Amul: ಪ್ಲಾಸ್ಟಿಕ್ ಸ್ಟ್ರಾ ಬ್ಯಾನ್ ಮಾಡದಂತೆ ಪ್ರಧಾನಿ ಮೋದಿಗೆ ಅಮುಲ್ ಮನವಿ; ಕಾರಣವೇನು?

Plastic Ban: ಜುಲೈ 1ರಂದು ಸಣ್ಣ ಪ್ಯಾಕ್ ಜ್ಯೂಸ್ ಮತ್ತು ಡೈರಿ ಉತ್ಪನ್ನಗಳೊಂದಿಗೆ ಪ್ಯಾಕ್ ಮಾಡಲಾದ ಸ್ಟ್ರಾಗಳನ್ನು ನಿಷೇಧಿಸಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು.

Amul: ಪ್ಲಾಸ್ಟಿಕ್ ಸ್ಟ್ರಾ ಬ್ಯಾನ್ ಮಾಡದಂತೆ ಪ್ರಧಾನಿ ಮೋದಿಗೆ ಅಮುಲ್ ಮನವಿ; ಕಾರಣವೇನು?
ಅಮುಲ್Image Credit source: NDTV
Follow us
| Updated By: ಸುಷ್ಮಾ ಚಕ್ರೆ

Updated on: Jun 09, 2022 | 3:43 PM

ನವದೆಹಲಿ: ಭಾರತದ ಅತಿದೊಡ್ಡ ಡೈರಿ ಸಮೂಹ ಸಂಸ್ಥೆಯಾದ ಅಮುಲ್ (Amul) ಪ್ಲಾಸ್ಟಿಕ್ ಸ್ಟ್ರಾಗಳನ್ನು ಬ್ಯಾನ್ ಮಾಡಲು ನಿರ್ಧರಿಸಿರುವ ಕೇಂದ್ರ ಸರ್ಕಾರದ ಯೋಜನೆಯನ್ನು ಮುಂದೂಡುವಂತೆ ಒತ್ತಾಯಿಸಿ ಸರ್ಕಾರಕ್ಕೆ ಪತ್ರ ಬರೆದಿದೆ. ಈ ಕ್ರಮವು ರೈತರು ಮತ್ತು ವಿಶ್ವದ ಅತಿದೊಡ್ಡ ಉತ್ಪನ್ನದ ಉತ್ಪಾದಕರ ಹಾಲಿನ ಬಳಕೆಯ ಮೇಲೆ ನೆಗೆಟಿವ್ ಪರಿಣಾಮ ಬೀರುತ್ತದೆ ಎಂದು ಪತ್ರದಲ್ಲಿ ಹೇಳಿದೆ. ಮೇ 28ರಂದು ಬರೆಯಲಾದ ಪತ್ರದಲ್ಲಿ ಅಮುಲ್ ತನ್ನ ಮನವಿಯನ್ನು ಮಾಡಿದೆ.

ಜುಲೈ 1ರಂದು ಸಣ್ಣ ಪ್ಯಾಕ್ ಜ್ಯೂಸ್ ಮತ್ತು ಡೈರಿ ಉತ್ಪನ್ನಗಳೊಂದಿಗೆ ಪ್ಯಾಕ್ ಮಾಡಲಾದ ಸ್ಟ್ರಾಗಳನ್ನು ನಿಷೇಧಿಸಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು. ಅದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿಗೆ ಅಮುಲ್ ಈ ಪತ್ರವನ್ನು ಕಳುಹಿಸಿದೆ. ಅಮುಲ್ ಪ್ರತಿ ವರ್ಷ ಪ್ಲಾಸ್ಟಿಕ್ ಸ್ಟ್ರಾಗಳನ್ನು ಜೋಡಿಸಿ ಶತಕೋಟಿ ಸಣ್ಣ ಡೈರಿ ಪೆಟ್ಟಿಗೆಗಳನ್ನು ಮಾರಾಟ ಮಾಡುತ್ತದೆ.

ಆದರೆ, ಸರ್ಕಾರದ ಈ ನಿರ್ಧಾರದಿಂದ ಅಮುಲ್ ಮತ್ತು ಪೆಪ್ಸಿಕೋ ಇಂಕ್ ಮತ್ತು ಕೋಕಾ-ಕೋಲಾ ಸೇರಿದಂತೆ ಜಾಗತಿಕ ಪಾನೀಯಗಳ ಕಂಪನಿಗಳು ಬೆಚ್ಚಿಬಿದ್ದಿದೆ. ಹೀಗಾಗಿ, ಸರ್ಕಾರವು ತನ್ನ ನಿಲುವನ್ನು ಬದಲಾಯಿಸಲು ನಿರಾಕರಿಸಿದ್ದು, ಪ್ಲಾಸ್ಟಿಕ್​ಗೆ ಪರ್ಯಾಯವಾದ ಸ್ಟ್ರಾಗಳನ್ನು ಬಳಸುವಂತೆ ಕಂಪನಿಗಳಿಗೆ ಸೂಚಿಸಿದೆ ಎಂದು ರಾಯಿಟರ್ಸ್ ಈ ಹಿಂದೆ ವರದಿ ಮಾಡಿತ್ತು. ಆದರೆ, ಜುಲೈ 1ರಿಂದ ಸರ್ಕಾರ ಪ್ಲಾಸ್ಟಿಕ್ ಸ್ಟ್ರಾ ನಿಷೇಧ ಮಾಡಿದ ನಂತರ ಅಮುಲ್ ಸ್ಟ್ರಾಗಳಿಲ್ಲದೆ ಪ್ಯಾಕ್‌ಗಳನ್ನು ಮಾರಾಟ ಮಾಡಬೇಕಾಗಬಹುದು ಎನ್ನಲಾಗಿದೆ.

ಇದನ್ನೂ ಓದಿ: Viral News: ಬಕೆಟ್​ಗೂ ಒಂದು ಕಾಲ; ಅಮೆಜಾನ್​ನಲ್ಲಿ ಸೇಲ್​ಗಿದೆ 25,999 ರೂ. ಬೆಲೆಯ ಪ್ಲಾಸ್ಟಿಕ್ ಬಕೆಟ್!

ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯವಾದ ಗುಜರಾತ್‌ನಲ್ಲಿರುವ ಅಮುಲ್ ಹಾಲು, ಅದರ ಚೀಸ್ ಮತ್ತು ಚಾಕೊಲೇಟ್‌ಗಳನ್ನು ಒಳಗೊಂಡಿರುವ ಪ್ಲಾಸ್ಟಿಕ್ ಪೌಚ್‌ಗಳಿಗೆ ಜನಪ್ರಿಯವಾಗಿದೆ. ಪೆಪ್ಸಿಯ ಟ್ರೋಪಿಕಾನಾ ಜ್ಯೂಸ್, ಕೋಕಾ-ಕೋಲಾದ ಮಾಜಾ ಮತ್ತು ಪಾರ್ಲೆ ಆಗ್ರೋದ ಫ್ರೂಟಿ ಮಾವಿನ ಪಾನೀಯಗಳು ಸಹ ಹೆಚ್ಚು ಮಾರಾಟವಾಗುವ ಪಾನೀಯಗಳಲ್ಲಿ ಸೇರಿವೆ. ಉದ್ಯಮದ ಅಂದಾಜಿನ ಪ್ರಕಾರ ಭಾರತದಲ್ಲಿ ಪ್ರತಿ ವರ್ಷ 6 ಬಿಲಿಯನ್ ಪ್ಯಾಕ್‌ಗಳು ಮಾರಾಟವಾಗುತ್ತವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
Nithya Bhavishya: ನವರಾತ್ರಿಯ ಐದನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಐದನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ನವರಾತ್ರಿ ಐದನೇ ದಿನ ಸ್ಕಂದ ಮಾತೆಯ ಆರಾಧನೆ ಮಹತ್ವ ತಿಳಿಯಿರಿ
ನವರಾತ್ರಿ ಐದನೇ ದಿನ ಸ್ಕಂದ ಮಾತೆಯ ಆರಾಧನೆ ಮಹತ್ವ ತಿಳಿಯಿರಿ
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?