AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೃತಾ ಫಡ್ನವಿಸ್​ಗೆ ಲಂಚ, ಬೆದರಿಕೆ ಪ್ರಕರಣ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್​ಗೆ ಲಂಚ ನೀಡಲು ಬಂದ ಆರೋಪದ ಮೇರೆಗೆ ಡಿಸೈನರ್ ಅನಿಕ್ಷಾ ಸಿಂಘಾನಿ ತಂದೆ ಅನಿಲ್ ಜೈಸಿಂಘಾನಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅಮೃತಾ ಫಡ್ನವಿಸ್​ಗೆ ಲಂಚ, ಬೆದರಿಕೆ ಪ್ರಕರಣ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ
ಅನಿಲ್ ಜೈಸಿಂಘಾನಿImage Credit source: Lokmat
Follow us
ನಯನಾ ರಾಜೀವ್
|

Updated on: Mar 20, 2023 | 2:15 PM

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್​ಗೆ ಲಂಚ ನೀಡಲು ಬಂದ ಆರೋಪದ ಮೇರೆಗೆ ಡಿಸೈನರ್ ಅನಿಕ್ಷಾ ಸಿಂಘಾನಿ ತಂದೆ ಅನಿಲ್ ಜೈಸಿಂಘಾನಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತಾ ಫಡ್ನವಿಸ್​ಗೆ ಡಿಸೈನ್ ಅನಿಕ್ಷಾ ಹಾಗೂ ಅವರ ತಂದೆ ಅನಿಲ್ ಜೈಸಿಂಘಾನಿ ಬೆದರಿಕೆ ಹಾಗೂ ಬ್ಲ್ಯಾಕ್​ಮೇಲ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ.

ಡಿಸೈನರ್ ಅನಿಕ್ಷಾ ಜೈಸಿಂಘಾನಿ ಮತ್ತು ಆಕೆಯ ತಂದೆ ಅನಿಲ್ ವಿರುದ್ಧ ಅಮೃತಾ ಫಡ್ನವಿಸ್ ಅವರು ಕಳೆದ ತಿಂಗಳು ಮಲಬಾರ್ ಹಿಲ್​ ಸ್ಟೇಷನ್​ನಲ್ಲಿ ಎಫ್​ಐಆರ್ ದಾಖಲಿಸಿದ್ದರು. ತನ್ನ ತಂದೆಯೊಂದಿಗೆ ಸೇರಿಕೊಂಡು ತನಗೆ ಬೆದರಿಕೆ ಹಾಕಿದ್ದಾರೆ, ಹಾಗೂ ನನ್ನ ವಿರುದ್ಧ ಸಂಚು ರೂಪಿಸಿದ್ದಾರೆ ಎಂದು ಅಮೃತಾ ಆರೋಪಿಸಿದ್ದರು.ದೇವೇಂದ್ರ ಫಡ್ನವಿಸ್ ಕೂಡ ಈ ಕುರಿತು ಮಾಹಿತಿ ನೀಡಿದ್ದಾರೆ.

ಅನಿಕ್ಷಾ ಅವರು ತನ್ನ ತಂದೆಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಸಹಾಯ ಮಾಡುವಂತೆ 1 ಕೋಟಿ ರೂ ಆಮಿಷ ಒಡ್ಡಿದ್ದರು. ಬಳಿಕ ಒಂದೊಮ್ಮೆ ಸಹಾಯ ಮಾಡದಿದ್ದರೆ ದೇವೇಂದ್ರ ಫಡ್ನವಿಸ್​ ಅವರನ್ನು ಈ ವಿಚಾರದಲ್ಲಿ ಸಿಲುಕಿಸುತ್ತೇನೆ ಎಂದು ಬೆದರಿಕೆ ಹಾಕಿದ್ದರು. ಹಲವು ನಕಲಿ ಆಡಿಯೋ ಹಾಗೂ ವಿಡಿಯೋ ರೆಕಾರ್ಡಿಂಗ್​ ಕಳುಹಿಸಿ ಬ್ಲ್ಯಾಕ್​ಮೇಲ್ ಮಾಡಲು ಯತ್ನಿಸಿದ್ದರು ಎಂದು ಹೇಳಲಾಗಿದೆ.

ಮತ್ತಷ್ಟು ಓದಿ: Amruta Fadnavis: ಡಿಸೈನರ್ ವಿರುದ್ಧ ಲಂಚ, ಬೆದರಿಕೆ ಪ್ರಕರಣ ದಾಖಲಿಸಿದ ದೇವೇಂದ್ರ ಫಡ್ನವಿಸ್ ಪತ್ನಿ ಅಮೃತಾ

ಅನಿಲ್ ಜೈಸಿಂಘಾನಿ ಉಲ್ಲಾಸನಗರ ನಿವಾಸಿ, ಇವರ ವಿರುದ್ಧ 5 ರಾಜ್ಯಗಳಲ್ಲಿ 17 ಪ್ರಕರಣಗಳು ದಾಖಲಾಗಿವೆ, ಅನಿಲ್ ಬೆಟ್ಟಿಂಗ್ ಪ್ರಕರಣದಲ್ಲಿ ಮೂರು ಬಾರಿ ಬಂಧನಕ್ಕೊಳಗಾಗಿದ್ದರು. ಮೇ 11 ರಂದು 2019ರಲ್ಲಿ ಗೋವಾ ಪೊಲೀಸರು ಅನಿಲ್ ವಿರುದ್ಧ ಲುಕ್​ಔಟ್ ನೋಟಿಸ್ ಜಾರಿ ಮಾಡಿದ್ದರು.

2015ರಲ್ಲಿ ಗುಜರಾತ್​ ಇಡಿ ಜೈಸಿಂಘಾನಿ ಮನೆ ಮೇಲೆ ಎರಡು ಭಾರಿ ದಾಳಿ ನಡೆಸಿತ್ತು. ಮುಂಬೈ ಪೊಲೀಸರು ಎರಡು ಬಾರಿ ಫೋರ್ಜರಿ ಪ್ರಕರಣ ದಾಖಲಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ