Sign In

By signing in or creating an account, you agree with Associated Broadcasting Company's Terms & Conditions and Privacy Policy.

Ammonia gas leak: ಅಲಿಘರ್ ಮಾಂಸ ಕಾರ್ಖಾನೆಯಲ್ಲಿ ಅಮೋನಿಯಾ ಗ್ಯಾಸ್ ಸೋರಿಕೆ: ಮಹಿಳೆಯೊಬ್ಬರು ಸಾವು, 65 ಮಂದಿ ಅಸ್ವಸ್ಥ

ಉತ್ತರಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ಇಂದು (ಗುರುವಾರ) ಮಾಂಸದ ಕಾರ್ಖಾನೆಯಿಂದ ಅಮೋನಿಯಾ ಸೋರಿಕೆಯಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 65 ಜನರು ಅಸ್ವಸ್ಥರಾಗಿದ್ದಾರೆ.

Ammonia gas leak: ಅಲಿಘರ್ ಮಾಂಸ ಕಾರ್ಖಾನೆಯಲ್ಲಿ ಅಮೋನಿಯಾ ಗ್ಯಾಸ್ ಸೋರಿಕೆ: ಮಹಿಳೆಯೊಬ್ಬರು ಸಾವು, 65 ಮಂದಿ ಅಸ್ವಸ್ಥ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Sep 29, 2022 | 4:15 PM

ಉತ್ತರಪ್ರದೇಶ: ಉತ್ತರಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ಇಂದು (ಗುರುವಾರ) ಮಾಂಸದ ಕಾರ್ಖಾನೆಯಿಂದ ಅಮೋನಿಯಾ ಸೋರಿಕೆಯಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 65 ಜನರು ಅಸ್ವಸ್ಥರಾಗಿದ್ದಾರೆ. ಹಾಜಿ ಜಹೀರ್ ಒಡೆತನದ ಅಲ್-ದುವಾ ಮಾಂಸ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಎಲ್ಲಾ ಗಾಯಾಳುಗಳನ್ನು ಜಿಎಸ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಅನಿಲ ಸೋರಿಕೆ ಕಾರಣಗಳನ್ನು ಪತ್ತೆ ಮಾಡಲಾಗುತ್ತಿದೆ.

ಅನಿಲ ಸೋರಿಕೆಯಾದ ನಂತರ ಕಾರ್ಖಾನೆಯಲ್ಲಿದ್ದ ಜನರನ್ನು ತಕ್ಷಣವೇ ಸ್ಥಳಾಂತರಿಸಲಾಯಿತು, ಮತ್ತು ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ. ಸಂತ್ರಸ್ತ ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಒಡಿಶಾದ ಸಿಗಡಿ ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆ, 25ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥ

ಒಡಿಶಾದ ಬಾಲಸೋರ್ ಜಿಲ್ಲೆಯ ಸಿಗಡಿ ಸಂಸ್ಕರಣಾ ಘಟಕದಲ್ಲಿ ನಿನ್ನೆ (ಬುಧವಾರ) ಅಮೋನಿಯಾ ಅನಿಲ ಸೋರಿಕೆಯಾಗಿದೆ. ಈ ಘಟನೆಯಿಂದ 25 ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥರಾಗಿದ್ದರು. ಈ ಸಂಸ್ಕರಣಾ ಘಟಕ ಆಡಳಿತಾರೂಢ ಬಿಜು ಜನತಾ ದಳದ (ಬಿಜೆಡಿ) ಮಾಜಿ ಸಂಸದರ ಪುತ್ರ ರವೀಂದ್ರ ಜೆನಾ ಅವರಿಗೆ ಸೇರಿದ್ದು.

ಖಾಂಟಪದ ಸಮೀಪದ ಹೈಲ್ಯಾಂಡ್ ಸಮುದ್ರಾಹಾರ ಸಂಸ್ಕರಣಾ ಕೇಂದ್ರದಲ್ಲಿ ಈ ದುರ್ಘಟನೆ ನಡೆದಿದೆ. ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವು ವರದಿಗಳ ಪ್ರಕಾರ, ಕೆಲವು ಉದ್ಯೋಗಿಗಳನ್ನು ಖಾಂತಪದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ಕೆಲವರನ್ನು ಬಾಲಸೋರ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಇಲ್ಲಿಯವರೆಗೆ ಯಾವುದೇ ಸಾವು ನೋವುಗಳು ವರದಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ, ಆದರೆ ಒಂಬತ್ತು ಕಾರ್ಮಿಕರ ಸ್ಥಿತಿ ಸ್ವಲ್ಪ ಗಂಭೀರವಾಗಿದೆ ಏಕೆಂದರೆ ಅವರು ಹೆಚ್ಚು ಅನಿಲವನ್ನು ಉಸಿರಾಡಿದ್ದಾರೆ. ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಘಟನೆ ಕುರಿತು ತನಿಖೆ ಆರಂಭಿಸಿದ್ದಾರೆ.

Published On - 3:38 pm, Thu, 29 September 22

ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ