AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೃತ್​ಸರ್​ ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಆರು ರೋಗಿಗಳು ಸಾವು

ಅಮೃತ್​ಸರ್ ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆ ಕೊರತೆಯಿಂದ ಆರು ಮಂದಿ ಮೃತಪಟ್ಟಿದ್ದಾರೆ. ಆ ಪೈಕಿ ಐದು ಮಂದಿ ಕೋವಿಡ್ 19 ಸೋಂಕಿತರು ಎಂದು ಆಸ್ಪತ್ರೆಯ ಅಧಿಕಾರಿಗಳು ಹೇಳಿದ್ದಾರೆ.

ಅಮೃತ್​ಸರ್​ ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಆರು ರೋಗಿಗಳು ಸಾವು
ಪ್ರಾತಿನಿಧಿಕ ಚಿತ್ರ
Srinivas Mata
|

Updated on: Apr 24, 2021 | 3:37 PM

Share

ಅಮೃತ್​ಸರ್ (ಪಿಟಿಐ): ಆಕ್ಸಿಜನ್ ಕೊರತೆಯಿಂದಾಗಿ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಆರು ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಗಳು ಹೇಳಿದ್ದಾರೆ. ಮೃತಪಟ್ಟ ಆರು ಮಂದಿಯ ಪೈಕಿ ಐವರು ಕೋವಿಡ್- 19 ಸೋಂಕಿತರು ಎಂದು ತಿಳಿಸಲಾಗಿದೆ. “ನೆರವನ್ನು ವಿಸ್ತರಿಸುವಂತೆ ಜಿಲ್ಲಾ ಆಡಳಿತ ಪದೇ ಪದೇ ಮನವಿ ಮಾಡಿಕೊಂಡ ಹೊರತಾಗಿಯೂ ಅಗತ್ಯವಾಗಿ ಏನು ಮಾಡಬೇಕಿತ್ತೋ ಆ ವ್ಯವಸ್ಥೆಯನ್ನು ಒದಗಿಸಿಲ್ಲ,” ಎಂದು ನೀಲಕಂಠ್ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಅಧ್ಯಕ್ಷ ಸುನೀಲ್ ದೇವಗನ್ ಆರೋಪಿಸಿದ್ದಾರೆ. ಇಬ್ಬರು ಮಹಿಳೆಯರು ಸೇರಿದಂತೆ ಆರು ಮಂದಿ ರೋಗಿಗಳು ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.

ರೋಗಿಗಳ ಸಾವಿನ ನಂತರ ಕೇವಲ 5 ಆಮ್ಲಜನಕ ಸಿಲಿಂಡರ್​ಗಳನ್ನು ಆಸ್ಪತ್ರೆಗೆ ಪೂರೈಸಲಾಗಿದೆ ಎಂದು ಅವರು ಹೇಳಿದ್ದಾರೆ. ಜಿಲ್ಲೆಯ ಅಧಿಕಾರಿಗಳ ಪ್ರತಿಕ್ರಿಯೆಯನ್ನು ಪಡೆಯುವ ಸಲುವಾಗಿ ಮಾಧ್ಯಮ ಸಂಸ್ಥೆಗಳು ಪದೇಪದೇ ಪ್ರಯತ್ನ ಮಾಡಿದ ನಂತರವೂ ಮಾತಿಗೆ ಅವರು ಸಿಕ್ಕಿಲ್ಲ. ಇನ್ನು ಆಸ್ಪತ್ರೆಯ ಅಧ್ಯಕ್ಷರು ಹೇಳುವ ಪ್ರಕಾರ, ಮೂವರು ಆಕ್ಸಿಜನ್ ಸಿಲಿಂಡರ್ ಪೂರೈಕೆದಾರರಿದ್ದು, ಪೂರೈಕೆ ವಿಚಾರಕ್ಕೆ ಸರ್ಕಾರಿ ಆಸ್ಪತ್ರೆಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದಿದ್ದಾರೆ.

ಆಮ್ಲಜನಕ ಘಟಕದ ಹೊರಗೆ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಖಾಸಗಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಕೆ ಆಗದಂತೆ ಹೀಗೆ ಮಾಡಲಾಗಿದೆ ಎಂದು ದೇವಗನ್ ಆರೋಪಿಸಿದ್ದಾರೆ. ಇನ್ನು ಶನಿವಾರ ಮೃತಪಟ್ಟ ಆರು ರೋಗಿಗಳ ಪೈಕಿ ಇಬ್ಬರು ಗುರ್​ದಾಸ್​ಪುರ್​ದವರು. ಒಬ್ಬರು ತರ್ನ್ ತರಣ್ ಜಿಲ್ಲೆ ಮತ್ತ ಮೂವರು ಅಮೃತ್​ಸರ್​ನವರು.

ಇದನ್ನೂ ಓದಿ: ದೇಶದಲ್ಲಿ ಮೆಡಿಕಲ್ ಆಕ್ಸಿಜನ್ ಕೊರತೆ ಇಲ್ಲ; ಪೂರೈಕೆಗೆ ಸಮಯ ತೆಗೆದುಕೊಳ್ಳುತ್ತಿದೆ ಎಂದ ನವೀನ್ ಜಿಂದಾಲ್

ಇದನ್ನೂ ಓದಿ: Oxygen emrgencey: ಸಿಂಗಾಪುರದಿಂದ ಭಾರತಕ್ಕೆ 4 ಆಕ್ಸಿಜನ್ ಟ್ಯಾಂಕರ್‌ಗಳು ಏರ್‌ಲಿಫ್ಟ್, ವಿಮಾನ ಇಳಿದಿದ್ದು ಎಲ್ಲಿ?

(Amritsar private hospital 6 patients died due to shortage of oxygen supply)

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ