AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲು: ಪ್ರಾಯೋಗಿಕ ಓಡಾಟ, ಅತ್ಯಾಧುನಿಕ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದ ಅಶ್ವಿನಿ ವೈಷ್ಣವ್

amrit bharat express: ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಅಯೋಧ್ಯೆಯಿಂದ ಪ್ರಾರಂಭವಾಗಲಿದೆ. ಇದಕ್ಕೂ ಮುನ್ನ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಮಂಗಳವಾರ ದೆಹಲಿಯಲ್ಲಿ ರೈಲಿನ ಸೌಕರ್ಯಗಳನ್ನು ಹಾಗೂ ಪ್ರಾಯೋಗಿಕ ಓಡಾಟವನ್ನು ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಒಂದು ವಿಡಿಯೋವನ್ನು ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ. ಈ ರೈಲಿನಲ್ಲಿ ಪ್ರಾಯೋಗಿಕ ಓಡಾಟವನ್ನು ಪರಿಶೀಲಿಸಲಾಗಿದೆ.

ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲು: ಪ್ರಾಯೋಗಿಕ ಓಡಾಟ, ಅತ್ಯಾಧುನಿಕ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದ ಅಶ್ವಿನಿ ವೈಷ್ಣವ್
ಅಕ್ಷಯ್​ ಪಲ್ಲಮಜಲು​​
|

Updated on: Dec 27, 2023 | 11:28 AM

Share

ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಅಮೃತ್ ಭಾರತ್ ಎಕ್ಸ್‌ಪ್ರೆಸ್ (amrit bharat express) ರೈಲು ಶೀಘ್ರದಲ್ಲೇ ಅಯೋಧ್ಯೆಯಿಂದ ಪ್ರಾರಂಭವಾಗಲಿದೆ. ಇದಕ್ಕೂ ಮುನ್ನ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಮಂಗಳವಾರ ದೆಹಲಿಯಲ್ಲಿ ರೈಲಿನ ಸೌಕರ್ಯಗಳನ್ನು ಹಾಗೂ ಪ್ರಾಯೋಗಿಕ ಓಡಾಟವನ್ನು ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಒಂದು ವಿಡಿಯೋವನ್ನು ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ. ಈ ರೈಲಿನಲ್ಲಿ ಪ್ರಾಯೋಗಿಕ ಓಡಾಟವನ್ನು ಪರಿಶೀಲಿಸಲಾಗಿದೆ. ನಾಲ್ಕರಿಂದ ಐದು ತಿಂಗಳ ಕಾಲ ರೈಲಿನ ಸಾಮಾನ್ಯ ಓಡಾಟವನ್ನು ನಡೆಸುವ ನಿರೀಕ್ಷೆಯಿದೆ ಎಂದು ಹೇಳಿದರು.

ಇಂದು ನಾನು ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲಿನ ಎಲ್ಲ ವ್ಯವಸ್ಥೆಗಳನ್ನು ಹಾಗೂ ಪ್ರಾಯೋಗಿಕ ಓಡಾಟವನ್ನು ಪರಿಶೀಲನೆಯನ್ನು ನಡೆಸಿದ್ದೇನೆ ಎಂದು ಎಕ್ಸ್​​ನಲ್ಲಿ ತಿಳಿಸಿದ್ದಾರೆ. ಇದರ ಜತೆಗೆ ತಾಂತ್ರಿಕ ದೋಷ ಮತ್ತು ಸವಾಲುಗಳೇನು? ಎಂಬ ಬಗ್ಗೆಯು ಪರಿಶೀಲನೆ ನಡೆಸಲಾಗಿದೆ. ರೈಲಿನ ಕಾರ್ಯವೈಖರಿ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಈ ರೈಲು ಹೊಸ ಹೊಸ ತಂತ್ರಜ್ಞಾನವನ್ನು ಹಾಗೂ ವಿಶೇಷ ವ್ಯವಸ್ಥೆಗಳನ್ನು ಹೊಂದಿದೆ.

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಎಕ್ಸ್​​​ನಲ್ಲಿ ಹಂಚಿಕೊಂಡ ವಿಡಿಯೋ ಇಲ್ಲಿದೆ:

ಅಮೃತ್ ಭಾರತ್ ಎಕ್ಸ್‌ಪ್ರೆಸ್ ಸ್ವಯಂಚಾಲಿತ ಸಂರಕ್ಷಣಾ ವ್ಯವಸ್ಥೆ ಕವಚನ್ನು ಹೊಂದಿದೆ. ಇದು ಎರಡು ರೈಲುಗಳ ನಡುವೆ ಅಪಘಾತವನ್ನು ತಡೆಯುವ ಶಕ್ತಿಯನ್ನು ಕೂಡ ಹೊಂದಿದೆ. ಜೊತೆಗೆ ಮುಂಭಾಗ ಮತ್ತು ಹಿಂಭಾಗದಲ್ಲಿ ಮಾರ್ಪಡಿಸಿದ ಎಂಜಿನ್‌ಗಳನ್ನು ಅಳವಡಿಸಲಾಗಿದೆ. ಪ್ರತಿ ಸೀಟಿನ ಮೇಲೆ ಚಾರ್ಜಿಂಗ್ ಪಾಯಿಂಟ್ ಇದೆ. ಸಾಮಾನ್ಯ ಕೋಚ್‌ಗಳಿಗೆ ಮೇಲ್ಭಾಗದ ಸೀಟಿನಲ್ಲಿ ಹೆಚ್ಚುವರಿ ಕುಷನಿಂಗ್ (ಮೆತ್ತನೆಯ ಹಾಸಿಗಳು) ಕೂಡ ಇದೆ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಇದನ್ನೂ ಓದಿ:  2024ರ ವೇಳೆಗೆ 102 ವಂದೇ ಭಾರತ್ ರೈಲು ಓಡಿಸುವ ಗುರಿ

ಇನ್ನು ರೈಲು ನಿರ್ವಾಹಕರ ಕ್ಯಾಬಿನ್‌ ಬಗ್ಗೆಯು ಅಶ್ವಿನಿ ವೈಷ್ಣವ್ ವಿವರಿಸಿದ್ದಾರೆ. ಆರಾಮವಾಗಿ ರೈಲುಗಳ ಓಡಾಟವನ್ನು ನಡೆಸಲು ಅತ್ಯಾಧುನಿಕ ಸೌಲಭ್ಯಗಳನ್ನು ನಿರ್ವಾಹಕರಿಗೆ ನೀಡಲಾಗಿದೆ. ಕ್ಯಾಬಿನ್‌ಗೆ ಹವಾನಿಯಂತ್ರಣವನ್ನು ಅಳವಡಿಸಲಾಗಿದೆ. ಇದು ಕೂಡ ವಂದೇ ಭಾರತ್ ರೈಲುಗಳಂತೆಯೇ ಇದೆ. ನಾನು ನಿರ್ವಾಹಕರ ಕ್ಯಾಬಿನ್‌ಗೆ ಭೇಟಿ ನೀಡಿದಾಗ, ಆಸನವು ದಕ್ಷತಾಶಾಸ್ತ್ರದ ಸ್ಥಾನದಲ್ಲಿದೆ. ಇದು ಚಾಲಕನಿಗೆ ಆರಾಮ ಮತ್ತು ಆಯಾಸವಾಗದಂತೆ ನೋಡಿಕೊಳ್ಳುತ್ತದೆ ಎಂದು ವೈಷ್ಣವ್ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್