AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರದಲ್ಲಿ ಇಂದು ಮುಂಜಾನೆ ಭೂಕಂಪ; ರಿಕ್ಟರ್ ಮಾಪಕದಲ್ಲಿ 3.2ರಷ್ಟು ತೀವ್ರತೆ ದಾಖಲು

ಫೆ.5ರಂದು ಜಮ್ಮು-ಕಾಶ್ಮೀರದಲ್ಲಿ 5.7ರಷ್ಟು ತೀವ್ರತೆಯಲ್ಲಿ ಭೂಕಂಪನ ಉಂಟಾಗಿತ್ತು. ಅಂದು ಅಫ್ಘಾನಿಸ್ತಾನ-ತಜಿಕಿಸ್ತಾನ ಗಡಿಯಲ್ಲಿ ಉಂಟಾಗಿದ್ದ ಭೂಕಂಪದ ಪರಿಣಾಮ ಜಮ್ಮು-ಕಾಶ್ಮೀರ, ದೆಹಲಿ, ನೊಯ್ಡಾಗಳಲ್ಲೂ ಭೂಮಿ ನಡುಗಿತ್ತು.

ಜಮ್ಮು-ಕಾಶ್ಮೀರದಲ್ಲಿ ಇಂದು ಮುಂಜಾನೆ ಭೂಕಂಪ; ರಿಕ್ಟರ್ ಮಾಪಕದಲ್ಲಿ 3.2ರಷ್ಟು ತೀವ್ರತೆ ದಾಖಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Feb 16, 2022 | 10:06 AM

Share

ಜಮ್ಮು ಕಾಶ್ಮೀರದ ಪಹಲ್​ಗಾಮ್​​ನಲ್ಲಿ ಇಂದು ಮುಂಜಾನೆ 5.43ರ ಹೊತ್ತಿಗೆ ಭೂಕಂಪ ಉಂಟಾಗಿದೆ (Earthquake In Jammu Kashmir) ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ. ರಿಕ್ಟರ್​ ಮಾಪಕದಲ್ಲಿ ಭೂಕಂಪ ತೀವ್ರತೆ 3.2ರಷ್ಟು ದಾಖಲಾಗಿದೆ. ಪಹಲ್​​ಗಾಮ್​​ನ ದಕ್ಷಿಣ-ನೈಋತ್ಯಕ್ಕೆ 15 ಕಿಮೀ ದೂರದಲ್ಲಿ ಭೂಮಿ ಕಂಪಿಸಿದ್ದಾಗಿ ವರದಿಯಾಗಿದೆ.  ಯಾವುದೇ ಆಸ್ತಿಪಾಸ್ತಿ ಹಾನಿಯಾಗಿಲ್ಲ. ಸ್ಥಳೀಯರಿಗೂ ಏನೂ ಅಪಾಯ ಆಗಲಿಲ್ಲ.

ಫೆ.5ರಂದು ಜಮ್ಮು-ಕಾಶ್ಮೀರದಲ್ಲಿ 5.7ರಷ್ಟು ತೀವ್ರತೆಯಲ್ಲಿ ಭೂಕಂಪನ ಉಂಟಾಗಿತ್ತು. ಅಂದು ಅಫ್ಘಾನಿಸ್ತಾನ-ತಜಿಕಿಸ್ತಾನ ಗಡಿಯಲ್ಲಿ ಉಂಟಾಗಿದ್ದ ಭೂಕಂಪದ ಪರಿಣಾಮ ಜಮ್ಮು-ಕಾಶ್ಮೀರ, ದೆಹಲಿ, ನೊಯ್ಡಾಗಳಲ್ಲೂ ಭೂಮಿ ನಡುಗಿತ್ತು. ಫೆ.5ರಂದು ಜಮ್ಮು-ಕಾಶ್ಮೀರದಲ್ಲಿ ಜಾಸ್ತಿ ಎನ್ನಿಸುವಷ್ಟು ಭೂಕಂಪದ ಅನುಭವ ಆಗಿದ್ದು, ಸ್ಥಳೀಯರೊಬ್ಬರು ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದರು. ಭೂಮಿ  ಕಂಪನವಾಗುತ್ತಿದ್ದಂತೆ ರಸ್ತೆಯ ಮೇಲೆ ಹೋಗುತ್ತಿದ್ದ ಬೈಕ್​ ಸವಾರರೆಲ್ಲ ಬಿದ್ದಿರುವುದು, ಒಬ್ಬರನ್ನೊಬ್ಬರು ಗಟ್ಟಿಯಾಗಿ ಹಿಡಿದು ನಿಂತಿರುವ ದೃಶ್ಯ ವೈರಲ್​ ಆಗಿತ್ತು.  ಇನ್ನೊಬ್ಬರು ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಮನೆಯೊಂದರ ಮೇಲ್ಛಾವಣಿಗೆ ಹಾಕಿದ್ದ ಸೀಲಿಂಗ್​ ಫ್ಯಾನ್​ ನಡುಗುವುದನ್ನು ನೋಡಬಹುದು. ಜಮ್ಮು-ಕಾಶ್ಮೀರದಲ್ಲಿ ಭೂಕಂಪನವಾದ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿಯವರು ಅಲ್ಲಿನ ಲೆಫ್ಟಿನೆಂಟ್​ ಗವರ್ನರ್​ ಮನೋಜ್ ಸಿನ್ಹಾರಿಗೆ ಕರೆ ಮಾಡಿ, ಪರಿಸ್ಥಿತಿ ಬಗ್ಗೆ ವಿಚಾರಿಸಿದ್ದರು.

ಇದನ್ನೂ ಓದಿ: ಪಾಳುಬಿದ್ದ ಜಮೀನನ್ನೇ ಸುಂದರ ಉದ್ಯಾನವನ ಮಾಡಿದ ಸಿಇಒ; ಮಂಡ್ರೇಗಾ ಯೋಜನೆಯಡಿ ವಸತಿಗೃಹದ ಮುಂದೆಯೇ ಪಾರ್ಕ್​

Published On - 9:50 am, Wed, 16 February 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?