ಜಮ್ಮು-ಕಾಶ್ಮೀರದಲ್ಲಿ ಇಂದು ಮುಂಜಾನೆ ಭೂಕಂಪ; ರಿಕ್ಟರ್ ಮಾಪಕದಲ್ಲಿ 3.2ರಷ್ಟು ತೀವ್ರತೆ ದಾಖಲು

ಫೆ.5ರಂದು ಜಮ್ಮು-ಕಾಶ್ಮೀರದಲ್ಲಿ 5.7ರಷ್ಟು ತೀವ್ರತೆಯಲ್ಲಿ ಭೂಕಂಪನ ಉಂಟಾಗಿತ್ತು. ಅಂದು ಅಫ್ಘಾನಿಸ್ತಾನ-ತಜಿಕಿಸ್ತಾನ ಗಡಿಯಲ್ಲಿ ಉಂಟಾಗಿದ್ದ ಭೂಕಂಪದ ಪರಿಣಾಮ ಜಮ್ಮು-ಕಾಶ್ಮೀರ, ದೆಹಲಿ, ನೊಯ್ಡಾಗಳಲ್ಲೂ ಭೂಮಿ ನಡುಗಿತ್ತು.

ಜಮ್ಮು-ಕಾಶ್ಮೀರದಲ್ಲಿ ಇಂದು ಮುಂಜಾನೆ ಭೂಕಂಪ; ರಿಕ್ಟರ್ ಮಾಪಕದಲ್ಲಿ 3.2ರಷ್ಟು ತೀವ್ರತೆ ದಾಖಲು
ಸಾಂಕೇತಿಕ ಚಿತ್ರ
Follow us
| Updated By: Lakshmi Hegde

Updated on:Feb 16, 2022 | 10:06 AM

ಜಮ್ಮು ಕಾಶ್ಮೀರದ ಪಹಲ್​ಗಾಮ್​​ನಲ್ಲಿ ಇಂದು ಮುಂಜಾನೆ 5.43ರ ಹೊತ್ತಿಗೆ ಭೂಕಂಪ ಉಂಟಾಗಿದೆ (Earthquake In Jammu Kashmir) ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ. ರಿಕ್ಟರ್​ ಮಾಪಕದಲ್ಲಿ ಭೂಕಂಪ ತೀವ್ರತೆ 3.2ರಷ್ಟು ದಾಖಲಾಗಿದೆ. ಪಹಲ್​​ಗಾಮ್​​ನ ದಕ್ಷಿಣ-ನೈಋತ್ಯಕ್ಕೆ 15 ಕಿಮೀ ದೂರದಲ್ಲಿ ಭೂಮಿ ಕಂಪಿಸಿದ್ದಾಗಿ ವರದಿಯಾಗಿದೆ.  ಯಾವುದೇ ಆಸ್ತಿಪಾಸ್ತಿ ಹಾನಿಯಾಗಿಲ್ಲ. ಸ್ಥಳೀಯರಿಗೂ ಏನೂ ಅಪಾಯ ಆಗಲಿಲ್ಲ.

ಫೆ.5ರಂದು ಜಮ್ಮು-ಕಾಶ್ಮೀರದಲ್ಲಿ 5.7ರಷ್ಟು ತೀವ್ರತೆಯಲ್ಲಿ ಭೂಕಂಪನ ಉಂಟಾಗಿತ್ತು. ಅಂದು ಅಫ್ಘಾನಿಸ್ತಾನ-ತಜಿಕಿಸ್ತಾನ ಗಡಿಯಲ್ಲಿ ಉಂಟಾಗಿದ್ದ ಭೂಕಂಪದ ಪರಿಣಾಮ ಜಮ್ಮು-ಕಾಶ್ಮೀರ, ದೆಹಲಿ, ನೊಯ್ಡಾಗಳಲ್ಲೂ ಭೂಮಿ ನಡುಗಿತ್ತು. ಫೆ.5ರಂದು ಜಮ್ಮು-ಕಾಶ್ಮೀರದಲ್ಲಿ ಜಾಸ್ತಿ ಎನ್ನಿಸುವಷ್ಟು ಭೂಕಂಪದ ಅನುಭವ ಆಗಿದ್ದು, ಸ್ಥಳೀಯರೊಬ್ಬರು ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದರು. ಭೂಮಿ  ಕಂಪನವಾಗುತ್ತಿದ್ದಂತೆ ರಸ್ತೆಯ ಮೇಲೆ ಹೋಗುತ್ತಿದ್ದ ಬೈಕ್​ ಸವಾರರೆಲ್ಲ ಬಿದ್ದಿರುವುದು, ಒಬ್ಬರನ್ನೊಬ್ಬರು ಗಟ್ಟಿಯಾಗಿ ಹಿಡಿದು ನಿಂತಿರುವ ದೃಶ್ಯ ವೈರಲ್​ ಆಗಿತ್ತು.  ಇನ್ನೊಬ್ಬರು ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಮನೆಯೊಂದರ ಮೇಲ್ಛಾವಣಿಗೆ ಹಾಕಿದ್ದ ಸೀಲಿಂಗ್​ ಫ್ಯಾನ್​ ನಡುಗುವುದನ್ನು ನೋಡಬಹುದು. ಜಮ್ಮು-ಕಾಶ್ಮೀರದಲ್ಲಿ ಭೂಕಂಪನವಾದ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿಯವರು ಅಲ್ಲಿನ ಲೆಫ್ಟಿನೆಂಟ್​ ಗವರ್ನರ್​ ಮನೋಜ್ ಸಿನ್ಹಾರಿಗೆ ಕರೆ ಮಾಡಿ, ಪರಿಸ್ಥಿತಿ ಬಗ್ಗೆ ವಿಚಾರಿಸಿದ್ದರು.

ಇದನ್ನೂ ಓದಿ: ಪಾಳುಬಿದ್ದ ಜಮೀನನ್ನೇ ಸುಂದರ ಉದ್ಯಾನವನ ಮಾಡಿದ ಸಿಇಒ; ಮಂಡ್ರೇಗಾ ಯೋಜನೆಯಡಿ ವಸತಿಗೃಹದ ಮುಂದೆಯೇ ಪಾರ್ಕ್​

Published On - 9:50 am, Wed, 16 February 22

ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ