AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

30 ವರ್ಷದಲ್ಲಿ 3 ಕಿ.ಮಿ ಉದ್ದದ ಕಾಲುವೆ ತೋಡಿದ ರೈತನ ಸ್ವಪ್ರಯತ್ನಕ್ಕೆ ಸಿಕ್ತು ಭರ್ಜರಿ ಗಿಫ್ಟ್​!

ಪಾಟ್ನಾ: ದೇಶದ ಪ್ರತಿಷ್ಠಿತ ಮಹೀಂದ್ರಾ ಸಂಸ್ಥೆಯ ಅಧ್ಯಕ್ಷರಾದ ಆನಂದ್ ಮಹೀಂದ್ರಾ ಅರ್ಹರನ್ನು ಗುರುತಿಸಿ ಅವರನ್ನು ಗೌರವಿಸುವ ತಮ್ಮ ನಿಸ್ವಾರ್ಥ ಕಾರ್ಯವನ್ನು ಮುಂದುವರೆಸಿದ್ದಾರೆ. ಈ ಬಾರಿ, ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ತನ್ನ ಕೃಷಿಭೂಮಿಗೆ ನೀರಾವರಿ ವ್ಯವಸ್ಥೆ ಮಾಡಲು 3 ಕಿ.ಮೀ ಉದ್ದದ ಕಾಲುವೆ ನಿರ್ಮಿಸಿದ ರೈತನಿಗೆ ತಮ್ಮ ಸಹಾಯಹಸ್ತ ಚಾಚಿದ್ದಾರೆ. ತನ್ನ ಕೃಷಿಭೂಮಿಗೆ ನೀರಾವರಿ ವ್ಯವಸ್ಥೆ ಮಾಡಲು 30 ವರ್ಷಗಳ ಅವಧಿಯಲ್ಲಿ 3 ಕಿ.ಮೀ ಉದ್ದದ ಕಾಲುವೆಯನ್ನು ಒಂಟಿಯಾಗಿ ತೋಡಿದ್ದ ರೈತನಿಗೆ ಆನಂದ್ ಮಹೀಂದ್ರಾ ಮಾನ್ಯತೆಯ […]

30 ವರ್ಷದಲ್ಲಿ 3 ಕಿ.ಮಿ ಉದ್ದದ ಕಾಲುವೆ ತೋಡಿದ ರೈತನ ಸ್ವಪ್ರಯತ್ನಕ್ಕೆ ಸಿಕ್ತು ಭರ್ಜರಿ ಗಿಫ್ಟ್​!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 20, 2020 | 11:34 AM

Share

ಪಾಟ್ನಾ: ದೇಶದ ಪ್ರತಿಷ್ಠಿತ ಮಹೀಂದ್ರಾ ಸಂಸ್ಥೆಯ ಅಧ್ಯಕ್ಷರಾದ ಆನಂದ್ ಮಹೀಂದ್ರಾ ಅರ್ಹರನ್ನು ಗುರುತಿಸಿ ಅವರನ್ನು ಗೌರವಿಸುವ ತಮ್ಮ ನಿಸ್ವಾರ್ಥ ಕಾರ್ಯವನ್ನು ಮುಂದುವರೆಸಿದ್ದಾರೆ. ಈ ಬಾರಿ, ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ತನ್ನ ಕೃಷಿಭೂಮಿಗೆ ನೀರಾವರಿ ವ್ಯವಸ್ಥೆ ಮಾಡಲು 3 ಕಿ.ಮೀ ಉದ್ದದ ಕಾಲುವೆ ನಿರ್ಮಿಸಿದ ರೈತನಿಗೆ ತಮ್ಮ ಸಹಾಯಹಸ್ತ ಚಾಚಿದ್ದಾರೆ.

ತನ್ನ ಕೃಷಿಭೂಮಿಗೆ ನೀರಾವರಿ ವ್ಯವಸ್ಥೆ ಮಾಡಲು 30 ವರ್ಷಗಳ ಅವಧಿಯಲ್ಲಿ 3 ಕಿ.ಮೀ ಉದ್ದದ ಕಾಲುವೆಯನ್ನು ಒಂಟಿಯಾಗಿ ತೋಡಿದ್ದ ರೈತನಿಗೆ ಆನಂದ್ ಮಹೀಂದ್ರಾ ಮಾನ್ಯತೆಯ ಬಹುಮಾನವನ್ನು ನೀಡಿದ್ದಾರೆ.

ಬಿಹಾರದ ಗಯಾ ಜಿಲ್ಲೆಯ ರೈತ ಲೌಂಗಿ ಭುಯಾನ್ ತನ್ನ ಕೃಷಿಭೂಮಿಗೆ ನೀರಿನ ವ್ಯವಸ್ಥೆ ಕಲ್ಪಿಸಲು ಕಳೆದ 30 ವರ್ಷಗಳಲ್ಲಿ 3 ಕಿ.ಮೀ ಉದ್ದದ ಕಾಲುವೆಯನ್ನು ಒಂಟಿಯಾಗಿ ತೋಡಿದ್ದಾನೆ. ಲೌಂಗಿ ಭುಯಾನ್​ರ ಈ ಕಾರ್ಯವನ್ನು ಕಂಡ ಆನಂದ್​ ಮಹೀಂದ್ರಾ ಇದೀಗ, ರೈತನಿಗೆ ಒಂದು ಮಹೀಂದ್ರಾ ಟ್ರ್ಯಾಕ್ಟರ್​ನ ಉಡುಗೊರೆಯಾಗಿ ನೀಡಿದ್ದಾರೆ.

ಮಹೀಂದ್ರಾ ಸಂಸ್ಥೆಯ ಪ್ರಾದೇಶಿಕ ವ್ಯಾಪಾರಿ ಸಿದ್ಧಿನಾಥ್ ವಿಶ್ವಕರ್ಮ ಲಾಂಗಿ ಭುಯಾನ್​ಗೆ ಕಳೆದ ಶನಿವಾರ ಮಹೀಂದ್ರಾ ಟ್ರ್ಯಾಕ್ಟರ್​ನ ಹಸ್ತಾಂತರಿಸಿದ್ದಾರೆ.

Published On - 11:28 am, Sun, 20 September 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು