AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 28ರಂದು ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಅವರ 120 ದಿನಗಳ ಪಾದಯಾತ್ರೆಗೆ ಅಮಿತ್ ಶಾ ಚಾಲನೆ

ಅಣ್ಣಾಮಲೈ ಅವರು ಆಗಸ್ಟ್ 7 ರಂದು ಮಧುರೈನಲ್ಲಿ ಬಿಜೆಪಿ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 50 ನೇ ದಿನದ ಪಾದಯಾತ್ರೆ ಪರಮತಿ ವೆಲ್ಲೂರಿನಲ್ಲಿ ಮತ್ತು 100 ನೇ ದಿನದ ಪಾದಯಾತ್ರೆ ವಂದವಾಸಿ ಮತ್ತು ಉತ್ತರಮೇರೂರಿನಲ್ಲಿ ನಡೆಯಲಿದೆ. ಉದ್ಘಾಟನಾ ದಿನದಂದು ಸುಮಾರು ಒಂದೂವರೆ ಲಕ್ಷ ಸ್ವಯಂಸೇವಕರು ಭಾಗವಹಿಸಲಿದ್ದಾರೆ.

ಜುಲೈ 28ರಂದು ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಅವರ 120 ದಿನಗಳ ಪಾದಯಾತ್ರೆಗೆ ಅಮಿತ್ ಶಾ ಚಾಲನೆ
ಕೆ.ಅಣ್ಣಾಮಲೈ
ರಶ್ಮಿ ಕಲ್ಲಕಟ್ಟ
|

Updated on:Jul 12, 2023 | 1:06 PM

Share

ತಮಿಳುನಾಡು (Tamil Nadu) ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ (K Annamalai) ಅವರು 120 ದಿನಗಳ ಕಾಲ ಪಾದಯಾತ್ರೆ  ನಡೆಸಲಿದ್ದಾರೆ. ಈ ಪಾದಯಾತ್ರೆಗೆ ಕೇಂದ್ರ ಗೃಹ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಅಮಿತ್ ಶಾ (Amit Shah) ಅವರು ಜುಲೈ 28 ರಂದು ರಾಮೇಶ್ವರಂನಿಂದ ಚಾಲನೆ ನೀಡಲಿದ್ದಾರೆ. ‘ಎನ್ ಮಣ್ ಎನ್ ಮಕ್ಕಳ್ – ಪ್ರಥಮರ್ ಮೋದಿಯಿನ್ ತಮಿಳ್ ಮುಝಕ್ಕಂ’ (ನನ್ನ ಭೂಮಿ, ನನ್ನ ಜನರು – ತಮಿಳರಿಗೆ ಪ್ರಧಾನಿ ಮೋದಿಯವರ ಕರೆ) ಎಂಬ ಹೆಸರಿನ ಈ ಯಾತ್ರೆಯು ಎಲ್ಲಾ 234 ವಿಧಾನಸಭಾ ಕ್ಷೇತ್ರಗಳನ್ನು ಹಾದುಹೋಗಲಿದ್ದು, 2024 ರ ಜನವರಿ ಮಧ್ಯದಲ್ಲಿ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಚೆನ್ನೈನಲ್ಲಿ ಕೊನೆಗೊಳ್ಳಲಿದೆ. ಈ ಹಿಂದೆ ಪೂರ್ಣವಾಗಿ ಪಾದಯಾತ್ರೆ ಎಂದು ಹೇಳಿದ್ದರೂ ಕೆಲವೆಡೆ ಬಸ್ಸಿನಲ್ಲಿ ಸಂಚಾರ ನಡೆಯಲಿದೆ.

ಅಣ್ಣಾಮಲೈ ಅವರು ಆಗಸ್ಟ್ 7 ರಂದು ಮಧುರೈನಲ್ಲಿ ಬಿಜೆಪಿ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 50 ನೇ ದಿನದ ಪಾದಯಾತ್ರೆ ಪರಮತಿ ವೆಲ್ಲೂರಿನಲ್ಲಿ ಮತ್ತು 100 ನೇ ದಿನದ ಪಾದಯಾತ್ರೆ ವಂದವಾಸಿ ಮತ್ತು ಉತ್ತರಮೇರೂರಿನಲ್ಲಿ ನಡೆಯಲಿದೆ. ಉದ್ಘಾಟನಾ ದಿನದಂದು ಸುಮಾರು ಒಂದೂವರೆ ಲಕ್ಷ ಸ್ವಯಂಸೇವಕರು ಭಾಗವಹಿಸಲಿದ್ದಾರೆ.

ಪಾದಯಾತ್ರೆಯಲ್ಲಿ ಸುಮಾರು 5 ಸಾವಿರ ಜನರು ಭಾಗವಹಿಸುತ್ತಾರೆ. ಈ ರೋಡ್‌ಶೋ ಲೋಕಸಭಾ ಚುನಾವಣೆಯ ಪೂರ್ವಭಾವಿ ಸಿದ್ಧತೆ ಎಂದು ತಮಿಳುನಾಡು ಬಿಜೆಪಿಯ ಉಪಾಧ್ಯಕ್ಷ ನಾರಾಯಣನ್ ತಿರುಪತಿ ನ್ಯೂಸ್ 9 ಗೆ ತಿಳಿಸಿದ್ದಾರೆ.

ಇದನ್ನೂ ಓದಿ: Opposition Meet: ಬೆಂಗಳೂರಿನಲ್ಲಿ ಜುಲೈ 17-18ರಂದು ನಡೆಯಲಿರುವ ಪ್ರತಿಪಕ್ಷಗಳ ಸಭೆಯಲ್ಲಿ 24 ಪಕ್ಷಗಳು ಭಾಗಿ

ಇದೇ ವೇಳೆ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಪೌಲ್ ಕನಕರಾಜ್, ಚಕ್ರವರ್ತಿ, ಕ್ರೀಡಾ ಮತ್ತು ಕೌಶಲ್ಯಾಭಿವೃದ್ಧಿ ರಾಜ್ಯ ಅಧ್ಯಕ್ಷ ಅಮರ್ ಪ್ರಸಾದ್ ರೆಡ್ಡಿ ಅವರು ಅಣ್ಣಾಮಲೈ ಪಾದಯಾತ್ರೆಗೆ ಭದ್ರತೆ ನೀಡುವಂತೆ ಕೋರಿ ಡಿಜಿಪಿ ಶಂಕರ್ ಜಿವಾಲ್ ಅವರಿಗೆ ನಿನ್ನೆ ಮನವಿ ಸಲ್ಲಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:01 pm, Wed, 12 July 23

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?