AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಫೋಟೋದಲ್ಲಿರುವವರು ಯಾರು ಗುರುತಿಸಬಲ್ಲಿರಾ?-ಸಿನಿಮಾ ನಿರ್ಮಾಣದ ಕನಸು ಹೊತ್ತಿದ್ದ, ಇಂದಿನ ಖ್ಯಾತ ಉದ್ಯಮಿ ಇವರು

ಥ್ರೋಬ್ಯಾಕ್ ಫೋಟೋ ಶೇರ್​ ಮಾಡುತ್ತಿದ್ದಂತೆ ಅದು ತುಂಬ ವೈರಲ್​ ಆಗುತ್ತಿದೆ. ಆಗಲೇ ತುಂಬ ಚೆನ್ನಾಗಿದ್ದಿರಿ..ನಿಮ್ಮ ಹೇರ್​ ಸ್ಟೈಲ್​ ಚೆನ್ನಾಗಿತ್ತು ಎಂಬಿತ್ಯಾದಿ ಕಮೆಂಟ್​ಗಳನ್ನೂ ನೆಟ್ಟಿಗರು ಕೊಟ್ಟಿದ್ದಾರೆ.

ಈ ಫೋಟೋದಲ್ಲಿರುವವರು ಯಾರು ಗುರುತಿಸಬಲ್ಲಿರಾ?-ಸಿನಿಮಾ ನಿರ್ಮಾಣದ ಕನಸು ಹೊತ್ತಿದ್ದ, ಇಂದಿನ ಖ್ಯಾತ ಉದ್ಯಮಿ ಇವರು
ತಮ್ಮ ಹಳೇ ಫೋಟೋ ಶೇರ್ ಮಾಡಿಕೊಂಡ ಉದ್ಯಮಿ
TV9 Web
| Edited By: |

Updated on: Jan 20, 2022 | 5:21 PM

Share

ಈ ಫೋಟೋ ನೋಡಿ..ಇವರೊಬ್ಬರು ಭಾರತದ ಖ್ಯಾತ ಉದ್ಯಮಿ. ಸಾಮಾಜಿಕ ಜಾಲತಾಣಗಳಲ್ಲಿ ತುಂಬ ಸಕ್ರಿಯರಾಗಿರುತ್ತಾರೆ. ಪರೋಪಕಾರಿಯೂ ಹೌದು. ಇವರ ಅದೆಷ್ಟೋ ಒಳ್ಳೆಯ ಕಾರ್ಯಗಳನ್ನು ದೇಶದ ಜನರು ಮೆಚ್ಚಿಕೊಂಡಿದ್ದಾರೆ. ತಮ್ಮ ಸೋಷಿಯಲ್ ಮೀಡಿಯಾ ಅಕೌಂಟ್​​ನಲ್ಲಿ ಸದಾ ಒಂದಿಲ್ಲೊಂದು ಉಲ್ಲಾಸಭರಿತ, ಮನಸಿಗೆ ಮುದ ಕೊಡುವ ವಿಡಿಯೋ, ಫೋಟೋಗಳನ್ನು ಶೇರ್ ಮಾಡಿಕೊಂಡು ತಮ್ಮ ಫಾಲೋವರ್ಸ್​ನ್ನು ಖುಷಿಯಾಗಿಡುವ ಈ ಉದ್ಯಮಿ ಇದೀಗ ತಮ್ಮದೇ ಫೋಟೋ ಹಂಚಿಕೊಂಡು ಒಂದು ಹೊಸ ವಿಷಯ ಹೇಳಿದ್ದಾರೆ. ನಿಮಗೆ ಗೊತ್ತಾಯಿತಾ ಈ ವ್ಯಕ್ತಿ ಯಾರೆಂದು?

ಹಾಗೊಮ್ಮೆ ಗೊತ್ತಾಗದೆ ಇದ್ದರೆ ನಾವೇ ಹೇಳುತ್ತೇವೆ..ಇವರು ಬೇರೆ ಯಾರೂ ಅಲ್ಲ. ಮುಂಬೈನ ಉದ್ಯಮಿ ಆನಂದ್ ಮಹೀಂದ್ರಾ. ತಮ್ಮ ಹಳೇ ಫೋಟೋವೊಂದನ್ನು ಟ್ವಿಟರ್​​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ನಾನು ಚಲನಚಿತ್ರ ನಿರ್ದೇಶಕ ಆಗಬೇಕು ಎಂದುಕೊಂಡಿದ್ದೆ. ಅದಕ್ಕನುಗುಣವಾಗಿ ನಾನು ಕಾಲೇಜಿನಲ್ಲೂ ವಿದ್ಯಾಭ್ಯಾಸ ಮಾಡಿದೆ. ಆ ತರಬೇತಿಯ ಒಂದು ಭಾಗವಾಗಿ ಇಂದೋರ್​​ನ ಸಮೀಪ ಒಂದು ದುರ್ಗಮ ಹಳ್ಳಿಯಲ್ಲಿ ಸಾಕ್ಷ್ಯಚಿತ್ರವನ್ನು ಶೂಟಿಂಗ್ ಮಾಡುವಾಗ ತೆಗೆದ ನನ್ನ ಫೋಟೋ ಇದು. ಆಗ ನಾನು 16 ಎಂಎಂ ಕ್ಯಾಮರಾ ಬಳಸಿದ್ದೆ. ಆದರೆ ಯಾರಾದರೂ ಆ ಕಾಲದವರು ಇದ್ದರೆ ನಾನು 16 ಎಂಎಂನ ಯಾವ ಕ್ಯಾಮರಾ ಬಳಸಿದ್ದೆ ಎಂದು ಹೇಳಬಲ್ಲಿರಾ ಎಂದು ಪ್ರಶ್ನಿಸಿದ್ದಾರೆ. ಹಾಗೇ, ನಾನು 77 ಕುಂಭಮೇಳ ಎಂಬ ಸಿನಿಮಾ ಪ್ರಬಂಧವನ್ನೂ ಬರೆದಿದ್ದೆ ಎಂದು ತಿಳಿಸಿದ್ದಾರೆ. ಅವರು ತಮ್ಮ ಥ್ರೋಬ್ಯಾಕ್ ಫೋಟೋ ಶೇರ್​ ಮಾಡುತ್ತಿದ್ದಂತೆ ಅದು ತುಂಬ ವೈರಲ್​ ಆಗುತ್ತಿದೆ. ಆಗಲೇ ತುಂಬ ಚೆನ್ನಾಗಿದ್ದಿರಿ..ನಿಮ್ಮ ಹೇರ್​ ಸ್ಟೈಲ್​ ಚೆನ್ನಾಗಿತ್ತು ಎಂಬಿತ್ಯಾದಿ ಕಮೆಂಟ್​ಗಳನ್ನೂ ನೆಟ್ಟಿಗರು ಕೊಟ್ಟಿದ್ದಾರೆ.

ಇದನ್ನೂ ಓದಿ: ICC Men Test Team: ಐಸಿಸಿ ಟೆಸ್ಟ್ ತಂಡ ಪ್ರಕಟ: ಟೀಮ್ ಇಂಡಿಯಾದ ಮೂವರಿಗೆ ಸ್ಥಾನ

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?