AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hanuma Jayanthi: ಉದ್ಯೋಗ ಖಾತ್ರಿ ಕಾಮಗಾರಿ ಮಾಡುವಾಗ ಹನುಮ ಜಯಂತಿ ದಿನದಂದು ನಡೆಯಿತು ಪವಾಡ! ವಿಡಿಯೋ ಇದೆ

ಈ ರಾಮ ಲಕ್ಷ್ಮಣ ವಿಗ್ರಹಗಳನ್ನು 1999 ರಲ್ಲಿ ತಿಮ್ಮಾಪುರ ರಾಮ ಮಂದಿರದಿಂದ ಕಳವು ಮಾಡಲಾಗಿದೆ ಎಂದು ಊರಿನ ಹಿರಿಯರು ತಿಳಿಸಿದ್ದಾರೆ. ವಿಗ್ರಹಗಳು ಇರುವ ಕಡೆ ರಾಮಮಂದಿರ ನಿರ್ಮಾಣವಾಗಬೇಕು ಎಂದೂ ಸ್ಥಳೀಯರು ಆಗ್ರಹಿಸುತ್ತಿದ್ದಾರೆ.

Hanuma Jayanthi: ಉದ್ಯೋಗ ಖಾತ್ರಿ ಕಾಮಗಾರಿ ಮಾಡುವಾಗ ಹನುಮ ಜಯಂತಿ ದಿನದಂದು ನಡೆಯಿತು ಪವಾಡ! ವಿಡಿಯೋ ಇದೆ
ಉದ್ಯೋಗ ಖಾತ್ರಿ ಕಾಮಗಾರಿ ಮಾಡುವಾಗ ಹನುಮ ಜಯಂತಿ ದಿನದಂದು ಪವಾಡ!
Follow us
TV9 Web
| Updated By: ಸಾಧು ಶ್ರೀನಾಥ್​

Updated on:Apr 07, 2023 | 2:31 PM

ತೆಲಂಗಾಣದ ಮಂಚಿರ್ಯಾಲ ಜಿಲ್ಲೆಯಲ್ಲಿ ಕುತೂಹಲಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಉದ್ಯೋಗ ಖಾತ್ರಿ ಕಾಮಗಾರಿ (Mahatma Gandhi National Rural Employment Guarantee Act 2005 -MGNREGA) ಮಾಡುವಾಗ ಹನುಮ ಜಯಂತಿ (Hanuman Jayanthi) ಸಂದರ್ಭದಲ್ಲಿ ರಾಮ ಲಕ್ಷ್ಮಣರ ಪುರಾತನ ವಿಗ್ರಹಗಳು ಪತ್ತೆಯಾಗಿವೆ. ಜಿಲ್ಲೆಯ ಜನ್ನಾರಾಂ ಮಂಡಲದ ತಪಾಲಪುರ ಚೆಕ್ ಪೋಸ್ಟ್ ಬಳಿ ಈ ಘಟನೆ ನಡೆದಿದೆ. ಉದ್ಯೋಗ ಖಾತ್ರಿ ಕಾಮಗಾರಿ ನಡೆಸುವಾಗ ತಪಾಲ್ಪುರ ಚೆಕ್ ಪೋಸ್ಟ್ ಬಳಿ ಸ್ಥಳೀಯ ಜನರಿಗೆ ಇದು ವಿಸ್ಮಯಕಾರಿಯಾಗಿದೆ.

ಮಂಚಿರ್ಯಾಲ ಜಿಲ್ಲೆಯಲ್ಲಿ ಕುತೂಹಲಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಉದ್ಯೋಗ ಖಾತ್ರಿ ಕಾಮಗಾರಿ ಮಾಡುವಾಗ ರಾಮ ಲಕ್ಷ್ಮಣರ ಪುರಾತನ ಮೂರ್ತಿಗಳು ಪತ್ತೆಯಾಗಿವೆ. ಜಿಲ್ಲೆಯ ಜನ್ನಾರಾಂ ಮಂಡಲದ ತಪಾಲಪುರ ಚೆಕ್ ಪೋಸ್ಟ್ ಬಳಿ ಘಟನೆ ಬೆಳಕಿಗೆ ಬಂದಿದೆ. ವಿವರಗಳು ಈ ಕೆಳಗಿನಂತಿವೆ. ಉದ್ಯೋಗ ಖಾತ್ರಿ ಕಾಮಗಾರಿಯ ಭಾಗವಾಗಿ ಸ್ಥಳೀಯ ಜನರು ತಪಾಲಪುರ ಚೆಕ್ ಪೋಸ್ಟ್ ಬಳಿ ಕೆಲಸ ನಡೆಯುತ್ತಿದೆ. ಕೆಲ ಕಾರ್ಮಿಕರು ಸಲಿಕೆ ಹಿಡಿದು ಭೂಮಿಯನ್ನು ಅಗೆಯುತ್ತಿದ್ದಾಗ ವಿಶೇಷ ಆಕಾರವೊಂದು ಕಾಣಿಸಿದೆ.

ಮಣ್ಣು ಅಗೆದಾಗ ರಾಮ ಲಕ್ಷ್ಮಣರ ಪುರಾತನ ವಿಗ್ರಹಗಳು ಸಿಕ್ಕಿವೆ. ತಕ್ಷಣ ಊರಿನ ಮಂದಿಗೆ ಸುದ್ದಿ ರವಾನಿಸಿದ್ದಾರೆ. ಎಲ್ಲರೂ ಬಂದಾಗ ಆ ರಾಮಲಕ್ಷ್ಮಣ ಮೂರ್ತಿಗಳನ್ನು ಹೊರತೆಗೆಯಲಾಗಿದೆ. ಸ್ಥಳದಲ್ಲಿಯೇ ಜಲಾಭಿಷೇಕ ಮಾಡಿ, ಪುಣ್ಯಕಾರ್ಯ ಮಾಡಲಾಗಿದೆ. ಅರಿಶಿನ, ಕುಂಕುಮ, ಹೂವು, ತೆಂಗಿನಕಾಯಿ ಹೊಡೆದು ಪೂಜೆ ಮಾಡಲಾಗಿದೆ. ಗ್ರಾಮ ಪಂಚಾಯತ್​ ಅಧಿಕಾರಿಗಳಿಗೆ ವಿಷಯ ತಿಳಿಸಿದಾಗ ಅವರೂ ಸಹ ಸ್ಥಳಕ್ಕೆ ಬಂದು ಪರಿಶೀಲಿಸಿದರು.

ಇದನ್ನೂ ಓದಿ: Kiran Kumar Reddy Joins BJP: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಬಿಜೆಪಿಗೆ ಸೇರ್ಪಡೆ 

ಏತನ್ಮಧ್ಯೆ, ಈ ರಾಮ ಲಕ್ಷ್ಮಣ ವಿಗ್ರಹಗಳನ್ನು 1999 ರಲ್ಲಿ ತಿಮ್ಮಾಪುರ ರಾಮ ಮಂದಿರದಿಂದ ಕಳವು ಮಾಡಲಾಗಿದೆ ಎಂದು ಊರಿನ ಹಿರಿಯರು ತಿಳಿಸಿದ್ದಾರೆ. ವಿಗ್ರಹಗಳು ಇರುವ ಕಡೆ ರಾಮಮಂದಿರ ನಿರ್ಮಾಣವಾಗಬೇಕು ಎಂದೂ ಸ್ಥಳೀಯರು ಆಗ್ರಹಿಸುತ್ತಿದ್ದಾರೆ. ಆದರೆ, ಉತ್ಖನನದಲ್ಲಿ ಪತ್ತೆಯಾದ ಈ ವಿಗ್ರಹಗಳ ಕಾಲಘಟ್ಟ ದೃಢೀಕರಿಸಲು ಪರಿಶೀಲನೆ ನಡೆಸಬೇಕು ಎನ್ನುತ್ತಾರೆ ಕಂದಾಯ ಅಧಿಕಾರಿಗಳು. ಅಧಿಕಾರಿಗಳು ಯಾವ ರೀತಿಯ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:30 pm, Fri, 7 April 23

ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ