AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂ ಸರ್ಕಾರದ ಇಲಾಖೆಗಳಲ್ಲಿ ಹೊಸದಾಗಿ ನೇಮಕಗೊಂಡವರಿಗೆ 44,700 ನೇಮಕಾತಿ ಪತ್ರ ವಿತರಿಸಲಿದ್ದಾರೆ ಅಮಿತ್ ಶಾ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುವಾಹಟಿಯ ಶ್ರೀಮಂತ ಶಂಕರದೇವ ಕಲಾಕ್ಷೇತ್ರದಿಂದ ಚಾಂಗ್ಸಾರಿಯಲ್ಲಿ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾನಿಲಯದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಅಸ್ಸಾಂ ಸರ್ಕಾರದ ಇಲಾಖೆಗಳಲ್ಲಿ ಹೊಸದಾಗಿ ನೇಮಕಗೊಂಡವರಿಗೆ 44,700 ನೇಮಕಾತಿ ಪತ್ರ ವಿತರಿಸಲಿದ್ದಾರೆ ಅಮಿತ್ ಶಾ
ಅಸ್ಸಾಂಗೆ ಬಂದಿಳಿದ ಅಮಿತ್ ಶಾ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 25, 2023 | 2:40 PM

Share

ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಇಂದು(ಗುರುವಾರ)  ಗುವಾಹಟಿಗೆ (Guwahati) ಬಂದಿಳಿದಿದ್ದಾರೆ. ಅವರನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma), ಲೋಕಪ್ರಿಯಾ ಗೋಪಿನಾಥ್ ಬೊರ್ಡೊಲೋಯ್ ಅಂತರಾಷ್ಟ್ರೀಯ (LGBI) ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು. ಅಮಿತ್ ಶಾ ಅವರನ್ನು ಸ್ವಾಗತಿಸಲು ಸಂಪುಟದ ಸಚಿವರಾದ ಅಜಂತಾ ನಿಯೋಗ್, ಜಯಂತ ಮಲ್ಲಬರುವಾ, ರಂಜೀತ್ ಕುಮಾರ್ ದಾಸ್, ಲೋಕಸಭೆ ಸಂಸದ ದಿಲೀಪ್ ಸೈಕಿಯಾ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಭಾಬೇಶ್ ಕಲಿತಾ ಕೂಡ ವಿಮಾನ ನಿಲ್ದಾಣದಲ್ಲಿ ಉಪಸ್ಥಿತರಿದ್ದರು.

ಗುವಾಹಟಿಯಲ್ಲಿ ನಡೆಯುವ ಸಮಾರಂಭದಲ್ಲಿ ಅವರು ಅಸ್ಸಾಂ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹೊಸದಾಗಿ ನೇಮಕಗೊಂಡ 44,700 ಕ್ಕೂ ಹೆಚ್ಚು ವ್ಯಕ್ತಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುವಾಹಟಿಯ ಶ್ರೀಮಂತ ಶಂಕರದೇವ ಕಲಾಕ್ಷೇತ್ರದಿಂದ ಚಾಂಗ್ಸಾರಿಯಲ್ಲಿ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾನಿಲಯದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಗುವಾಹಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವವಿದ್ಯಾನಿಲಯದ ತಾತ್ಕಾಲಿಕ ಕ್ಯಾಂಪಸ್ ಅನ್ನು ಶಾ ಉದ್ಘಾಟಿಸಲಿದ್ದಾರೆ. ಅದೇ ಸ್ಥಳದಿಂದ ಕೇಂದ್ರ ಸಚಿವರು ಅಸ್ಸಾಂ ಪೊಲೀಸರಿಗಾಗಿ ಆ್ಯಪ್ ಅನ್ನು ಬಿಡುಗಡೆ ಮಾಡುತ್ತಾರೆ. ಈ ಆ್ಯಪ್ ಮೂಲಕ ಎಫ್‌ಐಆರ್ ದಾಖಲಿಸಬಹುದು.

ಇದನ್ನೂ ಓದಿ:  ಮೋದಿ ಸರ್ಕಾರದ 9ನೇ ವರ್ಷಾಚರಣೆ: ರಾಷ್ಟ್ರವ್ಯಾಪಿ ಸಂಪರ್ಕ ಅಭಿಯಾನ ಆಯೋಜಿಸಲಿದೆ ಬಿಜೆಪಿ

ಗುವಾಹಟಿಯ ಪಶುವೈದ್ಯಕೀಯ ಕಾಲೇಜು ಆಟದ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಸ್ಸಾಂ ಸರ್ಕಾರದ ವಿವಿಧ ಇಲಾಖೆಗಳ ಹೊಸದಾಗಿ ನೇಮಕಗೊಂಡ 44,703 ಅಭ್ಯರ್ಥಿಗಳಿಗೆ ಅಮಿತ್ ಶಾ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:36 pm, Thu, 25 May 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು