AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೃತಾ ಫಡ್ನವಿಸ್​ಗೆ ಲಂಚ, ಬೆದರಿಕೆ ಪ್ರಕರಣ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್​ಗೆ ಲಂಚ ನೀಡಲು ಬಂದ ಆರೋಪದ ಮೇರೆಗೆ ಡಿಸೈನರ್ ಅನಿಕ್ಷಾ ಸಿಂಘಾನಿ ತಂದೆ ಅನಿಲ್ ಜೈಸಿಂಘಾನಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅಮೃತಾ ಫಡ್ನವಿಸ್​ಗೆ ಲಂಚ, ಬೆದರಿಕೆ ಪ್ರಕರಣ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ
ಅನಿಲ್ ಜೈಸಿಂಘಾನಿImage Credit source: Lokmat
ನಯನಾ ರಾಜೀವ್
|

Updated on: Mar 20, 2023 | 2:15 PM

Share

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್​ಗೆ ಲಂಚ ನೀಡಲು ಬಂದ ಆರೋಪದ ಮೇರೆಗೆ ಡಿಸೈನರ್ ಅನಿಕ್ಷಾ ಸಿಂಘಾನಿ ತಂದೆ ಅನಿಲ್ ಜೈಸಿಂಘಾನಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತಾ ಫಡ್ನವಿಸ್​ಗೆ ಡಿಸೈನ್ ಅನಿಕ್ಷಾ ಹಾಗೂ ಅವರ ತಂದೆ ಅನಿಲ್ ಜೈಸಿಂಘಾನಿ ಬೆದರಿಕೆ ಹಾಗೂ ಬ್ಲ್ಯಾಕ್​ಮೇಲ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ.

ಡಿಸೈನರ್ ಅನಿಕ್ಷಾ ಜೈಸಿಂಘಾನಿ ಮತ್ತು ಆಕೆಯ ತಂದೆ ಅನಿಲ್ ವಿರುದ್ಧ ಅಮೃತಾ ಫಡ್ನವಿಸ್ ಅವರು ಕಳೆದ ತಿಂಗಳು ಮಲಬಾರ್ ಹಿಲ್​ ಸ್ಟೇಷನ್​ನಲ್ಲಿ ಎಫ್​ಐಆರ್ ದಾಖಲಿಸಿದ್ದರು. ತನ್ನ ತಂದೆಯೊಂದಿಗೆ ಸೇರಿಕೊಂಡು ತನಗೆ ಬೆದರಿಕೆ ಹಾಕಿದ್ದಾರೆ, ಹಾಗೂ ನನ್ನ ವಿರುದ್ಧ ಸಂಚು ರೂಪಿಸಿದ್ದಾರೆ ಎಂದು ಅಮೃತಾ ಆರೋಪಿಸಿದ್ದರು.ದೇವೇಂದ್ರ ಫಡ್ನವಿಸ್ ಕೂಡ ಈ ಕುರಿತು ಮಾಹಿತಿ ನೀಡಿದ್ದಾರೆ.

ಅನಿಕ್ಷಾ ಅವರು ತನ್ನ ತಂದೆಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಸಹಾಯ ಮಾಡುವಂತೆ 1 ಕೋಟಿ ರೂ ಆಮಿಷ ಒಡ್ಡಿದ್ದರು. ಬಳಿಕ ಒಂದೊಮ್ಮೆ ಸಹಾಯ ಮಾಡದಿದ್ದರೆ ದೇವೇಂದ್ರ ಫಡ್ನವಿಸ್​ ಅವರನ್ನು ಈ ವಿಚಾರದಲ್ಲಿ ಸಿಲುಕಿಸುತ್ತೇನೆ ಎಂದು ಬೆದರಿಕೆ ಹಾಕಿದ್ದರು. ಹಲವು ನಕಲಿ ಆಡಿಯೋ ಹಾಗೂ ವಿಡಿಯೋ ರೆಕಾರ್ಡಿಂಗ್​ ಕಳುಹಿಸಿ ಬ್ಲ್ಯಾಕ್​ಮೇಲ್ ಮಾಡಲು ಯತ್ನಿಸಿದ್ದರು ಎಂದು ಹೇಳಲಾಗಿದೆ.

ಮತ್ತಷ್ಟು ಓದಿ: Amruta Fadnavis: ಡಿಸೈನರ್ ವಿರುದ್ಧ ಲಂಚ, ಬೆದರಿಕೆ ಪ್ರಕರಣ ದಾಖಲಿಸಿದ ದೇವೇಂದ್ರ ಫಡ್ನವಿಸ್ ಪತ್ನಿ ಅಮೃತಾ

ಅನಿಲ್ ಜೈಸಿಂಘಾನಿ ಉಲ್ಲಾಸನಗರ ನಿವಾಸಿ, ಇವರ ವಿರುದ್ಧ 5 ರಾಜ್ಯಗಳಲ್ಲಿ 17 ಪ್ರಕರಣಗಳು ದಾಖಲಾಗಿವೆ, ಅನಿಲ್ ಬೆಟ್ಟಿಂಗ್ ಪ್ರಕರಣದಲ್ಲಿ ಮೂರು ಬಾರಿ ಬಂಧನಕ್ಕೊಳಗಾಗಿದ್ದರು. ಮೇ 11 ರಂದು 2019ರಲ್ಲಿ ಗೋವಾ ಪೊಲೀಸರು ಅನಿಲ್ ವಿರುದ್ಧ ಲುಕ್​ಔಟ್ ನೋಟಿಸ್ ಜಾರಿ ಮಾಡಿದ್ದರು.

2015ರಲ್ಲಿ ಗುಜರಾತ್​ ಇಡಿ ಜೈಸಿಂಘಾನಿ ಮನೆ ಮೇಲೆ ಎರಡು ಭಾರಿ ದಾಳಿ ನಡೆಸಿತ್ತು. ಮುಂಬೈ ಪೊಲೀಸರು ಎರಡು ಬಾರಿ ಫೋರ್ಜರಿ ಪ್ರಕರಣ ದಾಖಲಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ