AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತನಾಗ್ ಎನ್‌ಕೌಂಟರ್: ಹುತಾತ್ಮ ಕರ್ನಲ್ ಮನ್‌ಪ್ರೀತ್ ಸಿಂಗ್​​ಗೆ ಮಗನ ಸೆಲ್ಯೂಟ್, ಕಂಬನಿಯ ವಿದಾಯ

ಭಾರತೀಯ ಸೇನೆಯ 19 ರಾಷ್ಟ್ರೀಯ ರೈಫಲ್ಸ್ ಘಟಕದ ಕಮಾಂಡಿಂಗ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಕರ್ನಲ್ ಮನ್‌ಪ್ರೀತ್, ಮೇಜರ್ ಆಶಿಶ್ ಧೋಂಚಕ್ ಮತ್ತು ಜಮ್ಮು ಮತ್ತು ಕಾಶ್ಮೀರದ ಡಿಎಸ್​​ಪಿ ಹುಮಾಯೂನ್ ಭಟ್ ಕೋಕರ್‌ನಾಗ್‌ನ ಗಡೋಲ್‌ನಲ್ಲಿ ಭಯೋತ್ಪಾದಕರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಗಾಯಗೊಂಡು ಹುತಾತ್ಮರಾಗಿದ್ದಾರೆ. ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಭಾಗವಾಗಿದ್ದ ಮತ್ತೊಬ್ಬ ಯೋಧರೂ ಹುತಾತ್ಮರಾಗಿದ್ದಾರೆ

ಅನಂತನಾಗ್ ಎನ್‌ಕೌಂಟರ್: ಹುತಾತ್ಮ ಕರ್ನಲ್ ಮನ್‌ಪ್ರೀತ್ ಸಿಂಗ್​​ಗೆ ಮಗನ ಸೆಲ್ಯೂಟ್, ಕಂಬನಿಯ ವಿದಾಯ
ಕರ್ನಲ್ ಮನ್‌ಪ್ರೀತ್ ಸಿಂಗ್ ಪುತ್ರ ಸೆಲ್ಯೂಟ್ ಮಾಡುತ್ತಿರುವುದು
Follow us
ರಶ್ಮಿ ಕಲ್ಲಕಟ್ಟ
|

Updated on: Sep 15, 2023 | 9:01 PM

ಶ್ರೀನಗರ ಸೆಪ್ಟೆಂಬರ್ 15: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ (Anantnag encounter) ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ವೇಳೆ ಹುತಾತ್ಮರಾದ ಕರ್ನಲ್ ಮನ್‌ಪ್ರೀತ್ ಸಿಂಗ್  (Colonel Manpreet Singh)ಅಂತಿಮ ಕ್ರಿಯೆ ವೇಳೆ ದೇಶಕ್ಕೆ ದೇಶವೇ ಕಂಬನಿ ಮಿಡಿದಿದೆ. ಪಂಜಾಬ್‌ನ ಮುಲ್ಲನ್‌ಪುರದಲ್ಲಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಕರ್ನಲ್ ಮನ್‌ಪ್ರೀತ್ ಅವರು ಎರಡು ವರ್ಷದ ಮಗಳು ಮತ್ತು ಏಳು ವರ್ಷದ ಮಗನನ್ನು ಅಗಲಿದ್ದಾರೆ. ಪರಿಸ್ಥಿತಿಯ ಗಂಭೀರತೆಯನ್ನು ಅರ್ಥಮಾಡಿಕೊಳ್ಳಲು ತುಂಬಾ ಚಿಕ್ಕವರಾಗಿದ್ದರೂ ಈ ಮಕ್ಕಳು ರಾಷ್ಟ್ರಕ್ಕಾಗಿ ಪ್ರಾಣ ತ್ಯಾಗ ಮಾಡಿದ ಕರ್ನಲ್ ಮನ್‌ಪ್ರೀತ್ ಅವರಿಗೆ ಗೌರವ ಸಲ್ಲಿಸಿದರು. ಸೇನಾಪಡೆಯ ಉಡುಗೆ ಧರಿಸಿದ್ದ ಅವರ ಪುತ್ರ ಕಬೀರ್ ಪಾರ್ಥಿವ ಶರೀರಕ್ಕೆ ಸೆಲ್ಯೂಟ್ ಮಾಡಿದಾಗ ಅಲ್ಲಿದ್ದವರು ಭಾವುಕರಾಗಿದ್ದು, ಈ ದೃಶ್ಯ ನೋಡಿದವರ ಕಣ್ಣು ಒದ್ದೆಯಾಗದೇ ಇರದು.

ಭಾರತೀಯ ಸೇನೆಯ 19 ರಾಷ್ಟ್ರೀಯ ರೈಫಲ್ಸ್ ಘಟಕದ ಕಮಾಂಡಿಂಗ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಕರ್ನಲ್ ಮನ್‌ಪ್ರೀತ್, ಮೇಜರ್ ಆಶಿಶ್ ಧೋಂಚಕ್ ಮತ್ತು ಜಮ್ಮು ಮತ್ತು ಕಾಶ್ಮೀರದ ಡಿಎಸ್​​ಪಿ ಹುಮಾಯೂನ್ ಭಟ್ ಕೋಕರ್‌ನಾಗ್‌ನ ಗಡೋಲ್‌ನಲ್ಲಿ ಭಯೋತ್ಪಾದಕರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಗಾಯಗೊಂಡು ಹುತಾತ್ಮರಾಗಿದ್ದಾರೆ. ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಭಾಗವಾಗಿದ್ದ ಮತ್ತೊಬ್ಬ ಯೋಧರೂ ಹುತಾತ್ಮರಾಗಿದ್ದಾರೆ

ಕರ್ನಲ್ ಮನ್‌ಪ್ರೀತ್ ಅವರ ಪಾರ್ಥಿವ ಶರೀರವನ್ನು ರಾಷ್ಟ್ರಧ್ವಜದಲ್ಲಿ ಹೊದಿಸಲಾಗಿದ್ದು, ಅವರ ಸ್ಥಳೀಯ ಗ್ರಾಮವಾದ ಮುಲ್ಲನ್‌ಪುರದಲ್ಲಿ ಸಂಪೂರ್ಣ ಮಿಲಿಟರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ಮಾಡಲಾಗಿದೆ.

ಇದನ್ನೂ ಓದಿ: ಅನಂತ್​ನಾಗ್​ನಲ್ಲಿ ಮುಂದುವರೆದ ಎನ್​ಕೌಂಟರ್​ನಲ್ಲಿ ಮತ್ತೋರ್ವ ಯೋಧ ಹುತಾತ್ಮ

ಈ ಮೂರನೇ ತಲೆಮಾರಿನ ಭಾರತೀಯ ಸೇನಾ ಸಿಬ್ಬಂದಿಗೆ ಅಂತಿಮ ವಿದಾಯ ಹೇಳಲು ಒಟ್ಟುಗೂಡಿದ ಕುಟುಂಬ ಸದಸ್ಯರು ಮತ್ತು ಸಹ ಅಧಿಕಾರಿಗಳು ಸೇರಿದಂತೆ ಸಾವಿರಾರು ಜನರಲ್ಲಿ ಮಾಜಿ ಸೇನಾ ಮುಖ್ಯಸ್ಥ ಜನರಲ್ (ನಿವೃತ್ತ) ವಿಪಿ ಮಲಿಕ್ ಕೂಡ ಸೇರಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ