Sign In

By signing in or creating an account, you agree with Associated Broadcasting Company's Terms & Conditions and Privacy Policy.

Amul: ಪ್ಲಾಸ್ಟಿಕ್ ಸ್ಟ್ರಾ ಬ್ಯಾನ್ ಮಾಡದಂತೆ ಪ್ರಧಾನಿ ಮೋದಿಗೆ ಅಮುಲ್ ಮನವಿ; ಕಾರಣವೇನು?

Plastic Ban: ಜುಲೈ 1ರಂದು ಸಣ್ಣ ಪ್ಯಾಕ್ ಜ್ಯೂಸ್ ಮತ್ತು ಡೈರಿ ಉತ್ಪನ್ನಗಳೊಂದಿಗೆ ಪ್ಯಾಕ್ ಮಾಡಲಾದ ಸ್ಟ್ರಾಗಳನ್ನು ನಿಷೇಧಿಸಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು.

Amul: ಪ್ಲಾಸ್ಟಿಕ್ ಸ್ಟ್ರಾ ಬ್ಯಾನ್ ಮಾಡದಂತೆ ಪ್ರಧಾನಿ ಮೋದಿಗೆ ಅಮುಲ್ ಮನವಿ; ಕಾರಣವೇನು?
ಅಮುಲ್Image Credit source: NDTV
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jun 09, 2022 | 3:43 PM

ನವದೆಹಲಿ: ಭಾರತದ ಅತಿದೊಡ್ಡ ಡೈರಿ ಸಮೂಹ ಸಂಸ್ಥೆಯಾದ ಅಮುಲ್ (Amul) ಪ್ಲಾಸ್ಟಿಕ್ ಸ್ಟ್ರಾಗಳನ್ನು ಬ್ಯಾನ್ ಮಾಡಲು ನಿರ್ಧರಿಸಿರುವ ಕೇಂದ್ರ ಸರ್ಕಾರದ ಯೋಜನೆಯನ್ನು ಮುಂದೂಡುವಂತೆ ಒತ್ತಾಯಿಸಿ ಸರ್ಕಾರಕ್ಕೆ ಪತ್ರ ಬರೆದಿದೆ. ಈ ಕ್ರಮವು ರೈತರು ಮತ್ತು ವಿಶ್ವದ ಅತಿದೊಡ್ಡ ಉತ್ಪನ್ನದ ಉತ್ಪಾದಕರ ಹಾಲಿನ ಬಳಕೆಯ ಮೇಲೆ ನೆಗೆಟಿವ್ ಪರಿಣಾಮ ಬೀರುತ್ತದೆ ಎಂದು ಪತ್ರದಲ್ಲಿ ಹೇಳಿದೆ. ಮೇ 28ರಂದು ಬರೆಯಲಾದ ಪತ್ರದಲ್ಲಿ ಅಮುಲ್ ತನ್ನ ಮನವಿಯನ್ನು ಮಾಡಿದೆ.

ಜುಲೈ 1ರಂದು ಸಣ್ಣ ಪ್ಯಾಕ್ ಜ್ಯೂಸ್ ಮತ್ತು ಡೈರಿ ಉತ್ಪನ್ನಗಳೊಂದಿಗೆ ಪ್ಯಾಕ್ ಮಾಡಲಾದ ಸ್ಟ್ರಾಗಳನ್ನು ನಿಷೇಧಿಸಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು. ಅದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿಗೆ ಅಮುಲ್ ಈ ಪತ್ರವನ್ನು ಕಳುಹಿಸಿದೆ. ಅಮುಲ್ ಪ್ರತಿ ವರ್ಷ ಪ್ಲಾಸ್ಟಿಕ್ ಸ್ಟ್ರಾಗಳನ್ನು ಜೋಡಿಸಿ ಶತಕೋಟಿ ಸಣ್ಣ ಡೈರಿ ಪೆಟ್ಟಿಗೆಗಳನ್ನು ಮಾರಾಟ ಮಾಡುತ್ತದೆ.

ಆದರೆ, ಸರ್ಕಾರದ ಈ ನಿರ್ಧಾರದಿಂದ ಅಮುಲ್ ಮತ್ತು ಪೆಪ್ಸಿಕೋ ಇಂಕ್ ಮತ್ತು ಕೋಕಾ-ಕೋಲಾ ಸೇರಿದಂತೆ ಜಾಗತಿಕ ಪಾನೀಯಗಳ ಕಂಪನಿಗಳು ಬೆಚ್ಚಿಬಿದ್ದಿದೆ. ಹೀಗಾಗಿ, ಸರ್ಕಾರವು ತನ್ನ ನಿಲುವನ್ನು ಬದಲಾಯಿಸಲು ನಿರಾಕರಿಸಿದ್ದು, ಪ್ಲಾಸ್ಟಿಕ್​ಗೆ ಪರ್ಯಾಯವಾದ ಸ್ಟ್ರಾಗಳನ್ನು ಬಳಸುವಂತೆ ಕಂಪನಿಗಳಿಗೆ ಸೂಚಿಸಿದೆ ಎಂದು ರಾಯಿಟರ್ಸ್ ಈ ಹಿಂದೆ ವರದಿ ಮಾಡಿತ್ತು. ಆದರೆ, ಜುಲೈ 1ರಿಂದ ಸರ್ಕಾರ ಪ್ಲಾಸ್ಟಿಕ್ ಸ್ಟ್ರಾ ನಿಷೇಧ ಮಾಡಿದ ನಂತರ ಅಮುಲ್ ಸ್ಟ್ರಾಗಳಿಲ್ಲದೆ ಪ್ಯಾಕ್‌ಗಳನ್ನು ಮಾರಾಟ ಮಾಡಬೇಕಾಗಬಹುದು ಎನ್ನಲಾಗಿದೆ.

ಇದನ್ನೂ ಓದಿ: Viral News: ಬಕೆಟ್​ಗೂ ಒಂದು ಕಾಲ; ಅಮೆಜಾನ್​ನಲ್ಲಿ ಸೇಲ್​ಗಿದೆ 25,999 ರೂ. ಬೆಲೆಯ ಪ್ಲಾಸ್ಟಿಕ್ ಬಕೆಟ್!

ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯವಾದ ಗುಜರಾತ್‌ನಲ್ಲಿರುವ ಅಮುಲ್ ಹಾಲು, ಅದರ ಚೀಸ್ ಮತ್ತು ಚಾಕೊಲೇಟ್‌ಗಳನ್ನು ಒಳಗೊಂಡಿರುವ ಪ್ಲಾಸ್ಟಿಕ್ ಪೌಚ್‌ಗಳಿಗೆ ಜನಪ್ರಿಯವಾಗಿದೆ. ಪೆಪ್ಸಿಯ ಟ್ರೋಪಿಕಾನಾ ಜ್ಯೂಸ್, ಕೋಕಾ-ಕೋಲಾದ ಮಾಜಾ ಮತ್ತು ಪಾರ್ಲೆ ಆಗ್ರೋದ ಫ್ರೂಟಿ ಮಾವಿನ ಪಾನೀಯಗಳು ಸಹ ಹೆಚ್ಚು ಮಾರಾಟವಾಗುವ ಪಾನೀಯಗಳಲ್ಲಿ ಸೇರಿವೆ. ಉದ್ಯಮದ ಅಂದಾಜಿನ ಪ್ರಕಾರ ಭಾರತದಲ್ಲಿ ಪ್ರತಿ ವರ್ಷ 6 ಬಿಲಿಯನ್ ಪ್ಯಾಕ್‌ಗಳು ಮಾರಾಟವಾಗುತ್ತವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್