AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ITBP: ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ಬಸ್ ಅಪಘಾತದಲ್ಲಿ ಗಾಯಗೊಂಡ ಯೋಧರ ಆರೋಗ್ಯ ವಿಚಾರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

Amit Shah: ಆಗಸ್ಟ್ 16 ರಂದು ಕಾಶ್ಮೀರದ ಪಹಲ್ಗಾಮ್ ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಏಳು ಯೋಧರು ಸಾವನ್ನಪ್ಪಿದ್ದರು. 32 ಮಂದಿ ಗಾಯಗೊಂಡಿದ್ದರು. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಐಟಿಬಿಪಿ ಸಿಬ್ಬಂದಿ ಅಮರನಾಥ ಯಾತ್ರೆ ಹಿನ್ನೆಲೆಯಲ್ಲಿ ತಮ್ಮ ಕರ್ತವ್ಯ ಪೂರೈಸಿ ಹಿಂತಿರುಗುತ್ತಿದ್ದರು.

ITBP: ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ಬಸ್ ಅಪಘಾತದಲ್ಲಿ ಗಾಯಗೊಂಡ ಯೋಧರ ಆರೋಗ್ಯ ವಿಚಾರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ
ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ಬಸ್ ಅಪಘಾತದಲ್ಲಿ ಗಾಯಗೊಂಡ ಯೋಧರ ಆರೋಗ್ಯ ಸ್ಥಿತಿ ವಿಚಾರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ
TV9 Web
| Updated By: ಸಾಧು ಶ್ರೀನಾಥ್​|

Updated on: Aug 20, 2022 | 8:18 PM

Share

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam, Jammu and Kashmir) ಸಂಭವಿಸಿದ ಬಸ್ ಅಪಘಾತದಲ್ಲಿ ಗಾಯಗೊಂಡ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ ITBP) ವೀರ ಸಿಬ್ಬಂದಿಯ ಆರೋಗ್ಯವನ್ನು ವಿಚಾರಿಸಲು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು (Union Home Minister Amit Shah) ಇಂದು ನವದೆಹಲಿಯ ಏಮ್ಸ್ ಟ್ರಾಮಾ ಸೆಂಟರ್‌ಗೆ (AIIMS Trauma Center) ಭೇಟಿ ನೀಡಿದರು. ಅಮಿತ್ ಶಾ ಅವರು ಕಾನ್‌ಸ್ಟೆಬಲ್/ಜಿಡಿ ಬಲ್ವಂತ್ ಸಿಂಗ್, ಕಾನ್‌ಸ್ಟೆಬಲ್/ಜಿಡಿ ತ್ಸೆವಾಂಗ್ ದೋರ್ಜೆ ಮತ್ತು ಕಾನ್‌ಸ್ಟೆಬಲ್/ಜಿಡಿ ಬಬ್ಲು ಕುಮಾರ್ ಅವರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿ ಶುಭ ಹಾರೈಸಿದರು.

ಯೋಧರ ಆರೋಗ್ಯ ಸ್ಥಿತಿ, ಶೀಘ್ರವಾಗಿ ಚೇತರಿಸಿಕೊಳ್ಳುವ ವಿಧಾನ ಮತ್ತು ಭವಿಷ್ಯದಲ್ಲಿ ಅನುಸರಿಸಬೇಕಾದ ವೈದ್ಯಕೀಯ ವಿಧಾನಗಳ ಬಗ್ಗೆ ವೈದ್ಯರು ಗೃಹ ಸಚಿವರಿಗೆ ವಿವರಿಸಿದರು. ಆಗಸ್ಟ್ 16 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಏಳು ಯೋಧರು ಸಾವನ್ನಪ್ಪಿದರು ಮತ್ತು 32 ಮಂದಿ ಗಾಯಗೊಂಡಿದ್ದರು.

ತೀವ್ರವಾಗಿ ಗಾಯಗೊಂಡ ಮೂವರು ITBP ಸಿಬ್ಬಂದಿಯನ್ನು ಉತ್ತಮ ಚಿಕಿತ್ಸೆಗಾಗಿ ವಿಶೇಷ ಏರ್ ಆಂಬ್ಯುಲೆನ್ಸ್ ಮೂಲಕ ಆಗಸ್ಟ್ 19 ರಂದು ಶ್ರೀನಗರದಿಂದ AIIMS JPNA ಟ್ರಾಮಾ ಸೆಂಟರ್, ನವದೆಹಲಿಗೆ ಸ್ಥಳಾಂತರಿಸಲಾಯಿತು. ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರು ಇಂದು ನವದೆಹಲಿಯ ಏಮ್ಸ್ ಟ್ರಾಮಾ ಸೆಂಟರ್‌ಗೆ ಭೇಟಿ ನೀಡಿ ವೀರ ಐಟಿಬಿಪಿ ಸಿಬ್ಬಂದಿಯ ಆರೋಗ್ಯ ವಿಚಾರಿಸಿದರು.

ಆಗಸ್ಟ್ 16 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಏಳು ಯೋಧರು ಸಾವನ್ನಪ್ಪಿದ್ದರು. 32 ಮಂದಿ ಗಾಯಗೊಂಡಿದ್ದರು. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಸಿಬ್ಬಂದಿ ಅಮರನಾಥ ಯಾತ್ರೆ ಹಿನ್ನೆಲೆಯಲ್ಲಿ ತಮ್ಮ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿ ಚಂದನವಾಡಿಯಿಂದ ಹಿಂತಿರುಗುತ್ತಿದ್ದರು. ಗಾಯಗೊಂಡ ಯೋಧರನ್ನು ಅದೇ ದಿನ ಚಿಕಿತ್ಸೆಗಾಗಿ ಶ್ರೀನಗರಕ್ಕೆ ಕರೆದೊಯ್ಯಲಾಯಿತು.

ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
VIDEO: ಸುಈಈಈಈ... ಪ್ಯಾಟ್ ಕಮಿನ್ಸ್ ವಾಟ್ ಎ ಕ್ಯಾಚ್
VIDEO: ಸುಈಈಈಈ... ಪ್ಯಾಟ್ ಕಮಿನ್ಸ್ ವಾಟ್ ಎ ಕ್ಯಾಚ್
ಶಿವಕುಮಾರ್ ಕಾಮಗಾರಿ ನಡೆಯುತ್ತಿರುವ ಸ್ಥಳ ಪರಿಶೀಲನೆ ನಡೆಸಲಿದ್ದಾರೆ: ಸೋಮಣ್ಣ
ಶಿವಕುಮಾರ್ ಕಾಮಗಾರಿ ನಡೆಯುತ್ತಿರುವ ಸ್ಥಳ ಪರಿಶೀಲನೆ ನಡೆಸಲಿದ್ದಾರೆ: ಸೋಮಣ್ಣ