AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ಬಳಿಕ, ಆಂಧ್ರದಲ್ಲೂ ಆನ್​ಲೈನ್ ಗ್ಯಾಂಬ್ಲಿಂಗ್ ಬಂದ್​! ಕರ್ನಾಟಕದಲ್ಲಿ ಯಾವಾಗ?

ತಮಿಳುನಾಡು ಬಳಿಕ ಇದೀಗ ಆಂಧ್ರದಲ್ಲೂ ಆನ್​ಲೈನ್ ಜೂಜಿನ ವಿರುದ್ಧ ಮಸೂದೆ ಅಂಗೀಕಾರವಾಗಿದೆ. ಆಂಧ್ರ ಪ್ರದೇಶ ಗೇಮಿಂಗ್ ಬಿಲ್ 2020 ಜಾರಿಗೊಳಿಸಲು ವಿಧಾನಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ.

ತಮಿಳುನಾಡು ಬಳಿಕ, ಆಂಧ್ರದಲ್ಲೂ ಆನ್​ಲೈನ್ ಗ್ಯಾಂಬ್ಲಿಂಗ್ ಬಂದ್​! ಕರ್ನಾಟಕದಲ್ಲಿ ಯಾವಾಗ?
ಆಂಧ್ರ ಸಿಎಂ ಜಗನ್​ಮೋಹನ್ ರೆಡ್ಡಿ
TV9 Web
| Edited By: |

Updated on:Apr 07, 2022 | 5:44 PM

Share

ತಮಿಳುನಾಡು ಸರ್ಕಾರದ ಬಳಿಕ ಇದೀಗ ಆಂಧ್ರ ಪ್ರದೇಶದಲ್ಲೂ ಆನ್​ಲೈನ್ ಜೂಜಿನ ವಿರುದ್ಧ ಮಸೂದೆ ಅಂಗೀಕಾರವಾಗಿದೆ. ಆಂಧ್ರ ಪ್ರದೇಶ ಗೇಮಿಂಗ್ ಬಿಲ್ 2020ಯನ್ನು ಜಾರಿಗೊಳಿಸಲು ವಿಧಾನಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ.

ಈ ಹಿಂದೆ ಆಂಧ್ರದಲ್ಲಿ, ಆನ್​ಲೈನ್ ಜೂಜಿನ ಸಾಲ ತೀರಿಸಲಾಗದೆ ಕೆಲವು ಯುವಕರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣಗಳ ಬೆನ್ನಲ್ಲೇ ಸರ್ಕಾರ ಆನ್​ಲೈನ್ ಜೂಜಾಟಗಳಿಗೆ ನಿರ್ಬಂಧ ಹೇರುವ ಮನಮಾಡಿದೆ.

ಕರ್ನಾಟಕದಲ್ಲಿ ಯಾವಾಗ? ಆನ್​ಲೈನ್ ಜೂಜಾಟಗಳನ್ನು ಬ್ಯಾನ್ ಮಾಡುವ ಬಗ್ಗೆ ಕರ್ನಾಟಕ ಸರ್ಕಾರವು ಹೇಳಿಕೆ ನೀಡುತ್ತಲೇ ಬಂದಿದ್ದು, ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ. ಜೂಜಿನಲ್ಲಿ ಪಾಲ್ಗೊಳ್ಳುವ ಯುವಕರಿಂದ ಅವರ ಮನೆಯವರೂ ತೊಂದರೆ ಅನುಭವಿಸುತ್ತಿದ್ದಾರೆ. ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ತಮಿಳುನಾಡು, ಆಂಧ್ರದ ಬಳಿಕ ಕರ್ನಾಟಕದಲ್ಲೂ ಆನ್​ಲೈನ್ ಗ್ಯಾಂಬ್ಲಿಂಗ್ ವಿರುದ್ಧ ಮಸೂದೆ ರಚಿಸಬೇಕು ಎಂಬ ಕೂಗು ಜೋರಾಗುತ್ತಿದೆ.

ಇದನ್ನೂ ಓದಿ: ಆನ್​ಲೈನ್​ ಗ್ಯಾಂಬ್ಲಿಂಗ್​ ಚಟದಿಂದ ಹೊರಬರಲು ಇದು ಸಕಾಲ..

ಸರ್ಕಾರ ಪಾರದರ್ಶಿಕವಾಗಿ ವ್ಯವಹರಿಸಲಿದೆ ಮಸೂದೆಯ ಬಗ್ಗೆ ಮಾತನಾಡಿದ ಆಂಧ್ರ ಸಿಎಂ ವೈ.ಎಸ್. ಜಗನ್​ಮೋಹನ್ ರೆಡ್ಡಿ, ಆನ್​ಲೈನ್ ಜೂಜಿನಲ್ಲಿ ತೊಡಗಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅವರ ಸಾಮಾಜಿಕ ಸ್ಥಾನಮಾನಗಳನ್ನು ಬದಿಗಿರಿಸಿ ವ್ಯವಹರಿಸಲಾಗುವುದು. ಈ ವಿಚಾರದಲ್ಲಿ ಸರ್ಕಾರ ಪಾರದರ್ಶಿಕವಾಗಿ ವ್ಯವಹರಿಸಲಿದೆ ಎಂದಿದ್ದಾರೆ.

ಕೆಲವು ದಿನಗಳ ಹಿಂದೆ ಮಂತ್ರಿಯೊಬ್ಬರ ದೂರ ಸಂಬಂಧಿ ಆನ್​ಲೈನ್ ಜೂಜಿನಲ್ಲಿ ತೊಡಗಿಕೊಂಡಿದ್ದು ತಿಳಿದುಬಂದಿತ್ತು. ಅವರ ವಿರುದ್ಧವೂ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.

ಆನ್​ಲೈನ್ ಆಟಗಳಿಂದಾಗಿ ವಂಚನೆ, ಕಳ್ಳತನ ಮುಂತಾದ ಅಪರಾಧ ಕೃತ್ಯಗಳೂ ಹೆಚ್ಚುತ್ತವೆ ಎಂದು ಆಂಧ್ರ ಗೃಹ ಸಚಿವೆ ಎಮ್. ಸುಚರಿತಾ ಅಭಿಪ್ರಾಯಪಟ್ಟಿದ್ದಾರೆ.

ಅಪರಾಧಿಗಳಿಗೆ ಏನು ಶಿಕ್ಷೆ ಅಪರಾಧಿಗಳಿಗೆ 5 ಸಾವಿರ ದಂಡ ಮತ್ತು ಒಂದು ವರ್ಷದ ಜೈಲು ಶಿಕ್ಷೆಯನ್ನು ನಿಗಧಿಪಡಿಸಲಾಗಿದ್ದು, ಅಪರಾಧ ಮರುಕಳಿಸಿದರೆ ಅಂಥವರಿಗೆ 10 ಸಾವಿರ ದಂಡ ಮತ್ತು ಎರಡು ವರ್ಷಗಳ ಜೈಲು ಶಿಕ್ಷೆ ನೀಡುವ ಬಗ್ಗೆ ತೀರ್ಮಾನಿಸಲಾಗಿದೆ. ಜಾಮೀನು ರಹಿತ ಶಿಕ್ಷೆ ಇದಾಗಿದೆ.

ಆನ್​ಲೈನ್​ ಗ್ಯಾಬ್ಲಿಂಗ್ ಜಾಹಿರಾತು: ನಟ ಸುದೀಪ್​ಗೆ ಮದ್ರಾಸ್ ಹೈಕೋರ್ಟ್​ನಿಂದ ನೋಟಿಸ್

ಇದನ್ನೂ ಓದಿ: OTT Platforms ‘ಮುಚ್ಚುಮರೆ ಇಲ್ಲದ’ ಆನ್​ಲೈನ್ ವೇದಿಕೆಗಳಿಗೆ ಮೂಗುದಾರ ಹಾಕಬೇಕಾ?!

Published On - 11:14 am, Wed, 2 December 20

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ