AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್​: ಬೆದರಿಕೆ ಬಂದರೆ ಹತ್ತಿರದ ಪೊಲೀಸ್ ಠಾಣೆ ಸಂಪರ್ಕಿಸಿ

ನೂಪುರ್ ಶರ್ಮಾ ಅವರಿಗೆ ಬೆಂಬಲಿಸಿ ಹಾಕಿರುವ ಪೋಸ್ಟ್​ಗೆ ಸಂಬಂಧಿಸಿದಂತೆ ಯಾರೇ ನೇರವಾಗಿ ಅಥವಾ ಪರೋಕ್ಷವಾಗಿ ಬೆದರಿಕೆ ಹಾಕಿದರೂ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ಈ ವಿಷಯವನ್ನು ಗುಪ್ತವಾಗಿರಿಸಲಾಗುವುದು ಎಂದು ಅಮರಾವತಿ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್​: ಬೆದರಿಕೆ ಬಂದರೆ ಹತ್ತಿರದ ಪೊಲೀಸ್ ಠಾಣೆ ಸಂಪರ್ಕಿಸಿ
Amaravati PoliceImage Credit source: Timesnow
TV9 Web
| Edited By: |

Updated on:Jul 06, 2022 | 1:03 PM

Share

ಮುಂಬೈ: ನೂಪುರ್ ಶರ್ಮಾ ಅವರಿಗೆ ಬೆಂಬಲಿಸಿ ಹಾಕಿರುವ ಪೋಸ್ಟ್​ಗೆ ಸಂಬಂಧಿಸಿದಂತೆ ಯಾರೇ ನೇರವಾಗಿ ಅಥವಾ ಪರೋಕ್ಷವಾಗಿ ಬೆದರಿಕೆ ಹಾಕಿದರೂ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ಈ ವಿಷಯವನ್ನು ಗುಪ್ತವಾಗಿರಿಸಲಾಗುವುದು ಎಂದು ಅಮರಾವತಿ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಅಮರಾವತಿ ಪೊಲೀಸ್ ಆಯುಕ್ತರಾದ ಆರತಿ ಸಿಂಗ್ ಈ ಕುರಿತು ಮಾತನಾಡಿದ್ದು, ಬೆದರಿಕೆ ಕುರಿತು ಮಾಹಿತಿ ನೀಡಿದವರರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದಿದ್ದಾರೆ.

ಹಾಗೆಯೇ ನೂಪುರ್ ಶರ್ಮಾ ಅವರನ್ನು ಬೆಂಬಿಲಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದ ಪೋಸ್ಟ್​ ವಿರುದ್ಧವಾಗಿ ಬೆದರಿಕೆ ಹಾಕಿದ್ದ ನಾಲ್ವರನ್ನು ಬಂಧಿಸಲಾಗಿದೆ.  ಉಮೇಶ್ ಕೋಲ್ಹೆ ಅವರ ಹತ್ಯೆಗೆ ಸಂಬಂಧಿಸಿದಂತೆ ಜುಲೈ 5ರಂದು ಎನ್​ಐಎ ಪ್ರಕರಣವನ್ನು ಕೈಗೆತ್ತಿಕೊಂಡಿದೆ. ಶೇಖ್ ಇರ್ಫಾನ್ ಶೇಖ್ ರಹೀಮ್ ಅವರು ಉಮೇಶ್ ಕೋಲ್ಹೆ ಹತ್ಯೆ ಹಿಂದಿರುವ ಮಾಸ್ಟರ್​ಮೈಂಡ್ ಎಂದು ಹೇಳಲಾಗಿದೆ.

ಉಮೇಶ್ ಕೊಲ್ಹೆ ಹತ್ಯೆಗೆ ಸಂಬಂಧಿಸಿದಂತೆ ಮುದ್ದಸರ್ ಅಹಮದ್​, ಶಾರೂಖ್ ಪಠಾಣ್, ಅಬ್ದುಲ್ ತೌಫಿಕ್, ಶೋಯಿಬ್ ಖಾನ್, ಆತಿಬ್ ರಶೀದ್, ಯೂಸುಫ್ ಖಾನ್ ಹಾಗೂ ಶೇಖ್ ಇರ್ಫಾನ್ ಶೇಖ್ ರಹೀಮ್ ಅವರನ್ನು ಬಂಧಿಸಲಾಗಿದೆ.

ಜೂನ್ 21 ರಂದು ಮಹಾರಾಷ್ಟ್ರದ ಅಮರಾವತಿಯಲ್ಲಿ ಕೆಮಿಸ್ಟ್ ಉಮೇಶ್ ಕೋಲ್ಹೆ ಅವರನ್ನು ರಾತ್ರಿ 10.30ರ ಸುಮಾರಿಗೆ ಮೂವರು ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು ಚಾಕು ಇರಿದು ಹತ್ಯೆ ಮಾಡಿದ್ದರು.

ಪ್ರವಾದಿ ಮೊಹಮ್ಮದ್ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯಾ ಲಾಲ್ ಭೀಕರ ಹತ್ಯೆ ಪ್ರಕರಣದ ಉದ್ವಿಗ್ನತೆಯ ನಡುವೆಯೇ ವಾರದ ಹಿಂದೆ ಮಹಾರಾಷ್ಟ್ರದಲ್ಲಿ ಕೆಮಿಸ್ಟ್ ಒಬ್ಬರ ಕತ್ತು ಸೀಳಿ ಹತ್ಯೆ ಮಾಡಿದ ಪ್ರಕರಣದ ಬಗ್ಗೆ ಎನ್ಐಎ (NIA) ತನಿಖೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆದೇಶಿಸಿದ್ದಾರೆ.

ಉದಯ್​ಪುರದಲ್ಲಿ ಟೈಲರ್ ಹತ್ಯೆಗೂ ಮುನ್ನ ನೂಪುರ್ ಶರ್ಮಾ ಹೇಳಿಕೆ ಬೆಂಬಲಿಸಿ ಪೋಸ್ಟ್​ ಹಾಕಿದ್ದಕ್ಕೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಅಂಗಡಿ ಮಾಲೀಕರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.

ಪ್ರಸ್ತುತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐದು ಜನರನ್ನು ಬಂಧಿಸಿದ್ದಾರೆ. ಆದರೆ ಇದಕ್ಕೆ ಕಾರಣವೇನು ಎಂಬುದನ್ನು ವಿವರಿಸಿಲ್ಲ. ಅವರು ಈ ಪ್ರಕರಣದ ಬಗ್ಗೆ ಮೌನವಾಗಿದ್ದಾರೆ ಎಂದು ಭಾರ್ತಿಯಾ ಆರೋಪಿಸಿದ್ದಾರೆ.

ವರದಿಗಳ ಪ್ರಕಾರ, ಮಹಾರಾಷ್ಟ್ರ ಪೊಲೀಸ್‌ನ ಭಯೋತ್ಪಾದನಾ ನಿಗ್ರಹ ದಳ ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಂಡಗಳು ಪ್ರಕರಣದ ತನಿಖೆಗಾಗಿ ಅಮರಾವತಿಗೆ ತೆರಳಲಿವೆ.

ವೆಟರ್ನರಿ ಕೆಮಿಸ್ಟ್ ಆಗಿದ್ದ ಉಮೇಶ್ ಕೋಲ್ಹೆ ಜೂನ್ 21ರಂದು ತಮ್ಮ ಅಂಗಡಿಯಿಂದ ಮರಳುತ್ತಿದ್ದಾಗ ದುಷ್ಕರ್ಮಿಗಳು ಕತ್ತು ಸೀಳಿ ಕೊಲೆ ಮಾಡಿದ್ದರು. ಮೇಲ್ನೋಟಕ್ಕೆ ಇದು ದರೋಡೆ ಅಥವಾ ವೈಯಕ್ತಿಕ ದ್ವೇಷ ಎಂದು ಕಂಡರೂ ಈ ಬಗ್ಗೆ ಯಾವುದೇ ಸಾಕ್ಷ್ಯಗಳು ಲಭ್ಯವಾಗಿಲ್ಲ.

Published On - 11:55 am, Wed, 6 July 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ