AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amul: ಪ್ಲಾಸ್ಟಿಕ್ ಸ್ಟ್ರಾ ಬ್ಯಾನ್ ಮಾಡದಂತೆ ಪ್ರಧಾನಿ ಮೋದಿಗೆ ಅಮುಲ್ ಮನವಿ; ಕಾರಣವೇನು?

Plastic Ban: ಜುಲೈ 1ರಂದು ಸಣ್ಣ ಪ್ಯಾಕ್ ಜ್ಯೂಸ್ ಮತ್ತು ಡೈರಿ ಉತ್ಪನ್ನಗಳೊಂದಿಗೆ ಪ್ಯಾಕ್ ಮಾಡಲಾದ ಸ್ಟ್ರಾಗಳನ್ನು ನಿಷೇಧಿಸಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು.

Amul: ಪ್ಲಾಸ್ಟಿಕ್ ಸ್ಟ್ರಾ ಬ್ಯಾನ್ ಮಾಡದಂತೆ ಪ್ರಧಾನಿ ಮೋದಿಗೆ ಅಮುಲ್ ಮನವಿ; ಕಾರಣವೇನು?
ಅಮುಲ್Image Credit source: NDTV
TV9 Web
| Edited By: |

Updated on: Jun 09, 2022 | 3:43 PM

Share

ನವದೆಹಲಿ: ಭಾರತದ ಅತಿದೊಡ್ಡ ಡೈರಿ ಸಮೂಹ ಸಂಸ್ಥೆಯಾದ ಅಮುಲ್ (Amul) ಪ್ಲಾಸ್ಟಿಕ್ ಸ್ಟ್ರಾಗಳನ್ನು ಬ್ಯಾನ್ ಮಾಡಲು ನಿರ್ಧರಿಸಿರುವ ಕೇಂದ್ರ ಸರ್ಕಾರದ ಯೋಜನೆಯನ್ನು ಮುಂದೂಡುವಂತೆ ಒತ್ತಾಯಿಸಿ ಸರ್ಕಾರಕ್ಕೆ ಪತ್ರ ಬರೆದಿದೆ. ಈ ಕ್ರಮವು ರೈತರು ಮತ್ತು ವಿಶ್ವದ ಅತಿದೊಡ್ಡ ಉತ್ಪನ್ನದ ಉತ್ಪಾದಕರ ಹಾಲಿನ ಬಳಕೆಯ ಮೇಲೆ ನೆಗೆಟಿವ್ ಪರಿಣಾಮ ಬೀರುತ್ತದೆ ಎಂದು ಪತ್ರದಲ್ಲಿ ಹೇಳಿದೆ. ಮೇ 28ರಂದು ಬರೆಯಲಾದ ಪತ್ರದಲ್ಲಿ ಅಮುಲ್ ತನ್ನ ಮನವಿಯನ್ನು ಮಾಡಿದೆ.

ಜುಲೈ 1ರಂದು ಸಣ್ಣ ಪ್ಯಾಕ್ ಜ್ಯೂಸ್ ಮತ್ತು ಡೈರಿ ಉತ್ಪನ್ನಗಳೊಂದಿಗೆ ಪ್ಯಾಕ್ ಮಾಡಲಾದ ಸ್ಟ್ರಾಗಳನ್ನು ನಿಷೇಧಿಸಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು. ಅದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿಗೆ ಅಮುಲ್ ಈ ಪತ್ರವನ್ನು ಕಳುಹಿಸಿದೆ. ಅಮುಲ್ ಪ್ರತಿ ವರ್ಷ ಪ್ಲಾಸ್ಟಿಕ್ ಸ್ಟ್ರಾಗಳನ್ನು ಜೋಡಿಸಿ ಶತಕೋಟಿ ಸಣ್ಣ ಡೈರಿ ಪೆಟ್ಟಿಗೆಗಳನ್ನು ಮಾರಾಟ ಮಾಡುತ್ತದೆ.

ಆದರೆ, ಸರ್ಕಾರದ ಈ ನಿರ್ಧಾರದಿಂದ ಅಮುಲ್ ಮತ್ತು ಪೆಪ್ಸಿಕೋ ಇಂಕ್ ಮತ್ತು ಕೋಕಾ-ಕೋಲಾ ಸೇರಿದಂತೆ ಜಾಗತಿಕ ಪಾನೀಯಗಳ ಕಂಪನಿಗಳು ಬೆಚ್ಚಿಬಿದ್ದಿದೆ. ಹೀಗಾಗಿ, ಸರ್ಕಾರವು ತನ್ನ ನಿಲುವನ್ನು ಬದಲಾಯಿಸಲು ನಿರಾಕರಿಸಿದ್ದು, ಪ್ಲಾಸ್ಟಿಕ್​ಗೆ ಪರ್ಯಾಯವಾದ ಸ್ಟ್ರಾಗಳನ್ನು ಬಳಸುವಂತೆ ಕಂಪನಿಗಳಿಗೆ ಸೂಚಿಸಿದೆ ಎಂದು ರಾಯಿಟರ್ಸ್ ಈ ಹಿಂದೆ ವರದಿ ಮಾಡಿತ್ತು. ಆದರೆ, ಜುಲೈ 1ರಿಂದ ಸರ್ಕಾರ ಪ್ಲಾಸ್ಟಿಕ್ ಸ್ಟ್ರಾ ನಿಷೇಧ ಮಾಡಿದ ನಂತರ ಅಮುಲ್ ಸ್ಟ್ರಾಗಳಿಲ್ಲದೆ ಪ್ಯಾಕ್‌ಗಳನ್ನು ಮಾರಾಟ ಮಾಡಬೇಕಾಗಬಹುದು ಎನ್ನಲಾಗಿದೆ.

ಇದನ್ನೂ ಓದಿ: Viral News: ಬಕೆಟ್​ಗೂ ಒಂದು ಕಾಲ; ಅಮೆಜಾನ್​ನಲ್ಲಿ ಸೇಲ್​ಗಿದೆ 25,999 ರೂ. ಬೆಲೆಯ ಪ್ಲಾಸ್ಟಿಕ್ ಬಕೆಟ್!

ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯವಾದ ಗುಜರಾತ್‌ನಲ್ಲಿರುವ ಅಮುಲ್ ಹಾಲು, ಅದರ ಚೀಸ್ ಮತ್ತು ಚಾಕೊಲೇಟ್‌ಗಳನ್ನು ಒಳಗೊಂಡಿರುವ ಪ್ಲಾಸ್ಟಿಕ್ ಪೌಚ್‌ಗಳಿಗೆ ಜನಪ್ರಿಯವಾಗಿದೆ. ಪೆಪ್ಸಿಯ ಟ್ರೋಪಿಕಾನಾ ಜ್ಯೂಸ್, ಕೋಕಾ-ಕೋಲಾದ ಮಾಜಾ ಮತ್ತು ಪಾರ್ಲೆ ಆಗ್ರೋದ ಫ್ರೂಟಿ ಮಾವಿನ ಪಾನೀಯಗಳು ಸಹ ಹೆಚ್ಚು ಮಾರಾಟವಾಗುವ ಪಾನೀಯಗಳಲ್ಲಿ ಸೇರಿವೆ. ಉದ್ಯಮದ ಅಂದಾಜಿನ ಪ್ರಕಾರ ಭಾರತದಲ್ಲಿ ಪ್ರತಿ ವರ್ಷ 6 ಬಿಲಿಯನ್ ಪ್ಯಾಕ್‌ಗಳು ಮಾರಾಟವಾಗುತ್ತವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್