AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್ ಶಾ ಭಾಷಣ ತಿರುಚಿದ ಪ್ರಕರಣ: ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್

ಮೀಸಲಾತಿ ತೆಗೆದು ಹಾಕುತ್ತೇವೆ ಎಂದು ಭಾಷಣವನ್ನು ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿಗೆ ಸಮನ್ಸ್ ನೀಡಿಲಾಗಿದೆ. ದೆಹಲಿ ಪೊಲೀಸರು ಈ ಸಮನ್ಸ್​​ ನೀಡಿದ್ದಾರೆ. ಮೀಸಲಾತಿ ತೆಗೆದು ಹಾಕಲಾಗುವುದು ಎಂದು ವಿಡಿಯೋವನ್ನು ತಿರುಚಲಾಗಿದೆ, ಗೃಹ ಸಚಿವ ಅಮಿತ್​​​​ ಶಾ ಅವರ ಹೇಳಿಕೆಯನ್ನು ತಿರುಚಿ ವಿಡಿಯೋ ಮಾಡಲಾಗಿದೆ ಎಂದು ಹೇಳಲಾಗಿತ್ತು.

ಅಮಿತ್ ಶಾ ಭಾಷಣ ತಿರುಚಿದ ಪ್ರಕರಣ: ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್
ರೇವಂತ್ ರೆಡ್ಡಿ
ಅಕ್ಷಯ್​ ಪಲ್ಲಮಜಲು​​
|

Updated on:Apr 29, 2024 | 4:02 PM

Share

ದೆಹಲಿ, ಏ.29: ಅಮಿತ್​​ ಶಾ (AMit Shah) ಅವರು ಎಸಿ,ಎಸ್​​ಟಿ, ಒಬಿಸಿ ಮೀಸಲಾತಿ ತೆಗೆದು ಹಾಕುತ್ತೇವೆ ಎಂದು ಭಾಷಣವನ್ನು ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿಗೆ (Revanth Reddy) ಸಮನ್ಸ್ ನೀಡಿಲಾಗಿದೆ. ದೆಹಲಿ ಪೊಲೀಸರು ಈ ಸಮನ್ಸ್​​ ನೀಡಿದ್ದಾರೆ. ಮೀಸಲಾತಿ ತೆಗೆದು ಹಾಕಲಾಗುವುದು ಎಂದು ವಿಡಿಯೋವನ್ನು ತಿರುಚಲಾಗಿದೆ, ಗೃಹ ಸಚಿವ ಅಮಿತ್​​​​ ಶಾ ಅವರ ಹೇಳಿಕೆಯನ್ನು ತಿರುಚಿ ವಿಡಿಯೋ ಮಾಡಲಾಗಿದೆ ಎಂದು ಹೇಳಲಾಗಿತ್ತು. ಈ ಬಗ್ಗೆ ತನಿಖೆ ವಹಿಸಿಕೊಂಡ ದೆಹಲಿ ಪೊಲೀಸರು ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್​​​ ನೀಡಲಾಗಿದೆ. ಮೇ 1ಕ್ಕೆ ವಿಚಾರಣೆಗೆ ಬರುವಂತೆ ದೆಹಲಿ ಪೊಲೀಸರು ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಹೇಳಿದ್ದಾರೆ. ಜೊತೆಗೆ ಅವರು ಬಳಸಿದ ಎಲ್ಲಾ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳನ್ನು ತರುವಂತೆ ತಿಳಿಸಿದ್ದಾರೆ. ಅಮಿತ್​​ ಶಾ ಅವರ ಭಾಷಣವನ್ನು ಎಡಿಟ್​​​ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೆಲವು ಕಾಂಗ್ರೆಸ್ ನಾಯಕರು ಸೇರಿದಂತೆ ಇನ್ನೂ ಐದು ಜನರಿಗೆ ದೆಹಲಿ ಪೊಲೀಸರು ಸಮನ್ಸ್ ನೀಡಲಿದ್ದಾರೆ.

ಗೃಹ ಸಚಿವಾಲಯ ಮತ್ತು ಬಿಜೆಪಿಯ ದೂರಿನ ಮೇರೆಗೆ ದೆಹಲಿ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿಕೊಂಡಿದ್ದರು. ವಿಶೇಷ ಕೋಶವು ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ವಿಭಾಗಗಳು ಮತ್ತು ಐಟಿ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದೆ. ಸಾರ್ವಜನಿಕ ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರುವ ಸಮುದಾಯಗಳ ನಡುವೆ ದ್ವೇಷವನ್ನು ಉಂಟುಮಾಡುವ ಉದ್ದೇಶದಿಂದ ಕೆಲವೊಂದು ವಿಡಿಯೋಗಳನ್ನು ಎಡಿಟ್​​​ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್​​ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ತೆಲಂಗಾಣದಲ್ಲಿ ಮುಸ್ಲಿಮರಿಗೆ ಶೇಕಡಾ 4 ರಷ್ಟು ‘ಅಸಂವಿಧಾನಿಕ’ ಮೀಸಲಾತಿಯನ್ನು ತೆಗೆದುಹಾಕುವ ಕುರಿತು ಅಮಿತ್​​​ ಶಾ ಅವರು ಮಾತನಾಡಿರುವ ಹಳೆಯ ಭಾಷಣವನ್ನು ತಿರುಚಿ, ಲೋಕಸಭೆ ಚುನಾವಣೆ ರ್ಯಾಲಿ ಅಮಿತ್​​ ಶಾ ಅವರು ಎಸಿ ಎಸ್​ಟಿ, ಒಬಿಸಿ ಮೀಸಲಾತಿಗಳನ್ನು ತೆಗೆದು ಹಾಕುತ್ತೇವೆ ಎಂದು ವಿಡಿಯೋವನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಮಾಡಲಾಗಿದೆ ಎಂದು ಬಿಜೆಪಿ ದೂರಿನಲ್ಲಿ ತಿಳಿಸಿದೆ.

ಇದನ್ನೂ ಓದಿ: ಎಸ್​ಸಿ, ಎಸ್​ಟಿ, ಒಬಿಸಿ ಹಕ್ಕುಗಳನ್ನು ಕಾಂಗ್ರೆಸ್​ ಕಿತ್ತುಕೊಂಡಿದೆ: ಮೋದಿ

ಈ ವಿಡಿಯೋವನ್ನು ತೆಲಂಗಾಣ ಕಾಂಗ್ರೆಸ್​​ ಎಕ್ಸ್​​​​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋವನ್ನು ಕಾಂಗ್ರೆಸ್​​​ನ ಅನೇಕ ನಾಯಕರು ಮರು ಹಂಚಿಕೆ ಮಾಡಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಹಲವು ಕಾಂಗ್ರೆಸ್ ನಾಯಕರು ಅದನ್ನು ಹಂಚಿಕೊಂಡಿದ್ದು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡ (ಎಸ್‌ಟಿ) ಮತ್ತು ಇತರ ಹಿಂದುಳಿದವರಿಗೆ ಮೀಸಲಾತಿ ಕೋಟಾಗಳನ್ನು ರದ್ದುಗೊಳಿಸುವುದಾಗಿ ಹೇಳಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಸಿಎಂ ಸೇರಿದಂತೆ ಅನೇಕ ಕಾಂಗ್ರೆಸ್​​​ ನಾಯಕರಿಗೆ ದೆಹಲಿ ಪೊಲೀಸರು ಸಮನ್ಸ್​​ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:43 pm, Mon, 29 April 24

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ