AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಏರ್​ಪೋರ್ಟ್​​ನಿಂದ ಹೊರಟಿದ್ದ ವಿಸ್ತಾರ ವಿಮಾನ ಕೆಲವೇ ಕ್ಷಣಗಳಲ್ಲಿ ವಾಪಸ್​; ತುರ್ತು ಭೂಸ್ಪರ್ಶ

ವಿಮಾನ ವಾಪಸ್ ಬರುವಷ್ಟರಲ್ಲಿ ಏರ್​ಪೋರ್ಟ್​ನಲ್ಲಿ ಪೊಲೀಸರು, ಆರು ಅಗ್ನಿಶಾಮಕದಳದ ಘಟಕಗಳು ಸಿದ್ಧವಾಗಿ ನಿಂತಿದ್ದರು. ಅದು ಭೂಸ್ಪರ್ಶ ಆಗುವ ಹೊತ್ತಿಗೆ ಯಾವುದೇ ರೀತಿಯ ಅಪಾಯ ಆಗುವುದನ್ನು ತಪ್ಪಿಸಲು ಎಲ್ಲ ಸಿದ್ಧತೆಗಳನ್ನೂ ಮಾಡಲಾಗಿತ್ತು.

ದೆಹಲಿ ಏರ್​ಪೋರ್ಟ್​​ನಿಂದ ಹೊರಟಿದ್ದ ವಿಸ್ತಾರ ವಿಮಾನ ಕೆಲವೇ ಕ್ಷಣಗಳಲ್ಲಿ ವಾಪಸ್​; ತುರ್ತು ಭೂಸ್ಪರ್ಶ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Feb 17, 2022 | 6:08 PM

Share

ದೆಹಲಿ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ (Delhi Airport) ಹೊರಟಿದ್ದ ಅಮೃತ್​ಸರ್​ ಮೂಲದ ವಿಸ್ತಾರ ಏರ್​​ಲೈನ್ಸ್​ (Vistara Flight) ವಿಮಾನ ಕೆಲವೇ ಕ್ಷಣಗಳಲ್ಲಿ ಹಿಂದಿರುಗಿ ಬಂದು, ದೆಹಲಿ ಏರ್​ಪೋರ್ಟ್​ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಫ್ಲೈಟ್​​ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದೇ ತುರ್ತು ಭೂಸ್ಪರ್ಶಕ್ಕೆ ಕಾರಣ ಎಂದು ಹೇಳಲಾಗಿದೆ. ವಿಸ್ತಾರಾ ಏರ್​ಲೈನ್ಸ್​ನ ಯುಕೆ 697 ಎಂಬ ವಿಮಾನ ದೆಹಲಿಯಿಂದ ಅಮೃತ್​ಸರ್​ಗೆ ಹೊರಟಿತ್ತು. ಆದರೆ ಕೆಲವೇ ಕ್ಷಣದಲ್ಲಿ ತಾಂತ್ರಿಕ ಅಡಚಣೆಯಾಯಿತು. ಮುನ್ನೆಚ್ಚರಿಕಾ ಕ್ರಮವಾಗಿ ಪೈಲಟ್​ ವಿಮಾನವನ್ನು ವಾಪಸ್​ ದೆಹಲಿ ಏರ್​ಪೋರ್ಟ್​ಗೇ ತಂದರು ಎಂದು ಏರ್​ಲೈನ್ಸ್​ನ ವಕ್ತಾರ ತಿಳಿಸಿದ್ದಾರೆ.

ಈ ವಿಮಾನದಲ್ಲಿ 146 ಮಂದಿ ಪ್ರಯಾಣಿಕರು ಇದ್ದರು. ಬೆಳಗ್ಗೆ ಎಂದಿನಂತೆ ದೆಹಲಿಯಿಂದ ಹೊರಟಿತ್ತು. ಆದರೆ 10.15ರ ಹೊತ್ತಿಗೆ ಈ ವಿಮಾನ ವಾಪಸ್​ ಏರ್​​ಪೋರ್ಟ್​ಗೆ ಬಂದು ತುರ್ತು ಭೂಸ್ಪರ್ಶ ಆಗುವ ಬಗ್ಗೆ ಇಲ್ಲಿನ ಹಿರಿಯ ಪೊಲೀಸ್​ ಅಧಿಕಾರಿಗಳಿಗೆ ಕರೆ ಬಂತು. ಸಣ್ಣ ತಾಂತ್ರಿಕ ದೋಷ ಉಂಟಾದರೂ ಅದು ಮುಂದೆ ದೊಡ್ಡ ಅಪಾಯ ತಂದೊಡ್ಡುವ ಸಂಭವ ಇರುತ್ತದೆ. ಹೀಗಾಗಿ ಪೈಲಟ್​ ಅದನ್ನು ತುರ್ತು ಭೂಸ್ಪರ್ಶ ಮಾಡಿಸುವ ನಿರ್ಧಾರ ಕೈಗೊಂಡರು ಎಂದು ಏರ್​ಪೋರ್ಟ್​ ಆಡಳಿತ ಹೇಳಿದೆ.

ವಿಮಾನ ವಾಪಸ್ ಬರುವಷ್ಟರಲ್ಲಿ ಏರ್​ಪೋರ್ಟ್​ನಲ್ಲಿ ಪೊಲೀಸರು, ಆರು ಅಗ್ನಿಶಾಮಕದಳದ ಘಟಕಗಳು ಸಿದ್ಧವಾಗಿ ನಿಂತಿದ್ದರು. ಅದು ಭೂಸ್ಪರ್ಶ ಆಗುವ ಹೊತ್ತಿಗೆ ಯಾವುದೇ ರೀತಿಯ ಅಪಾಯ ಆಗುವುದನ್ನು ತಪ್ಪಿಸಲು ಎಲ್ಲ ಸಿದ್ಧತೆಗಳನ್ನೂ ಮಾಡಲಾಗಿತ್ತು. ಅದೃಷ್ಟವಶಾತ್​ ವಿಮಾನ ಸುರಕ್ಷಿತವಾಗಿ ಕೆಳಗೆ ಇಳಿಯಿತು. ಯಾರೊಬ್ಬರಿಗೂ ಏನೂ ಆಗಲಿಲ್ಲ ಎಂದೂ ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.  ನಮಗೆ ನಮ್ಮ ಪ್ರಯಾಣಿಕರ ಸುರಕ್ಷತೆ ಮುಖ್ಯ. ಹೀಗಾಗಿ ಈ ವಿಮಾನವನ್ನು ಹಿಂದಕ್ಕೆ ತರಲಾಯಿತು. ನಂತರ ತಕ್ಷಣವೇ ಅಮೃತ್​ಸರ್​ಗೆ ಇನ್ನೊಂದು ಫ್ಲೈಟ್ ವ್ಯವಸ್ಥೆ ಮಾಡಿ ಪ್ರಯಾಣಿಕರನ್ನು ಕಳಿಸಲಾಯಿತು ಎಂದೂ ವಿಸ್ತಾರಾ ಏರ್​ಲೈನ್ಸ್ ವಕ್ತಾರ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಚುನಾವಣಾ ಅಭ್ಯರ್ಥಿಗಳು ಅನುಮತಿಯಿಲ್ಲದೆ ಸಾರ್ವಜನಿಕ, ಖಾಸಗಿ ಆಸ್ತಿಗಳ ಮೇಲೆ ಪೋಸ್ಟರ್‌ಗಳನ್ನು ಅಂಟಿಸಬಾರದು: ಮದ್ರಾಸ್ ಹೈಕೋರ್ಟ್

Published On - 6:06 pm, Thu, 17 February 22

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ