AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೃತಾ ಫಡ್ನವಿಸ್​ಗೆ ಲಂಚ, ಬೆದರಿಕೆ ಪ್ರಕರಣ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್​ಗೆ ಲಂಚ ನೀಡಲು ಬಂದ ಆರೋಪದ ಮೇರೆಗೆ ಡಿಸೈನರ್ ಅನಿಕ್ಷಾ ಸಿಂಘಾನಿ ತಂದೆ ಅನಿಲ್ ಜೈಸಿಂಘಾನಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅಮೃತಾ ಫಡ್ನವಿಸ್​ಗೆ ಲಂಚ, ಬೆದರಿಕೆ ಪ್ರಕರಣ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ
ಅನಿಲ್ ಜೈಸಿಂಘಾನಿImage Credit source: Lokmat
ನಯನಾ ರಾಜೀವ್
|

Updated on: Mar 20, 2023 | 2:15 PM

Share

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್​ಗೆ ಲಂಚ ನೀಡಲು ಬಂದ ಆರೋಪದ ಮೇರೆಗೆ ಡಿಸೈನರ್ ಅನಿಕ್ಷಾ ಸಿಂಘಾನಿ ತಂದೆ ಅನಿಲ್ ಜೈಸಿಂಘಾನಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತಾ ಫಡ್ನವಿಸ್​ಗೆ ಡಿಸೈನ್ ಅನಿಕ್ಷಾ ಹಾಗೂ ಅವರ ತಂದೆ ಅನಿಲ್ ಜೈಸಿಂಘಾನಿ ಬೆದರಿಕೆ ಹಾಗೂ ಬ್ಲ್ಯಾಕ್​ಮೇಲ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ.

ಡಿಸೈನರ್ ಅನಿಕ್ಷಾ ಜೈಸಿಂಘಾನಿ ಮತ್ತು ಆಕೆಯ ತಂದೆ ಅನಿಲ್ ವಿರುದ್ಧ ಅಮೃತಾ ಫಡ್ನವಿಸ್ ಅವರು ಕಳೆದ ತಿಂಗಳು ಮಲಬಾರ್ ಹಿಲ್​ ಸ್ಟೇಷನ್​ನಲ್ಲಿ ಎಫ್​ಐಆರ್ ದಾಖಲಿಸಿದ್ದರು. ತನ್ನ ತಂದೆಯೊಂದಿಗೆ ಸೇರಿಕೊಂಡು ತನಗೆ ಬೆದರಿಕೆ ಹಾಕಿದ್ದಾರೆ, ಹಾಗೂ ನನ್ನ ವಿರುದ್ಧ ಸಂಚು ರೂಪಿಸಿದ್ದಾರೆ ಎಂದು ಅಮೃತಾ ಆರೋಪಿಸಿದ್ದರು.ದೇವೇಂದ್ರ ಫಡ್ನವಿಸ್ ಕೂಡ ಈ ಕುರಿತು ಮಾಹಿತಿ ನೀಡಿದ್ದಾರೆ.

ಅನಿಕ್ಷಾ ಅವರು ತನ್ನ ತಂದೆಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಸಹಾಯ ಮಾಡುವಂತೆ 1 ಕೋಟಿ ರೂ ಆಮಿಷ ಒಡ್ಡಿದ್ದರು. ಬಳಿಕ ಒಂದೊಮ್ಮೆ ಸಹಾಯ ಮಾಡದಿದ್ದರೆ ದೇವೇಂದ್ರ ಫಡ್ನವಿಸ್​ ಅವರನ್ನು ಈ ವಿಚಾರದಲ್ಲಿ ಸಿಲುಕಿಸುತ್ತೇನೆ ಎಂದು ಬೆದರಿಕೆ ಹಾಕಿದ್ದರು. ಹಲವು ನಕಲಿ ಆಡಿಯೋ ಹಾಗೂ ವಿಡಿಯೋ ರೆಕಾರ್ಡಿಂಗ್​ ಕಳುಹಿಸಿ ಬ್ಲ್ಯಾಕ್​ಮೇಲ್ ಮಾಡಲು ಯತ್ನಿಸಿದ್ದರು ಎಂದು ಹೇಳಲಾಗಿದೆ.

ಮತ್ತಷ್ಟು ಓದಿ: Amruta Fadnavis: ಡಿಸೈನರ್ ವಿರುದ್ಧ ಲಂಚ, ಬೆದರಿಕೆ ಪ್ರಕರಣ ದಾಖಲಿಸಿದ ದೇವೇಂದ್ರ ಫಡ್ನವಿಸ್ ಪತ್ನಿ ಅಮೃತಾ

ಅನಿಲ್ ಜೈಸಿಂಘಾನಿ ಉಲ್ಲಾಸನಗರ ನಿವಾಸಿ, ಇವರ ವಿರುದ್ಧ 5 ರಾಜ್ಯಗಳಲ್ಲಿ 17 ಪ್ರಕರಣಗಳು ದಾಖಲಾಗಿವೆ, ಅನಿಲ್ ಬೆಟ್ಟಿಂಗ್ ಪ್ರಕರಣದಲ್ಲಿ ಮೂರು ಬಾರಿ ಬಂಧನಕ್ಕೊಳಗಾಗಿದ್ದರು. ಮೇ 11 ರಂದು 2019ರಲ್ಲಿ ಗೋವಾ ಪೊಲೀಸರು ಅನಿಲ್ ವಿರುದ್ಧ ಲುಕ್​ಔಟ್ ನೋಟಿಸ್ ಜಾರಿ ಮಾಡಿದ್ದರು.

2015ರಲ್ಲಿ ಗುಜರಾತ್​ ಇಡಿ ಜೈಸಿಂಘಾನಿ ಮನೆ ಮೇಲೆ ಎರಡು ಭಾರಿ ದಾಳಿ ನಡೆಸಿತ್ತು. ಮುಂಬೈ ಪೊಲೀಸರು ಎರಡು ಬಾರಿ ಫೋರ್ಜರಿ ಪ್ರಕರಣ ದಾಖಲಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!