AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೃತಾ ಫಡ್ನವಿಸ್​ಗೆ ಲಂಚ, ಬೆದರಿಕೆ ಪ್ರಕರಣ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್​ಗೆ ಲಂಚ ನೀಡಲು ಬಂದ ಆರೋಪದ ಮೇರೆಗೆ ಡಿಸೈನರ್ ಅನಿಕ್ಷಾ ಸಿಂಘಾನಿ ತಂದೆ ಅನಿಲ್ ಜೈಸಿಂಘಾನಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅಮೃತಾ ಫಡ್ನವಿಸ್​ಗೆ ಲಂಚ, ಬೆದರಿಕೆ ಪ್ರಕರಣ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ
ಅನಿಲ್ ಜೈಸಿಂಘಾನಿImage Credit source: Lokmat
ನಯನಾ ರಾಜೀವ್
|

Updated on: Mar 20, 2023 | 2:15 PM

Share

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್​ಗೆ ಲಂಚ ನೀಡಲು ಬಂದ ಆರೋಪದ ಮೇರೆಗೆ ಡಿಸೈನರ್ ಅನಿಕ್ಷಾ ಸಿಂಘಾನಿ ತಂದೆ ಅನಿಲ್ ಜೈಸಿಂಘಾನಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತಾ ಫಡ್ನವಿಸ್​ಗೆ ಡಿಸೈನ್ ಅನಿಕ್ಷಾ ಹಾಗೂ ಅವರ ತಂದೆ ಅನಿಲ್ ಜೈಸಿಂಘಾನಿ ಬೆದರಿಕೆ ಹಾಗೂ ಬ್ಲ್ಯಾಕ್​ಮೇಲ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ.

ಡಿಸೈನರ್ ಅನಿಕ್ಷಾ ಜೈಸಿಂಘಾನಿ ಮತ್ತು ಆಕೆಯ ತಂದೆ ಅನಿಲ್ ವಿರುದ್ಧ ಅಮೃತಾ ಫಡ್ನವಿಸ್ ಅವರು ಕಳೆದ ತಿಂಗಳು ಮಲಬಾರ್ ಹಿಲ್​ ಸ್ಟೇಷನ್​ನಲ್ಲಿ ಎಫ್​ಐಆರ್ ದಾಖಲಿಸಿದ್ದರು. ತನ್ನ ತಂದೆಯೊಂದಿಗೆ ಸೇರಿಕೊಂಡು ತನಗೆ ಬೆದರಿಕೆ ಹಾಕಿದ್ದಾರೆ, ಹಾಗೂ ನನ್ನ ವಿರುದ್ಧ ಸಂಚು ರೂಪಿಸಿದ್ದಾರೆ ಎಂದು ಅಮೃತಾ ಆರೋಪಿಸಿದ್ದರು.ದೇವೇಂದ್ರ ಫಡ್ನವಿಸ್ ಕೂಡ ಈ ಕುರಿತು ಮಾಹಿತಿ ನೀಡಿದ್ದಾರೆ.

ಅನಿಕ್ಷಾ ಅವರು ತನ್ನ ತಂದೆಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಸಹಾಯ ಮಾಡುವಂತೆ 1 ಕೋಟಿ ರೂ ಆಮಿಷ ಒಡ್ಡಿದ್ದರು. ಬಳಿಕ ಒಂದೊಮ್ಮೆ ಸಹಾಯ ಮಾಡದಿದ್ದರೆ ದೇವೇಂದ್ರ ಫಡ್ನವಿಸ್​ ಅವರನ್ನು ಈ ವಿಚಾರದಲ್ಲಿ ಸಿಲುಕಿಸುತ್ತೇನೆ ಎಂದು ಬೆದರಿಕೆ ಹಾಕಿದ್ದರು. ಹಲವು ನಕಲಿ ಆಡಿಯೋ ಹಾಗೂ ವಿಡಿಯೋ ರೆಕಾರ್ಡಿಂಗ್​ ಕಳುಹಿಸಿ ಬ್ಲ್ಯಾಕ್​ಮೇಲ್ ಮಾಡಲು ಯತ್ನಿಸಿದ್ದರು ಎಂದು ಹೇಳಲಾಗಿದೆ.

ಮತ್ತಷ್ಟು ಓದಿ: Amruta Fadnavis: ಡಿಸೈನರ್ ವಿರುದ್ಧ ಲಂಚ, ಬೆದರಿಕೆ ಪ್ರಕರಣ ದಾಖಲಿಸಿದ ದೇವೇಂದ್ರ ಫಡ್ನವಿಸ್ ಪತ್ನಿ ಅಮೃತಾ

ಅನಿಲ್ ಜೈಸಿಂಘಾನಿ ಉಲ್ಲಾಸನಗರ ನಿವಾಸಿ, ಇವರ ವಿರುದ್ಧ 5 ರಾಜ್ಯಗಳಲ್ಲಿ 17 ಪ್ರಕರಣಗಳು ದಾಖಲಾಗಿವೆ, ಅನಿಲ್ ಬೆಟ್ಟಿಂಗ್ ಪ್ರಕರಣದಲ್ಲಿ ಮೂರು ಬಾರಿ ಬಂಧನಕ್ಕೊಳಗಾಗಿದ್ದರು. ಮೇ 11 ರಂದು 2019ರಲ್ಲಿ ಗೋವಾ ಪೊಲೀಸರು ಅನಿಲ್ ವಿರುದ್ಧ ಲುಕ್​ಔಟ್ ನೋಟಿಸ್ ಜಾರಿ ಮಾಡಿದ್ದರು.

2015ರಲ್ಲಿ ಗುಜರಾತ್​ ಇಡಿ ಜೈಸಿಂಘಾನಿ ಮನೆ ಮೇಲೆ ಎರಡು ಭಾರಿ ದಾಳಿ ನಡೆಸಿತ್ತು. ಮುಂಬೈ ಪೊಲೀಸರು ಎರಡು ಬಾರಿ ಫೋರ್ಜರಿ ಪ್ರಕರಣ ದಾಖಲಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ