AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 28ರಂದು ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಅವರ 120 ದಿನಗಳ ಪಾದಯಾತ್ರೆಗೆ ಅಮಿತ್ ಶಾ ಚಾಲನೆ

ಅಣ್ಣಾಮಲೈ ಅವರು ಆಗಸ್ಟ್ 7 ರಂದು ಮಧುರೈನಲ್ಲಿ ಬಿಜೆಪಿ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 50 ನೇ ದಿನದ ಪಾದಯಾತ್ರೆ ಪರಮತಿ ವೆಲ್ಲೂರಿನಲ್ಲಿ ಮತ್ತು 100 ನೇ ದಿನದ ಪಾದಯಾತ್ರೆ ವಂದವಾಸಿ ಮತ್ತು ಉತ್ತರಮೇರೂರಿನಲ್ಲಿ ನಡೆಯಲಿದೆ. ಉದ್ಘಾಟನಾ ದಿನದಂದು ಸುಮಾರು ಒಂದೂವರೆ ಲಕ್ಷ ಸ್ವಯಂಸೇವಕರು ಭಾಗವಹಿಸಲಿದ್ದಾರೆ.

ಜುಲೈ 28ರಂದು ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಅವರ 120 ದಿನಗಳ ಪಾದಯಾತ್ರೆಗೆ ಅಮಿತ್ ಶಾ ಚಾಲನೆ
ಕೆ.ಅಣ್ಣಾಮಲೈ
ರಶ್ಮಿ ಕಲ್ಲಕಟ್ಟ
|

Updated on:Jul 12, 2023 | 1:06 PM

Share

ತಮಿಳುನಾಡು (Tamil Nadu) ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ (K Annamalai) ಅವರು 120 ದಿನಗಳ ಕಾಲ ಪಾದಯಾತ್ರೆ  ನಡೆಸಲಿದ್ದಾರೆ. ಈ ಪಾದಯಾತ್ರೆಗೆ ಕೇಂದ್ರ ಗೃಹ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಅಮಿತ್ ಶಾ (Amit Shah) ಅವರು ಜುಲೈ 28 ರಂದು ರಾಮೇಶ್ವರಂನಿಂದ ಚಾಲನೆ ನೀಡಲಿದ್ದಾರೆ. ‘ಎನ್ ಮಣ್ ಎನ್ ಮಕ್ಕಳ್ – ಪ್ರಥಮರ್ ಮೋದಿಯಿನ್ ತಮಿಳ್ ಮುಝಕ್ಕಂ’ (ನನ್ನ ಭೂಮಿ, ನನ್ನ ಜನರು – ತಮಿಳರಿಗೆ ಪ್ರಧಾನಿ ಮೋದಿಯವರ ಕರೆ) ಎಂಬ ಹೆಸರಿನ ಈ ಯಾತ್ರೆಯು ಎಲ್ಲಾ 234 ವಿಧಾನಸಭಾ ಕ್ಷೇತ್ರಗಳನ್ನು ಹಾದುಹೋಗಲಿದ್ದು, 2024 ರ ಜನವರಿ ಮಧ್ಯದಲ್ಲಿ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಚೆನ್ನೈನಲ್ಲಿ ಕೊನೆಗೊಳ್ಳಲಿದೆ. ಈ ಹಿಂದೆ ಪೂರ್ಣವಾಗಿ ಪಾದಯಾತ್ರೆ ಎಂದು ಹೇಳಿದ್ದರೂ ಕೆಲವೆಡೆ ಬಸ್ಸಿನಲ್ಲಿ ಸಂಚಾರ ನಡೆಯಲಿದೆ.

ಅಣ್ಣಾಮಲೈ ಅವರು ಆಗಸ್ಟ್ 7 ರಂದು ಮಧುರೈನಲ್ಲಿ ಬಿಜೆಪಿ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 50 ನೇ ದಿನದ ಪಾದಯಾತ್ರೆ ಪರಮತಿ ವೆಲ್ಲೂರಿನಲ್ಲಿ ಮತ್ತು 100 ನೇ ದಿನದ ಪಾದಯಾತ್ರೆ ವಂದವಾಸಿ ಮತ್ತು ಉತ್ತರಮೇರೂರಿನಲ್ಲಿ ನಡೆಯಲಿದೆ. ಉದ್ಘಾಟನಾ ದಿನದಂದು ಸುಮಾರು ಒಂದೂವರೆ ಲಕ್ಷ ಸ್ವಯಂಸೇವಕರು ಭಾಗವಹಿಸಲಿದ್ದಾರೆ.

ಪಾದಯಾತ್ರೆಯಲ್ಲಿ ಸುಮಾರು 5 ಸಾವಿರ ಜನರು ಭಾಗವಹಿಸುತ್ತಾರೆ. ಈ ರೋಡ್‌ಶೋ ಲೋಕಸಭಾ ಚುನಾವಣೆಯ ಪೂರ್ವಭಾವಿ ಸಿದ್ಧತೆ ಎಂದು ತಮಿಳುನಾಡು ಬಿಜೆಪಿಯ ಉಪಾಧ್ಯಕ್ಷ ನಾರಾಯಣನ್ ತಿರುಪತಿ ನ್ಯೂಸ್ 9 ಗೆ ತಿಳಿಸಿದ್ದಾರೆ.

ಇದನ್ನೂ ಓದಿ: Opposition Meet: ಬೆಂಗಳೂರಿನಲ್ಲಿ ಜುಲೈ 17-18ರಂದು ನಡೆಯಲಿರುವ ಪ್ರತಿಪಕ್ಷಗಳ ಸಭೆಯಲ್ಲಿ 24 ಪಕ್ಷಗಳು ಭಾಗಿ

ಇದೇ ವೇಳೆ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಪೌಲ್ ಕನಕರಾಜ್, ಚಕ್ರವರ್ತಿ, ಕ್ರೀಡಾ ಮತ್ತು ಕೌಶಲ್ಯಾಭಿವೃದ್ಧಿ ರಾಜ್ಯ ಅಧ್ಯಕ್ಷ ಅಮರ್ ಪ್ರಸಾದ್ ರೆಡ್ಡಿ ಅವರು ಅಣ್ಣಾಮಲೈ ಪಾದಯಾತ್ರೆಗೆ ಭದ್ರತೆ ನೀಡುವಂತೆ ಕೋರಿ ಡಿಜಿಪಿ ಶಂಕರ್ ಜಿವಾಲ್ ಅವರಿಗೆ ನಿನ್ನೆ ಮನವಿ ಸಲ್ಲಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:01 pm, Wed, 12 July 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!