AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೃತಾ ಫಡ್ನವಿಸ್​ಗೆ ಲಂಚ, ಬೆದರಿಕೆ ಪ್ರಕರಣ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್​ಗೆ ಲಂಚ ನೀಡಲು ಬಂದ ಆರೋಪದ ಮೇರೆಗೆ ಡಿಸೈನರ್ ಅನಿಕ್ಷಾ ಸಿಂಘಾನಿ ತಂದೆ ಅನಿಲ್ ಜೈಸಿಂಘಾನಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅಮೃತಾ ಫಡ್ನವಿಸ್​ಗೆ ಲಂಚ, ಬೆದರಿಕೆ ಪ್ರಕರಣ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ
ಅನಿಲ್ ಜೈಸಿಂಘಾನಿImage Credit source: Lokmat
ನಯನಾ ರಾಜೀವ್
|

Updated on: Mar 20, 2023 | 2:15 PM

Share

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್​ಗೆ ಲಂಚ ನೀಡಲು ಬಂದ ಆರೋಪದ ಮೇರೆಗೆ ಡಿಸೈನರ್ ಅನಿಕ್ಷಾ ಸಿಂಘಾನಿ ತಂದೆ ಅನಿಲ್ ಜೈಸಿಂಘಾನಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತಾ ಫಡ್ನವಿಸ್​ಗೆ ಡಿಸೈನ್ ಅನಿಕ್ಷಾ ಹಾಗೂ ಅವರ ತಂದೆ ಅನಿಲ್ ಜೈಸಿಂಘಾನಿ ಬೆದರಿಕೆ ಹಾಗೂ ಬ್ಲ್ಯಾಕ್​ಮೇಲ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ.

ಡಿಸೈನರ್ ಅನಿಕ್ಷಾ ಜೈಸಿಂಘಾನಿ ಮತ್ತು ಆಕೆಯ ತಂದೆ ಅನಿಲ್ ವಿರುದ್ಧ ಅಮೃತಾ ಫಡ್ನವಿಸ್ ಅವರು ಕಳೆದ ತಿಂಗಳು ಮಲಬಾರ್ ಹಿಲ್​ ಸ್ಟೇಷನ್​ನಲ್ಲಿ ಎಫ್​ಐಆರ್ ದಾಖಲಿಸಿದ್ದರು. ತನ್ನ ತಂದೆಯೊಂದಿಗೆ ಸೇರಿಕೊಂಡು ತನಗೆ ಬೆದರಿಕೆ ಹಾಕಿದ್ದಾರೆ, ಹಾಗೂ ನನ್ನ ವಿರುದ್ಧ ಸಂಚು ರೂಪಿಸಿದ್ದಾರೆ ಎಂದು ಅಮೃತಾ ಆರೋಪಿಸಿದ್ದರು.ದೇವೇಂದ್ರ ಫಡ್ನವಿಸ್ ಕೂಡ ಈ ಕುರಿತು ಮಾಹಿತಿ ನೀಡಿದ್ದಾರೆ.

ಅನಿಕ್ಷಾ ಅವರು ತನ್ನ ತಂದೆಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಸಹಾಯ ಮಾಡುವಂತೆ 1 ಕೋಟಿ ರೂ ಆಮಿಷ ಒಡ್ಡಿದ್ದರು. ಬಳಿಕ ಒಂದೊಮ್ಮೆ ಸಹಾಯ ಮಾಡದಿದ್ದರೆ ದೇವೇಂದ್ರ ಫಡ್ನವಿಸ್​ ಅವರನ್ನು ಈ ವಿಚಾರದಲ್ಲಿ ಸಿಲುಕಿಸುತ್ತೇನೆ ಎಂದು ಬೆದರಿಕೆ ಹಾಕಿದ್ದರು. ಹಲವು ನಕಲಿ ಆಡಿಯೋ ಹಾಗೂ ವಿಡಿಯೋ ರೆಕಾರ್ಡಿಂಗ್​ ಕಳುಹಿಸಿ ಬ್ಲ್ಯಾಕ್​ಮೇಲ್ ಮಾಡಲು ಯತ್ನಿಸಿದ್ದರು ಎಂದು ಹೇಳಲಾಗಿದೆ.

ಮತ್ತಷ್ಟು ಓದಿ: Amruta Fadnavis: ಡಿಸೈನರ್ ವಿರುದ್ಧ ಲಂಚ, ಬೆದರಿಕೆ ಪ್ರಕರಣ ದಾಖಲಿಸಿದ ದೇವೇಂದ್ರ ಫಡ್ನವಿಸ್ ಪತ್ನಿ ಅಮೃತಾ

ಅನಿಲ್ ಜೈಸಿಂಘಾನಿ ಉಲ್ಲಾಸನಗರ ನಿವಾಸಿ, ಇವರ ವಿರುದ್ಧ 5 ರಾಜ್ಯಗಳಲ್ಲಿ 17 ಪ್ರಕರಣಗಳು ದಾಖಲಾಗಿವೆ, ಅನಿಲ್ ಬೆಟ್ಟಿಂಗ್ ಪ್ರಕರಣದಲ್ಲಿ ಮೂರು ಬಾರಿ ಬಂಧನಕ್ಕೊಳಗಾಗಿದ್ದರು. ಮೇ 11 ರಂದು 2019ರಲ್ಲಿ ಗೋವಾ ಪೊಲೀಸರು ಅನಿಲ್ ವಿರುದ್ಧ ಲುಕ್​ಔಟ್ ನೋಟಿಸ್ ಜಾರಿ ಮಾಡಿದ್ದರು.

2015ರಲ್ಲಿ ಗುಜರಾತ್​ ಇಡಿ ಜೈಸಿಂಘಾನಿ ಮನೆ ಮೇಲೆ ಎರಡು ಭಾರಿ ದಾಳಿ ನಡೆಸಿತ್ತು. ಮುಂಬೈ ಪೊಲೀಸರು ಎರಡು ಬಾರಿ ಫೋರ್ಜರಿ ಪ್ರಕರಣ ದಾಖಲಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ