AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರದಲ್ಲಿ ಇಂದು ಮುಂಜಾನೆ ಭೂಕಂಪ; ರಿಕ್ಟರ್ ಮಾಪಕದಲ್ಲಿ 3.2ರಷ್ಟು ತೀವ್ರತೆ ದಾಖಲು

ಫೆ.5ರಂದು ಜಮ್ಮು-ಕಾಶ್ಮೀರದಲ್ಲಿ 5.7ರಷ್ಟು ತೀವ್ರತೆಯಲ್ಲಿ ಭೂಕಂಪನ ಉಂಟಾಗಿತ್ತು. ಅಂದು ಅಫ್ಘಾನಿಸ್ತಾನ-ತಜಿಕಿಸ್ತಾನ ಗಡಿಯಲ್ಲಿ ಉಂಟಾಗಿದ್ದ ಭೂಕಂಪದ ಪರಿಣಾಮ ಜಮ್ಮು-ಕಾಶ್ಮೀರ, ದೆಹಲಿ, ನೊಯ್ಡಾಗಳಲ್ಲೂ ಭೂಮಿ ನಡುಗಿತ್ತು.

ಜಮ್ಮು-ಕಾಶ್ಮೀರದಲ್ಲಿ ಇಂದು ಮುಂಜಾನೆ ಭೂಕಂಪ; ರಿಕ್ಟರ್ ಮಾಪಕದಲ್ಲಿ 3.2ರಷ್ಟು ತೀವ್ರತೆ ದಾಖಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Feb 16, 2022 | 10:06 AM

Share

ಜಮ್ಮು ಕಾಶ್ಮೀರದ ಪಹಲ್​ಗಾಮ್​​ನಲ್ಲಿ ಇಂದು ಮುಂಜಾನೆ 5.43ರ ಹೊತ್ತಿಗೆ ಭೂಕಂಪ ಉಂಟಾಗಿದೆ (Earthquake In Jammu Kashmir) ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ. ರಿಕ್ಟರ್​ ಮಾಪಕದಲ್ಲಿ ಭೂಕಂಪ ತೀವ್ರತೆ 3.2ರಷ್ಟು ದಾಖಲಾಗಿದೆ. ಪಹಲ್​​ಗಾಮ್​​ನ ದಕ್ಷಿಣ-ನೈಋತ್ಯಕ್ಕೆ 15 ಕಿಮೀ ದೂರದಲ್ಲಿ ಭೂಮಿ ಕಂಪಿಸಿದ್ದಾಗಿ ವರದಿಯಾಗಿದೆ.  ಯಾವುದೇ ಆಸ್ತಿಪಾಸ್ತಿ ಹಾನಿಯಾಗಿಲ್ಲ. ಸ್ಥಳೀಯರಿಗೂ ಏನೂ ಅಪಾಯ ಆಗಲಿಲ್ಲ.

ಫೆ.5ರಂದು ಜಮ್ಮು-ಕಾಶ್ಮೀರದಲ್ಲಿ 5.7ರಷ್ಟು ತೀವ್ರತೆಯಲ್ಲಿ ಭೂಕಂಪನ ಉಂಟಾಗಿತ್ತು. ಅಂದು ಅಫ್ಘಾನಿಸ್ತಾನ-ತಜಿಕಿಸ್ತಾನ ಗಡಿಯಲ್ಲಿ ಉಂಟಾಗಿದ್ದ ಭೂಕಂಪದ ಪರಿಣಾಮ ಜಮ್ಮು-ಕಾಶ್ಮೀರ, ದೆಹಲಿ, ನೊಯ್ಡಾಗಳಲ್ಲೂ ಭೂಮಿ ನಡುಗಿತ್ತು. ಫೆ.5ರಂದು ಜಮ್ಮು-ಕಾಶ್ಮೀರದಲ್ಲಿ ಜಾಸ್ತಿ ಎನ್ನಿಸುವಷ್ಟು ಭೂಕಂಪದ ಅನುಭವ ಆಗಿದ್ದು, ಸ್ಥಳೀಯರೊಬ್ಬರು ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದರು. ಭೂಮಿ  ಕಂಪನವಾಗುತ್ತಿದ್ದಂತೆ ರಸ್ತೆಯ ಮೇಲೆ ಹೋಗುತ್ತಿದ್ದ ಬೈಕ್​ ಸವಾರರೆಲ್ಲ ಬಿದ್ದಿರುವುದು, ಒಬ್ಬರನ್ನೊಬ್ಬರು ಗಟ್ಟಿಯಾಗಿ ಹಿಡಿದು ನಿಂತಿರುವ ದೃಶ್ಯ ವೈರಲ್​ ಆಗಿತ್ತು.  ಇನ್ನೊಬ್ಬರು ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಮನೆಯೊಂದರ ಮೇಲ್ಛಾವಣಿಗೆ ಹಾಕಿದ್ದ ಸೀಲಿಂಗ್​ ಫ್ಯಾನ್​ ನಡುಗುವುದನ್ನು ನೋಡಬಹುದು. ಜಮ್ಮು-ಕಾಶ್ಮೀರದಲ್ಲಿ ಭೂಕಂಪನವಾದ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿಯವರು ಅಲ್ಲಿನ ಲೆಫ್ಟಿನೆಂಟ್​ ಗವರ್ನರ್​ ಮನೋಜ್ ಸಿನ್ಹಾರಿಗೆ ಕರೆ ಮಾಡಿ, ಪರಿಸ್ಥಿತಿ ಬಗ್ಗೆ ವಿಚಾರಿಸಿದ್ದರು.

ಇದನ್ನೂ ಓದಿ: ಪಾಳುಬಿದ್ದ ಜಮೀನನ್ನೇ ಸುಂದರ ಉದ್ಯಾನವನ ಮಾಡಿದ ಸಿಇಒ; ಮಂಡ್ರೇಗಾ ಯೋಜನೆಯಡಿ ವಸತಿಗೃಹದ ಮುಂದೆಯೇ ಪಾರ್ಕ್​

Published On - 9:50 am, Wed, 16 February 22

Follow Us
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ