AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಹೊಸ ವರ್ಷದ ಮೊದಲ ದಿನವೇ ರಾಷ್ಟ್ರ ರಾಜಧಾನಿ ದೆಹಲಿ, ಹರಿಯಾಣ ಸುತ್ತಮುತ್ತ ಭೂಕಂಪ

ರಿಕ್ಟರ್ ಮಾಪಕದಲ್ಲಿ 3.8ರಷ್ಟು ಕಂಪನದ ತೀವ್ರತೆ ದಾಖಲಾಗಿದೆ. ಹರಿಯಾಣದ ಝಜ್ಜರ್​ನಲ್ಲಿ ಭೂಪಂಕದ ಕೇಂದ್ರ ಬಿಂದು, ಭೂಮಿಯಿಂದ 5 ಕಿಲೋ ಮೀಟರ್​ ಆಳದಲ್ಲಿ ಭೂಕಂಪದ ಅನುಭವ ಆಗಿದೆ.

Earthquake: ಹೊಸ ವರ್ಷದ ಮೊದಲ ದಿನವೇ ರಾಷ್ಟ್ರ ರಾಜಧಾನಿ ದೆಹಲಿ, ಹರಿಯಾಣ ಸುತ್ತಮುತ್ತ ಭೂಕಂಪ
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on:Jan 01, 2023 | 8:31 AM

Share

ದೆಹಲಿ: ಹೊಸ ವರ್ಷಾಚರಣೆ ಸಂಭ್ರಮದಲ್ಲಿದ್ದ(New Year Celebration) ರಾಷ್ಟ್ರ ರಾಜಧಾನಿ ದೆಹಲಿ(Delhi) ಹಾಗೂ ಹರಿಯಾಣ(Haryana) ಸುತ್ತಮುತ್ತ ರಾತ್ರಿ 1.19ರ ಸುಮಾರಿಗೆ ಭೂಕಂಪ(Earthquake) ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 3.8ರಷ್ಟು ಕಂಪನದ ತೀವ್ರತೆ ದಾಖಲಾಗಿದೆ. ಹರಿಯಾಣದ ಝಜ್ಜರ್​ನಲ್ಲಿ ಭೂಪಂಕದ ಕೇಂದ್ರ ಬಿಂದು, ಭೂಮಿಯಿಂದ 5 ಕಿಲೋ ಮೀಟರ್​ ಆಳದಲ್ಲಿ ಭೂಕಂಪದ ಅನುಭವ ಆಗಿದೆ.

ಭೂಕಂಪನದ ತೀವ್ರತೆಯಿಂದ ಯಾವುದೇ ಪ್ರಾಣಾಪಾಯ ಅಥವಾ ಗಾಯಗೊಂಡ ಪ್ರಕರಣಗಳು ವರದಿಯಾಗಿಲ್ಲ ಎಂದು ತಿಳಿದು ಬಂದಿದೆ. ಕಳೆದ ಒಂದು ತಿಂಗಳಲ್ಲಿ ಇದು ಮೂರನೇ ಬಾರಿ ಭೂಕಂಪನದ ಅನುಭವವಾಗಿದೆ.

ನವೆಂಬರ್‌ನಲ್ಲಿ, ನೇಪಾಳ ಗಡಿಯ ಉತ್ತರಾಖಂಡದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಲವಾದ ಭೂ ಕಂಪನಗಳು ಸಂಭವಿಸಿದ್ದವು.

ಇನ್ನು ಹೊಸ ವರ್ಷವನ್ನು ಬರ ಮಾಡಿಕೊಳ್ಳುತ್ತಿದ್ದಂತೆಯೇ ವರ್ಷದ ಮೊದಲ ದಿನವೇ ಜನರಿಗೆ ಭೂ ಕಂಪನದ ಅನುಭವವಾಗಿದ್ದು ಜನರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.

ಭೂ ಕಂಪದ ಅನುಭವದ ಬಗ್ಗೆ ಟ್ವಿಟರ್​ನಲ್ಲಿ ಭಾರೀ ಚರ್ಚೆಗಳು, ಟ್ವೀಟ್​ಗಳು ಓಡಾಡುತ್ತಿದ್ದು ಇದರ ಜೊತೆಗೆ ಭೂಕಂಪನಕ್ಕೆ ಸಂಬಂಧಿಸಿದ ಮೀಮ್ಸ್​ಗಳು ಕೂಡ ವೈರಲ್ ಆಗಿವೆ.

Published On - 8:25 am, Sun, 1 January 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ