Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಏರ್​ಪೋರ್ಟ್​​ನಿಂದ ಹೊರಟಿದ್ದ ವಿಸ್ತಾರ ವಿಮಾನ ಕೆಲವೇ ಕ್ಷಣಗಳಲ್ಲಿ ವಾಪಸ್​; ತುರ್ತು ಭೂಸ್ಪರ್ಶ

ವಿಮಾನ ವಾಪಸ್ ಬರುವಷ್ಟರಲ್ಲಿ ಏರ್​ಪೋರ್ಟ್​ನಲ್ಲಿ ಪೊಲೀಸರು, ಆರು ಅಗ್ನಿಶಾಮಕದಳದ ಘಟಕಗಳು ಸಿದ್ಧವಾಗಿ ನಿಂತಿದ್ದರು. ಅದು ಭೂಸ್ಪರ್ಶ ಆಗುವ ಹೊತ್ತಿಗೆ ಯಾವುದೇ ರೀತಿಯ ಅಪಾಯ ಆಗುವುದನ್ನು ತಪ್ಪಿಸಲು ಎಲ್ಲ ಸಿದ್ಧತೆಗಳನ್ನೂ ಮಾಡಲಾಗಿತ್ತು.

ದೆಹಲಿ ಏರ್​ಪೋರ್ಟ್​​ನಿಂದ ಹೊರಟಿದ್ದ ವಿಸ್ತಾರ ವಿಮಾನ ಕೆಲವೇ ಕ್ಷಣಗಳಲ್ಲಿ ವಾಪಸ್​; ತುರ್ತು ಭೂಸ್ಪರ್ಶ
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Feb 17, 2022 | 6:08 PM

ದೆಹಲಿ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ (Delhi Airport) ಹೊರಟಿದ್ದ ಅಮೃತ್​ಸರ್​ ಮೂಲದ ವಿಸ್ತಾರ ಏರ್​​ಲೈನ್ಸ್​ (Vistara Flight) ವಿಮಾನ ಕೆಲವೇ ಕ್ಷಣಗಳಲ್ಲಿ ಹಿಂದಿರುಗಿ ಬಂದು, ದೆಹಲಿ ಏರ್​ಪೋರ್ಟ್​ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಫ್ಲೈಟ್​​ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದೇ ತುರ್ತು ಭೂಸ್ಪರ್ಶಕ್ಕೆ ಕಾರಣ ಎಂದು ಹೇಳಲಾಗಿದೆ. ವಿಸ್ತಾರಾ ಏರ್​ಲೈನ್ಸ್​ನ ಯುಕೆ 697 ಎಂಬ ವಿಮಾನ ದೆಹಲಿಯಿಂದ ಅಮೃತ್​ಸರ್​ಗೆ ಹೊರಟಿತ್ತು. ಆದರೆ ಕೆಲವೇ ಕ್ಷಣದಲ್ಲಿ ತಾಂತ್ರಿಕ ಅಡಚಣೆಯಾಯಿತು. ಮುನ್ನೆಚ್ಚರಿಕಾ ಕ್ರಮವಾಗಿ ಪೈಲಟ್​ ವಿಮಾನವನ್ನು ವಾಪಸ್​ ದೆಹಲಿ ಏರ್​ಪೋರ್ಟ್​ಗೇ ತಂದರು ಎಂದು ಏರ್​ಲೈನ್ಸ್​ನ ವಕ್ತಾರ ತಿಳಿಸಿದ್ದಾರೆ.

ಈ ವಿಮಾನದಲ್ಲಿ 146 ಮಂದಿ ಪ್ರಯಾಣಿಕರು ಇದ್ದರು. ಬೆಳಗ್ಗೆ ಎಂದಿನಂತೆ ದೆಹಲಿಯಿಂದ ಹೊರಟಿತ್ತು. ಆದರೆ 10.15ರ ಹೊತ್ತಿಗೆ ಈ ವಿಮಾನ ವಾಪಸ್​ ಏರ್​​ಪೋರ್ಟ್​ಗೆ ಬಂದು ತುರ್ತು ಭೂಸ್ಪರ್ಶ ಆಗುವ ಬಗ್ಗೆ ಇಲ್ಲಿನ ಹಿರಿಯ ಪೊಲೀಸ್​ ಅಧಿಕಾರಿಗಳಿಗೆ ಕರೆ ಬಂತು. ಸಣ್ಣ ತಾಂತ್ರಿಕ ದೋಷ ಉಂಟಾದರೂ ಅದು ಮುಂದೆ ದೊಡ್ಡ ಅಪಾಯ ತಂದೊಡ್ಡುವ ಸಂಭವ ಇರುತ್ತದೆ. ಹೀಗಾಗಿ ಪೈಲಟ್​ ಅದನ್ನು ತುರ್ತು ಭೂಸ್ಪರ್ಶ ಮಾಡಿಸುವ ನಿರ್ಧಾರ ಕೈಗೊಂಡರು ಎಂದು ಏರ್​ಪೋರ್ಟ್​ ಆಡಳಿತ ಹೇಳಿದೆ.

ವಿಮಾನ ವಾಪಸ್ ಬರುವಷ್ಟರಲ್ಲಿ ಏರ್​ಪೋರ್ಟ್​ನಲ್ಲಿ ಪೊಲೀಸರು, ಆರು ಅಗ್ನಿಶಾಮಕದಳದ ಘಟಕಗಳು ಸಿದ್ಧವಾಗಿ ನಿಂತಿದ್ದರು. ಅದು ಭೂಸ್ಪರ್ಶ ಆಗುವ ಹೊತ್ತಿಗೆ ಯಾವುದೇ ರೀತಿಯ ಅಪಾಯ ಆಗುವುದನ್ನು ತಪ್ಪಿಸಲು ಎಲ್ಲ ಸಿದ್ಧತೆಗಳನ್ನೂ ಮಾಡಲಾಗಿತ್ತು. ಅದೃಷ್ಟವಶಾತ್​ ವಿಮಾನ ಸುರಕ್ಷಿತವಾಗಿ ಕೆಳಗೆ ಇಳಿಯಿತು. ಯಾರೊಬ್ಬರಿಗೂ ಏನೂ ಆಗಲಿಲ್ಲ ಎಂದೂ ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.  ನಮಗೆ ನಮ್ಮ ಪ್ರಯಾಣಿಕರ ಸುರಕ್ಷತೆ ಮುಖ್ಯ. ಹೀಗಾಗಿ ಈ ವಿಮಾನವನ್ನು ಹಿಂದಕ್ಕೆ ತರಲಾಯಿತು. ನಂತರ ತಕ್ಷಣವೇ ಅಮೃತ್​ಸರ್​ಗೆ ಇನ್ನೊಂದು ಫ್ಲೈಟ್ ವ್ಯವಸ್ಥೆ ಮಾಡಿ ಪ್ರಯಾಣಿಕರನ್ನು ಕಳಿಸಲಾಯಿತು ಎಂದೂ ವಿಸ್ತಾರಾ ಏರ್​ಲೈನ್ಸ್ ವಕ್ತಾರ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಚುನಾವಣಾ ಅಭ್ಯರ್ಥಿಗಳು ಅನುಮತಿಯಿಲ್ಲದೆ ಸಾರ್ವಜನಿಕ, ಖಾಸಗಿ ಆಸ್ತಿಗಳ ಮೇಲೆ ಪೋಸ್ಟರ್‌ಗಳನ್ನು ಅಂಟಿಸಬಾರದು: ಮದ್ರಾಸ್ ಹೈಕೋರ್ಟ್

Published On - 6:06 pm, Thu, 17 February 22

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!