AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೃತಾ ಫಡ್ನವಿಸ್​ಗೆ ಲಂಚ, ಬೆದರಿಕೆ ಪ್ರಕರಣ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್​ಗೆ ಲಂಚ ನೀಡಲು ಬಂದ ಆರೋಪದ ಮೇರೆಗೆ ಡಿಸೈನರ್ ಅನಿಕ್ಷಾ ಸಿಂಘಾನಿ ತಂದೆ ಅನಿಲ್ ಜೈಸಿಂಘಾನಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅಮೃತಾ ಫಡ್ನವಿಸ್​ಗೆ ಲಂಚ, ಬೆದರಿಕೆ ಪ್ರಕರಣ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ
ಅನಿಲ್ ಜೈಸಿಂಘಾನಿImage Credit source: Lokmat
ನಯನಾ ರಾಜೀವ್
|

Updated on: Mar 20, 2023 | 2:15 PM

Share

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್​ಗೆ ಲಂಚ ನೀಡಲು ಬಂದ ಆರೋಪದ ಮೇರೆಗೆ ಡಿಸೈನರ್ ಅನಿಕ್ಷಾ ಸಿಂಘಾನಿ ತಂದೆ ಅನಿಲ್ ಜೈಸಿಂಘಾನಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತಾ ಫಡ್ನವಿಸ್​ಗೆ ಡಿಸೈನ್ ಅನಿಕ್ಷಾ ಹಾಗೂ ಅವರ ತಂದೆ ಅನಿಲ್ ಜೈಸಿಂಘಾನಿ ಬೆದರಿಕೆ ಹಾಗೂ ಬ್ಲ್ಯಾಕ್​ಮೇಲ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ.

ಡಿಸೈನರ್ ಅನಿಕ್ಷಾ ಜೈಸಿಂಘಾನಿ ಮತ್ತು ಆಕೆಯ ತಂದೆ ಅನಿಲ್ ವಿರುದ್ಧ ಅಮೃತಾ ಫಡ್ನವಿಸ್ ಅವರು ಕಳೆದ ತಿಂಗಳು ಮಲಬಾರ್ ಹಿಲ್​ ಸ್ಟೇಷನ್​ನಲ್ಲಿ ಎಫ್​ಐಆರ್ ದಾಖಲಿಸಿದ್ದರು. ತನ್ನ ತಂದೆಯೊಂದಿಗೆ ಸೇರಿಕೊಂಡು ತನಗೆ ಬೆದರಿಕೆ ಹಾಕಿದ್ದಾರೆ, ಹಾಗೂ ನನ್ನ ವಿರುದ್ಧ ಸಂಚು ರೂಪಿಸಿದ್ದಾರೆ ಎಂದು ಅಮೃತಾ ಆರೋಪಿಸಿದ್ದರು.ದೇವೇಂದ್ರ ಫಡ್ನವಿಸ್ ಕೂಡ ಈ ಕುರಿತು ಮಾಹಿತಿ ನೀಡಿದ್ದಾರೆ.

ಅನಿಕ್ಷಾ ಅವರು ತನ್ನ ತಂದೆಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಸಹಾಯ ಮಾಡುವಂತೆ 1 ಕೋಟಿ ರೂ ಆಮಿಷ ಒಡ್ಡಿದ್ದರು. ಬಳಿಕ ಒಂದೊಮ್ಮೆ ಸಹಾಯ ಮಾಡದಿದ್ದರೆ ದೇವೇಂದ್ರ ಫಡ್ನವಿಸ್​ ಅವರನ್ನು ಈ ವಿಚಾರದಲ್ಲಿ ಸಿಲುಕಿಸುತ್ತೇನೆ ಎಂದು ಬೆದರಿಕೆ ಹಾಕಿದ್ದರು. ಹಲವು ನಕಲಿ ಆಡಿಯೋ ಹಾಗೂ ವಿಡಿಯೋ ರೆಕಾರ್ಡಿಂಗ್​ ಕಳುಹಿಸಿ ಬ್ಲ್ಯಾಕ್​ಮೇಲ್ ಮಾಡಲು ಯತ್ನಿಸಿದ್ದರು ಎಂದು ಹೇಳಲಾಗಿದೆ.

ಮತ್ತಷ್ಟು ಓದಿ: Amruta Fadnavis: ಡಿಸೈನರ್ ವಿರುದ್ಧ ಲಂಚ, ಬೆದರಿಕೆ ಪ್ರಕರಣ ದಾಖಲಿಸಿದ ದೇವೇಂದ್ರ ಫಡ್ನವಿಸ್ ಪತ್ನಿ ಅಮೃತಾ

ಅನಿಲ್ ಜೈಸಿಂಘಾನಿ ಉಲ್ಲಾಸನಗರ ನಿವಾಸಿ, ಇವರ ವಿರುದ್ಧ 5 ರಾಜ್ಯಗಳಲ್ಲಿ 17 ಪ್ರಕರಣಗಳು ದಾಖಲಾಗಿವೆ, ಅನಿಲ್ ಬೆಟ್ಟಿಂಗ್ ಪ್ರಕರಣದಲ್ಲಿ ಮೂರು ಬಾರಿ ಬಂಧನಕ್ಕೊಳಗಾಗಿದ್ದರು. ಮೇ 11 ರಂದು 2019ರಲ್ಲಿ ಗೋವಾ ಪೊಲೀಸರು ಅನಿಲ್ ವಿರುದ್ಧ ಲುಕ್​ಔಟ್ ನೋಟಿಸ್ ಜಾರಿ ಮಾಡಿದ್ದರು.

2015ರಲ್ಲಿ ಗುಜರಾತ್​ ಇಡಿ ಜೈಸಿಂಘಾನಿ ಮನೆ ಮೇಲೆ ಎರಡು ಭಾರಿ ದಾಳಿ ನಡೆಸಿತ್ತು. ಮುಂಬೈ ಪೊಲೀಸರು ಎರಡು ಬಾರಿ ಫೋರ್ಜರಿ ಪ್ರಕರಣ ದಾಖಲಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ