈಗ ಕೇಂದ್ರ ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿವೆ ಎಂದು ಹೇಳಿದರು.

ಇನ್ನು ಬಿಜೆಪಿಗೆ ಸೇರ್ಪಡೆಯಾದ ನಾಯಕರ ವಿರುದ್ಧದ ಪ್ರಕರಣಗಳನ್ನು ವಾಪಸ್ ಪಡೆಯಲಾಗಿದೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅಮಿತ್ ಶಾ, ಬಿಜೆಪಿಗೆ ಸೇರ್ಪಡೆಗೊಂಡಿದ್ದರೆ ಅವರ ವಿರುದ್ಧದ ಯಾವುದೇ ಪ್ರಕರಣಗಳನ್ನು ವಾಪಸ್ ಪಡೆದುಕೊಂಡಿಲ್ಲ.ಯಾವುದೇ ಸಂದರ್ಭದಲ್ಲೂ ಕೇಸ್​ಗಳನ್ನು ಹಿಂಪಡೆಯುವುದಿಲ್ಲ. ಕೇಂದ್ರೀಯ ಸಂಸ್ಥೆಗಳಿಂದ ತನಿಖೆ ನಡೆಯುತ್ತಿರುತ್ತವೆ ಎಂದು ಸ್ಪಷ್ಟಪಡಿಸಿದರು.

ಇನ್ನು ಕಾಂಗ್ರೆಸ್​ ಬರೀ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುತ್ತಿರುವ ಕುರಿತ ಮಾತನಾಡಿದ ಅಮಿತ್ ಶಾ, ಈ ಹಿಂದೆ ಇಂದಿರಾ ಗಾಂಧಿಯವರ ಸರ್ಕಾರದ ಅವಧಿಯಲ್ಲಿ ಹೇರಲಾದ ತುರ್ತು ಪರಿಸ್ಥಿತಿಯನ್ನು ನೆನಪಿಸಿ, ಕಾಂಗ್ರೆಸ್ ಪಕ್ಷವು ಪ್ರಜಾಪ್ರಭುತ್ವದ ಬಗ್ಗೆ ಮಾತನಾಡಬಾರದು. ಮಾತನಾಡುವ ನೈತಿಕತೆಯೂ ಇಲ್ಲ ಎಂದರು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:38 pm, Tue, 27 February 24

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ