AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andaman Earthquake: ಅಂಡಮಾನ್​ನಲ್ಲಿ 4.9 ತೀವ್ರತೆಯ ಭಾರಿ ಭೂಕಂಪ

ಅಂಡಮಾನ್​ನಲ್ಲಿ 4.9 ತೀವ್ರತೆಯ ಭಾರಿ ಭೂಕಂಪ ಸಂಭವಿಸಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಈ ಮಾಹಿತಿಯನ್ನು ನೀಡಿದೆ. ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 4.9 ಎಂದು ಅಳೆಯಲಾಗಿದೆ.

Andaman Earthquake: ಅಂಡಮಾನ್​ನಲ್ಲಿ 4.9 ತೀವ್ರತೆಯ ಭಾರಿ ಭೂಕಂಪ
ಭೂಕಂಪ
ನಯನಾ ರಾಜೀವ್
|

Updated on: Jan 31, 2023 | 9:20 AM

Share

ಅಂಡಮಾನ್​ನಲ್ಲಿ 4.9 ತೀವ್ರತೆಯ ಭಾರಿ ಭೂಕಂಪ ಸಂಭವಿಸಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಈ ಮಾಹಿತಿಯನ್ನು ನೀಡಿದೆ. ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 4.9 ಎಂದು ಅಳೆಯಲಾಗಿದೆ. ಭೂಕಂಪದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಸೋಮವಾರ ರಾತ್ರಿ 12.15 ಕ್ಕೆ ಕಂಪನದ ಅನುಭವವಾಯಿತು ಮತ್ತು ಅದರ ಕೇಂದ್ರಬಿಂದು ಅಂಡಮಾನ್ ಸಮುದ್ರದಲ್ಲಿದೆ. ಭೂಕಂಪದ ಆಳ 77 ಕಿ.ಮೀ. ಇದೆ ಎಂದು ಹೇಳಲಾಗಿದೆ.

4.9 ತೀವ್ರತೆಯ ಭೂಕಂಪ ಸಂಭವಿಸಿದೆ; ಅಕ್ಷಾಂಶ: 12.60 ಮತ್ತು ರೇಖಾಂಶ: 93.42, ಆಳ: 77 ಕಿಮೀ, ಸ್ಥಳ: ಅಂಡಮಾನ್ ಸಮುದ್ರ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಈ ಹಿಂದೆಯೂ ಸಹ ಪ್ರಬಲ ಭೂಕಂಪನದ ಅನುಭವವಾಗಿತ್ತು.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ 253 ಕಿಮೀ ಎಸ್‌ಎಸ್‌ಇ ದೂರದಲ್ಲಿರುವ ಪೋರ್ಟ್ ಬ್ಲೇರ್‌ನಲ್ಲಿ ನವೆಂಬರ್ 10 ರಂದು ಮುಂಜಾನೆ 2:29 ಕ್ಕೆ 4.3 ತೀವ್ರತೆಯ ಭೂಕಂಪ ಸಂಭಿಸಿತ್ತು. ಭೂಕಂಪದ ಆಳವು ನೆಲದಿಂದ 10 ಕಿ.ಮೀ. ಆದರೆ, ಈ ಭೂಕಂಪದಿಂದ ಯಾವುದೇ ಹಾನಿ ಸಂಭವಿಸಿರಲಿಲ್ಲ.

ಮತ್ತಷ್ಟು ಓದಿ: Pakistan Earthquake: ಪಾಕಿಸ್ತಾನದಲ್ಲಿ 4.1 ತೀವ್ರತೆಯ ಪ್ರಬಲ ಭೂಕಂಪ

ಸೆಪ್ಟೆಂಬರ್ 3 ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭೂಕಂಪನದ ಅನುಭವವಾಗಿತ್ತು. ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 4.4 ಎಂದು ಅಳೆಯಲಾಗಿದೆ. ಇದಕ್ಕೂ ಮುನ್ನ ಸೆಪ್ಟೆಂಬರ್ 2 ರಂದು ಭೂಕಂಪನದ ಅನುಭವವಾಗಿತ್ತು.

ಸೋಮವಾರ ಬೆಳಗ್ಗೆ ಗುಜರಾತ್‌ನ ಕಚ್ ಜಿಲ್ಲೆಯಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿದೆ. ಅಧಿಕಾರಿಗಳ ಪ್ರಕಾರ, ಭೂಕಂಪದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್