AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajeev Rai: ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಆಪ್ತರ ನಿವಾಸದ ಮೇಲೆ ಐಟಿ ದಾಳಿ

IT Raid on Rajeev Rai house:ಸಮಾಜವಾದಿ ಪಕ್ಷದ ಮುಖಂಡ, ಅಖಿಲೇಶ್ ಯಾದವ್ ಆಪ್ತ ರಾಜೀವ್ ರೈ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆಯಲ್ಲಿ ತೊಡಗಿದ್ದಾರೆ.

Rajeev Rai: ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಆಪ್ತರ ನಿವಾಸದ ಮೇಲೆ ಐಟಿ ದಾಳಿ
ರಾಜೀವ್ ರೈ ಮತ್ತು ಅಖಿಲೇಶ್ ಯಾದವ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Dec 18, 2021 | 12:08 PM

Share

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ (Akhilesh Yadav) ಅವರ ಆಪ್ತರಾಗಿರುವ ಸಮಾಜವಾದಿ ಪಕ್ಷದ ನಾಯಕ ರಾಜೀವ್ ರೈ (Rajeev Rai) ಅವರ ಮನೆಯ ಮೇಲೆ ಇಂದು ಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ, ಶೋಧ ನಡೆಸಿದ್ದಾರೆ. ವಾರಣಾಸಿಯಿಂದ ಆಗಮಿಸಿದ ಆದಾಯ ತೆರಿಗೆ ಇಲಾಖೆಯ ತಂಡವೊಂದು ಇಂದು ಬೆಳಗ್ಗೆ ಪೂರ್ವ ಉತ್ತರ ಪ್ರದೇಶದ ಮೌ ಜಿಲ್ಲೆಯ ರಾಜೀವ್ ರೈ ಅವರ ಮನೆಯಲ್ಲಿ ಶೋಧ ಕೈಗೊಂಡಿದೆ. ಉತ್ತರ ಪ್ರದೇಶ ಚುನಾವಣೆಯ ಹಿನ್ನೆಲೆಯಲ್ಲಿ ಈ ದಾಳಿ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ರಾಜೀವ್ ರೈ ಸಮಾಜವಾದಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದಾರೆ. 2012ರ ಚುನಾವಣೆಯಲ್ಲಿನ ಯಶಸ್ಸಿಗೆ ಅವರು ಪ್ರಮುಖ ಕಾರಣ ಎಂದು ವ್ಯಾಖ್ಯಾನಿಸಲಾಗಿದ್ದು, 2014ರಲ್ಲಿ ಘೋಸಿ ಕ್ಷೇತ್ರದಿಂದ ಲೋಕಸಭೆಗೆ ಅಭ್ಯರ್ಥಿಯಾಗಿದ್ದರು.

ದಾಳಿಯ ಕುರಿತು ಎಎನ್​ಐ ಹಂಚಿಕೊಂಡಿರುವ ಮಾಹಿತಿ:

ಯಾದವ್ ಕುಟುಂಬದ ಭದ್ರಕೋಟೆಯಾದ ಮೈನ್‌ಪುರಿಯಲ್ಲಿ ಅಖಿಲೇಶ್ ಯಾದವ್ ಅವರ ಮತ್ತೊಬ್ಬ ಸಹಾಯಕನ ಮೇಲೆ ದಾಳಿ ಮಾಡಲಾಗಿದೆ. ಅಲ್ಲಿ ದಾಳಿಗೆ ಒಳಗಾದ ಮನೋಜ್ ಯಾದವ್ ಆರ್ ಸಿಎಲ್ ಗ್ರೂಪ್ ಎಂಬ ಕಂಪನಿಗಳ ಸಮೂಹದ ಪ್ರವರ್ತಕರಾಗಿದ್ದಾರೆ.

ದಾಳಿಯ ಕುರಿತು ಪ್ರತಿಕ್ರಿಯಿಸಿದ ರಾಜೀವ್ ರೈ: ದಾಳಿಯ ಕುರಿತು ಪ್ರತಿಕ್ರಿಯಿಸಿರುವ ರಾಜೀವ್ ರೈ, ‘‘ಇದು ಐಟಿ ಇಲಾಖೆ! ನನಗೆ ಯಾವ ಕ್ರಿಮಿನಲ್ ಹಿನ್ನೆಲೆಯೂ ಇಲ್ಲ. ಜನರಿಗೆ ಸಹಾಯ ಮಾಡುತ್ತಿದ್ದೆ, ಅದು ಸರ್ಕರಕ್ಕೆ ಇಷ್ಟವಾಗಲಿಲ್ಲ. ಅದಕ್ಕೆ ದಾಳಿ ನಡೆಸಲಾಗಿದೆ. ಅವರು ವಿಡಿಯೋ ಮಾಡಿ, ಕೇಸು ದಾಖಲಿಸುತ್ತಾರೆ. ಸುಮ್ಮನೆ ಇದರ ವಿರುದ್ಧ ಗುದ್ದಾಡಬೇಕು’’ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಅಖಿಲೇಶ್ ಯಾದವ್ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ಕಾರ್ಯಯೋಜನೆಗಳೂ ಸೇರಿದಂತೆ ಸರ್ಕಾರದ ನಡೆಯನ್ನು ಟೀಕಿಸಿದ್ದರು. ಜತೆಗೆ, ಆ ಎಲ್ಲಾ ಅಭಿವೃದ್ಧಿ ಯೋಜನೆಗಳು ತಮ್ಮ ಅಧಿಕಾರಾವಧಿಯಲ್ಲಿ ಆರಂಭವಾಗಿದ್ದವು ಎಂದು ಅವರು ಹೇಳಿಕೊಂಡಿದ್ದರು. ಇದು ಚುನಾವಣಾ ಹೇಳಿಕೆ ಎಂದು ಬಿಜೆಪಿ ಟೀಕಿಸಿತ್ತು. ಉತ್ತರ ಪ್ರದೇಶ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಇದೀಗ ಅಖಿಲೇಶ್ ಆಪ್ತರ ಮೇಲೆ ನಡೆದಿರುವ ಐಟಿ ದಾಳಿ ರಾಜಕೀಯ ತಿರುವು ಪಡೆಯುವ ಲಕ್ಷಣ ಗೋಚರಿಸಿದೆ.

ಇದನ್ನೂ ಓದಿ:

12 ವರ್ಷಗಳ ಹಿಂದೆ ನಾಪತ್ತೆಯಾಗಿದ್ದವ ಸತ್ತೇ ಹೋಗಿದ್ದಾನೆಂದು ನಂಬಿದ್ದ ಕುಟುಂಬ; ಪಾಕಿಸ್ತಾನದ ಜೈಲಿನಿಂದ ಬಂದ ಪತ್ರದಲ್ಲಿತ್ತು ಶಾಕಿಂಗ್​ ಸತ್ಯ

ಐಎಎಸ್ ಅಧಿಕಾರಿಗಳನ್ನು ಹುಟ್ಟುಹಾಕುವಲ್ಲಿ ಯಾವ ರಾಜ್ಯಗಳಿಗೆ ಎಷ್ಟನೇ ಸ್ಥಾನ? ಕುತೂಹಲಕಾರಿ ಅಂಕಿಅಂಶ ಇಲ್ಲಿದೆ

Published On - 10:58 am, Sat, 18 December 21

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ